AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 DySPಗಳಿಗೆ ಕ್ವಾರಂಟೈನ್! ಸಿಎಂ BSY ಸ್ವಕ್ಷೇತ್ರದಲ್ಲಿ ಏನಿದು ಅವಾಂತರ?

ಶಿವಮೊಗ್ಗ: ಹಚ್ಚಹಸಿರಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಕೊರೊನಾ ಆತಂಕ ಮಡುವುಗಟ್ಟಿದೆ. ಅದೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳನ್ನೇ ಬಾಧಿಸತೊಡಗಿದೆ. ಮುಖ್ಯಮಂತ್ರಿ ಸ್ವಕ್ಷೇತ್ರವಾದ ಶಿಕಾರಿಪುರದಲ್ಲಿ ಕಳೆದ ವಾರ ದಿಢೀರನೆ ಕೊರೊನಾ ಸೋಂಕು ಪ್ರಕರಣಗಳು ತಲೆಯೆತ್ತಿದ್ದವು. ಆ ಸಂದರ್ಭದಲ್ಲಿ ಶಿಕಾರಿಪುರ ತಾಲೂಕಿನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 12ಕ್ಕೂ ಹೆಚ್ಚು ಇನ್ಸ್​ಪೆಕ್ಟರ್​ಗಳು, 5 DySPಗಳಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ. ಯಾರು ಆ ಬಾಲಕಿ? ಇವರಿಗೆ ಯಾಕೆ ಕ್ವಾರಂಟೈನ್? ಕಳೆದ ವಾರ ಆಗಿದ್ದೇನೆಂದ್ರೆ.. ಶಿವಮೊಗ್ಗದಲ್ಲಿ ಅತ್ಯಾಚಾರ […]

5 DySPಗಳಿಗೆ ಕ್ವಾರಂಟೈನ್! ಸಿಎಂ BSY ಸ್ವಕ್ಷೇತ್ರದಲ್ಲಿ ಏನಿದು ಅವಾಂತರ?
ಸಾಧು ಶ್ರೀನಾಥ್​
|

Updated on:May 19, 2020 | 2:59 PM

Share

ಶಿವಮೊಗ್ಗ: ಹಚ್ಚಹಸಿರಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಕೊರೊನಾ ಆತಂಕ ಮಡುವುಗಟ್ಟಿದೆ. ಅದೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳನ್ನೇ ಬಾಧಿಸತೊಡಗಿದೆ. ಮುಖ್ಯಮಂತ್ರಿ ಸ್ವಕ್ಷೇತ್ರವಾದ ಶಿಕಾರಿಪುರದಲ್ಲಿ ಕಳೆದ ವಾರ ದಿಢೀರನೆ ಕೊರೊನಾ ಸೋಂಕು ಪ್ರಕರಣಗಳು ತಲೆಯೆತ್ತಿದ್ದವು. ಆ ಸಂದರ್ಭದಲ್ಲಿ ಶಿಕಾರಿಪುರ ತಾಲೂಕಿನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 12ಕ್ಕೂ ಹೆಚ್ಚು ಇನ್ಸ್​ಪೆಕ್ಟರ್​ಗಳು, 5 DySPಗಳಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ.

ಯಾರು ಆ ಬಾಲಕಿ? ಇವರಿಗೆ ಯಾಕೆ ಕ್ವಾರಂಟೈನ್? ಕಳೆದ ವಾರ ಆಗಿದ್ದೇನೆಂದ್ರೆ.. ಶಿವಮೊಗ್ಗದಲ್ಲಿ ಅತ್ಯಾಚಾರ ಪ್ರಕರಣವೊಂದು ನಡೆದಿತ್ತು.  ಸಂತ್ರಸ್ತೆ ಮತ್ತು ಆರೋಪಿಯನ್ನು ಕರೆದುಕೊಂಡು ಹೋಗಿ ಶಿಕಾರಿಪುರದಲ್ಲಿ ಸ್ಥಳ ಮಹಜರು ಮಾಡಲಾಗಿತ್ತು. ಅಪ್ರಾಪ್ತ ವಯಸ್ಸಿನ ಬಾಧಿತ ಬಾಲಕಿ ಮತ್ತು ಆರೋಪಿಯನ್ನು ಪೊಲೀಸ್ ಜೀಪಿನಲ್ಲಿ ಕರೆದುಕೊಂಡು ಹೋಗಲಾಗಿತ್ತು. ಅದಾದಮೇಲೆ ಶಿಕಾರಿಪುರ ಗ್ರಾಮಾಂತರದ CPI ಬಾಲಕಿಯನ್ನು ಶಿವಮೊಗ್ಗದಲ್ಲಿ ಆಸ್ಪತ್ರೆಗೆ ಬಿಟ್ಟು ಬಂದಿದ್ದರು.  ಬಳಿಕ ಸೀದಾ SP ಕಚೇರಿಗೆ ತೆರಳಿ, CPIಗಳ ಸಭೆಯಲ್ಲಿ ಭಾಗವಹಿಸಿದ್ದರು.

ಶಿಕಾರಿಪುರ ಗ್ರಾಮಾಂತರದ CPI ಶಿಕಾರಿಪುರದಿಂದ ಆ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪೊಲೀಸ್ ಜೀಪ್​ನಲ್ಲಿ ಶಿವಮೊಗ್ಗ ನಗರಕ್ಕೆ ಕರೆತಂದು ಅನುಮಾನದ ಮೇಲೆ ಕೊವೀಡ್ ಆಸ್ಪತ್ರೆಗೆ ಸೇರಿಸಿದ್ದರು! ಇದೀಗ ಫಲಿತಾಂಶ ಹೊರಬಿದ್ದಿದ್ದು ಬಾಲಕಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಂದು ಸಿಪಿಐ ಸಭೆಯಲ್ಲಿ ಭಾಗವಹಿಸಿದ ಎಲ್ಲಾ CPI ಮತ್ತು DySPಗಳಿಗೆ ಈಗ ಕ್ವಾರಂಟೈನ್ ಭಾಗ್ಯ ಕಲ್ಪಿಸಲಾಗಿದೆ.

Published On - 2:23 pm, Tue, 19 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ