AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಜಾಬ್​ಗೆ ಅವಕಾಶ; ಆದ್ರೆ ತಾಳಿ, ಕಾಲುಂಗರಕ್ಕೆ ನಿಷೇಧ; ಇದ್ಯಾವ ನ್ಯಾಯ ಎಂದ ಅಭ್ಯರ್ಥಿಗಳು

Karnataka Civil Services Exam: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುವ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ತಮ್ಮ 'ಮಂಗಳಸೂತ್ರ' ತೆಗೆಯುವಂತೆ ಸೂಚಿಸಲಾಗಿತ್ತು. ತಾಳಿ ಹಾಗೂ ಕಾಲುಂಗರ ತೆಗೆಸಿದ್ದಕ್ಕೆ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಜಾಬ್​ಗೆ ಅವಕಾಶ; ಆದ್ರೆ ತಾಳಿ, ಕಾಲುಂಗರಕ್ಕೆ ನಿಷೇಧ; ಇದ್ಯಾವ ನ್ಯಾಯ ಎಂದ ಅಭ್ಯರ್ಥಿಗಳು
ಪರೀಕ್ಷಾರ್ಥಿಗಳ ಕಿವಿ ವೊಲೆ, ತಾಳಿ ಕಾಲುಂಗರು ತೆಗೆಸಿದ ಪೊಲೀಸರು
ವಿವೇಕ ಬಿರಾದಾರ
| Updated By: Digi Tech Desk|

Updated on:Nov 06, 2023 | 12:11 PM

Share

ಬೆಂಗಳೂರು ನ.06: ರಾಜ್ಯದಲ್ಲಿ ಕಾಂಗ್ರೆಸ್ (Congress)​ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸ್ಮರ್ಧಾತ್ಮಕ ಪರೀಕ್ಷಾ (Competitive) ಕೇಂದ್ರಗಳಲ್ಲಿ ಹಿಜಾಬ್​ಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಇದು ಸಹಜವಾಗಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಿನ್ನೆ (ನ.05) ರಂದು ನಡೆದಿದ್ದ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಹಿಜಾಬ್​ ಧರಿಸಲು ಅವಕಾಶ ನೀಡಲಾಗಿತ್ತು. ಆದರೆ ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ ಹಾಗೂ ಕಾಲುಂಗುರ ತೆಗೆಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಹಿಜಾಬ್​ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಮೇಲೆ, ತಾಳಿ ಹಾಗೂ ಕಾಲುಂಗರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ. ನಮಗೊಂದು ನ್ಯಾಯ, ಅವರಿಗೊಂದು ನ್ಯಾಯವೇ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುವ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ತಮ್ಮ ‘ಮಂಗಳಸೂತ್ರ’ ತೆಗೆಯುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: FDA ಪರೀಕ್ಷೆ ಅಕ್ರಮ ಬೆನ್ನಲ್ಲೇ ಅಲರ್ಟ್; ಕೆಪಿಎಸ್ಸಿ ಪರೀಕ್ಷಾರ್ಥಿಗಳ ಕಿವಿ ವೊಲೆ, ಚೈನ್, ಕಾಲುಂಗರು ತೆಗೆಸಿದ ಪೊಲೀಸರು 

ಈ ಕುರಿತು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರತಿಕ್ರಿಯಿಸಿ ಈ ನಿಯಮ “ಹಿಂದೂಗಳಿಗೆ” ಮಾತ್ರವೇ? ನಮ್ಮ ಹಿಂದೂ ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರವನ್ನು ತೆಗೆಯಲು ಹೇಳಿದ್ದೀರಿ. ಅತ್ತ ಓರ್ವ ಅಭ್ಯರ್ಥಿಗೆ ಹಿಜಾಬ್​ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೀರಿ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಸಂಸ್ಕೃತಿಯಲ್ಲಿ ಮಂಗಳಸೂತ್ರವನ್ನು ತೆಗೆಯುವಂತಿಲ್ಲ. ನನ್ನ ಮಂಗಳಸೂತ್ರ ಮತ್ತು ಕಾಲ್ಬೆರಳ ಉಂಗುರವನ್ನು ತೆಗೆದು ಒಳಗೆ ಹೋದೆ. ಆದೆ ಅವರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದರು ಎಂದು ಮಹಿಳಾ ಅಭ್ಯರ್ಥಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Mon, 6 November 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!