AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ

ಹೊಸದಾಗಿ ಬಾಡಿಗೆ ಮನೆ ಪಡೆದಿದ್ದ ಮೊದಲ ಮಗಳ ಮನೆಗೆ ಬಣ್ಣ ಹೊಡೆಯಲು ತೆರಳುತ್ತಿದ್ದ ಅಪ್ಪ ಮಹಮದ್ ಗೌಸ್ ಜೊತೆ ತಾನೂ ಬರುವುದಾಗಿ ಹೇಳಿದ್ದ ಎರಡನೇ ಮಗಳು ಶಹನಾಜ್​ಗೆ ಮನೆಯಲ್ಲಿಯೇ ಇರುವಂತೆ ಮಹಮದ್ ಗೌಸ್ ಸಲಹೆ ನೀಡಿ ತೆರಳಿದ್ದಾರೆ. ಆದರೆ ಮನೆಗೆ ಸಂಜೆ ಹಿಂದಿರುಗಿ ಬರುವಷ್ಟರಲ್ಲಿ ಮಗಳು ನೇಣಿಗೆ ಶರಣಾಗಿದ್ದಾಳೆ.

ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
preethi shettigar
|

Updated on:Mar 15, 2021 | 5:17 PM

Share

ಮೈಸೂರು: ಅಕ್ಕನ ಮನೆಗೆ ಕರೆದುಕೊಂಡು ಹೋಗದ ಹಿನ್ನೆಲೆಯಲ್ಲಿ ಮನನೊಂದು ತಂಗಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಡೆದಿದೆ. ತಂದೆ ತನ್ನನ್ನು ಅಕ್ಕನ ಮನೆಗೆ ಬಿಟ್ಟು ಹೋದರು ಎಂಬುವುದನ್ನೇ ಕಾರಣವಾಗಿಸಿಕೊಂಡ ಶಹನಾಜ್(17) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹೊಸದಾಗಿ ಬಾಡಿಗೆ ಮನೆ ಪಡೆದಿದ್ದ ಮೊದಲ ಮಗಳ ಮನೆಗೆ ಬಣ್ಣ ಹೊಡೆಯಲು ತೆರಳುತ್ತಿದ್ದ ಅಪ್ಪ ಮಹಮದ್ ಗೌಸ್ ಜೊತೆ ತಾನೂ ಬರುವುದಾಗಿ ಹೇಳಿದ್ದ ಎರಡನೇ ಮಗಳು ಶಹನಾಜ್​ಗೆ ಮನೆಯಲ್ಲಿಯೇ ಇರುವಂತೆ ಮಹಮದ್ ಗೌಸ್ ಸಲಹೆ ನೀಡಿ ತೆರಳಿದ್ದಾರೆ. ಆದರೆ ಮನೆಗೆ ಸಂಜೆ ಹಿಂದಿರುಗಿ ಬರುವಷ್ಟರಲ್ಲಿ ಮಗಳು ನೇಣಿಗೆ ಶರಣಾಗಿದ್ದಾಳೆ.

ಮೈಸೂರಿನಲ್ಲಿ ರೈತ ಅತ್ಮಹತ್ಯೆ: ಸಾಲಬಾಧೆ ಹಿನ್ನೆಲೆ ರೈತ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಹರವೆ ಗ್ರಾಮದ ಈಶ್ವರ(65) ನೇಣಿಗೆ ಶರಣಾಗಿದ್ದಾರೆ. ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ ಬೆಳೆದಿದ್ದ ಈಶ್ವರ ಅವರು ಇದಕ್ಕಾಗಿ ವಿವಿಧ ಬ್ಯಾಂಕುಗಳಲ್ಲಿ ಸುಮಾರು ₹3.80 ಲಕ್ಷ ಸಾಲ ಮಾಡಿದ್ದರು. ಆದರೆ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಮನನೊಂದ ಈಶ್ವರ ತಮ್ಮ ಜಮೀನಿನ ಬ್ಯಾರಲ್ ಹೌಸ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸದ್ಯ ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದಲ್ಲಿ ಮಹಿಳೆ ಸಾವು: ನಾದಿನಿಯರು, ಮೈದುನ ಹಾಗೂ ಮೈದುನನ ಪತ್ನಿಯರು ಸೇರಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದು, ಸದ್ಯ ಹಲ್ಲೆಗೊಳಗಾದ ಮಹಿಳೆ ಸಾವಿಗೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಿ.ಓಬೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಳೆದ ಶನಿವಾರ ಮಂಜುಳಮ್ಮ(31) ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾಗಿದ್ದ ಮಂಜುಳಮ್ಮ ಜಿಲ್ಲಾಸ್ಪತ್ರೆಗೆ ದಾಖಲಾಗಿದರು. ಆದರೆ ದುರಾದೃಷ್ಟವಶಾತ್ ಇಂದು ಮಂಜುಳಮ್ಮ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹತ್ಯೆಗೆ ಯತ್ನಿಸಿದ ವಿಡಿಯೋ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾದಿನಿ ನೀಲಮ್ಮ, ಸುಮಕ್ಕ, ಮೈದುನ ಚಿದಾನಂದ ಹಾಗೂ ಚಿದಾನಂದನ ಪತ್ನಿ ವಿಶಾಲಮ್ಮ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ. ಸದ್ಯ ಈ ಪ್ರಕರಣ ಪರಶುರಾಂಪುರ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪಿನಾಯಿಲ್ ಕುಡಿದು ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಸಾವು

ರಮೇಶ್ ಜಾರಕಿಹೊಳಿಯವರಿಂದಲೇ ಸಿಡಿ ರಿಲೀಸ್ ಆಗಿದೆ; ಇದರಿಂದ ನನ್ನ ಪೋಷಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ -ಸಂತ್ರಸ್ತೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ

Published On - 5:14 pm, Mon, 15 March 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ