AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ

ಹೊಸದಾಗಿ ಬಾಡಿಗೆ ಮನೆ ಪಡೆದಿದ್ದ ಮೊದಲ ಮಗಳ ಮನೆಗೆ ಬಣ್ಣ ಹೊಡೆಯಲು ತೆರಳುತ್ತಿದ್ದ ಅಪ್ಪ ಮಹಮದ್ ಗೌಸ್ ಜೊತೆ ತಾನೂ ಬರುವುದಾಗಿ ಹೇಳಿದ್ದ ಎರಡನೇ ಮಗಳು ಶಹನಾಜ್​ಗೆ ಮನೆಯಲ್ಲಿಯೇ ಇರುವಂತೆ ಮಹಮದ್ ಗೌಸ್ ಸಲಹೆ ನೀಡಿ ತೆರಳಿದ್ದಾರೆ. ಆದರೆ ಮನೆಗೆ ಸಂಜೆ ಹಿಂದಿರುಗಿ ಬರುವಷ್ಟರಲ್ಲಿ ಮಗಳು ನೇಣಿಗೆ ಶರಣಾಗಿದ್ದಾಳೆ.

ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
preethi shettigar
|

Updated on:Mar 15, 2021 | 5:17 PM

Share

ಮೈಸೂರು: ಅಕ್ಕನ ಮನೆಗೆ ಕರೆದುಕೊಂಡು ಹೋಗದ ಹಿನ್ನೆಲೆಯಲ್ಲಿ ಮನನೊಂದು ತಂಗಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಡೆದಿದೆ. ತಂದೆ ತನ್ನನ್ನು ಅಕ್ಕನ ಮನೆಗೆ ಬಿಟ್ಟು ಹೋದರು ಎಂಬುವುದನ್ನೇ ಕಾರಣವಾಗಿಸಿಕೊಂಡ ಶಹನಾಜ್(17) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹೊಸದಾಗಿ ಬಾಡಿಗೆ ಮನೆ ಪಡೆದಿದ್ದ ಮೊದಲ ಮಗಳ ಮನೆಗೆ ಬಣ್ಣ ಹೊಡೆಯಲು ತೆರಳುತ್ತಿದ್ದ ಅಪ್ಪ ಮಹಮದ್ ಗೌಸ್ ಜೊತೆ ತಾನೂ ಬರುವುದಾಗಿ ಹೇಳಿದ್ದ ಎರಡನೇ ಮಗಳು ಶಹನಾಜ್​ಗೆ ಮನೆಯಲ್ಲಿಯೇ ಇರುವಂತೆ ಮಹಮದ್ ಗೌಸ್ ಸಲಹೆ ನೀಡಿ ತೆರಳಿದ್ದಾರೆ. ಆದರೆ ಮನೆಗೆ ಸಂಜೆ ಹಿಂದಿರುಗಿ ಬರುವಷ್ಟರಲ್ಲಿ ಮಗಳು ನೇಣಿಗೆ ಶರಣಾಗಿದ್ದಾಳೆ.

ಮೈಸೂರಿನಲ್ಲಿ ರೈತ ಅತ್ಮಹತ್ಯೆ: ಸಾಲಬಾಧೆ ಹಿನ್ನೆಲೆ ರೈತ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಹರವೆ ಗ್ರಾಮದ ಈಶ್ವರ(65) ನೇಣಿಗೆ ಶರಣಾಗಿದ್ದಾರೆ. ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ ಬೆಳೆದಿದ್ದ ಈಶ್ವರ ಅವರು ಇದಕ್ಕಾಗಿ ವಿವಿಧ ಬ್ಯಾಂಕುಗಳಲ್ಲಿ ಸುಮಾರು ₹3.80 ಲಕ್ಷ ಸಾಲ ಮಾಡಿದ್ದರು. ಆದರೆ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಮನನೊಂದ ಈಶ್ವರ ತಮ್ಮ ಜಮೀನಿನ ಬ್ಯಾರಲ್ ಹೌಸ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸದ್ಯ ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದಲ್ಲಿ ಮಹಿಳೆ ಸಾವು: ನಾದಿನಿಯರು, ಮೈದುನ ಹಾಗೂ ಮೈದುನನ ಪತ್ನಿಯರು ಸೇರಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದು, ಸದ್ಯ ಹಲ್ಲೆಗೊಳಗಾದ ಮಹಿಳೆ ಸಾವಿಗೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಿ.ಓಬೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಳೆದ ಶನಿವಾರ ಮಂಜುಳಮ್ಮ(31) ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾಗಿದ್ದ ಮಂಜುಳಮ್ಮ ಜಿಲ್ಲಾಸ್ಪತ್ರೆಗೆ ದಾಖಲಾಗಿದರು. ಆದರೆ ದುರಾದೃಷ್ಟವಶಾತ್ ಇಂದು ಮಂಜುಳಮ್ಮ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹತ್ಯೆಗೆ ಯತ್ನಿಸಿದ ವಿಡಿಯೋ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾದಿನಿ ನೀಲಮ್ಮ, ಸುಮಕ್ಕ, ಮೈದುನ ಚಿದಾನಂದ ಹಾಗೂ ಚಿದಾನಂದನ ಪತ್ನಿ ವಿಶಾಲಮ್ಮ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ. ಸದ್ಯ ಈ ಪ್ರಕರಣ ಪರಶುರಾಂಪುರ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪಿನಾಯಿಲ್ ಕುಡಿದು ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಸಾವು

ರಮೇಶ್ ಜಾರಕಿಹೊಳಿಯವರಿಂದಲೇ ಸಿಡಿ ರಿಲೀಸ್ ಆಗಿದೆ; ಇದರಿಂದ ನನ್ನ ಪೋಷಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ -ಸಂತ್ರಸ್ತೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ

Published On - 5:14 pm, Mon, 15 March 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ