AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?
ಸ್ವಚ್ಚವಿಲ್ಲದ ಶೌಚಾಲಯ
sandhya thejappa
sandhya thejappa| Edited By: |

Updated on: Dec 06, 2020 | 12:20 PM

Share

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಿಸಿ ನೀರಿನ ವ್ಯವಸ್ಥೆಯಿಂದ ವಂಚಿತರಾದ ವಿದ್ಯಾರ್ಥಿನಿಯರಿಗೆ ಒಳ್ಳೆಯ ಆಹಾರ ಸಹ ಸಿಗದೆ ಹಾಸ್ಟಲ್​ನಲ್ಲಿ ಪರದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಶೌಚಾಲಯಗಳನ್ನು ಹಾಗೂ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲು ಸಿಬ್ಬಂದಿಯಿಲ್ಲದೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ.

ಹಾಸ್ಟೆಲ್ ತೊರೆಯುತ್ತಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ಬಿಸಿ ನೀರು ಹಾಗೂ ಉತ್ತಮ ಊಟದ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ಎಂಟ್ರಿಗೆ ಥರ್ಮಲ್ ಸ್ಕ್ಯಾನರ್​ ಅಳವಡಿಸಿ, ಕಟ್ಟಡವನ್ನು ಸ್ಯಾನಿಟೈಸ್ ಮಾಡಬೇಕು. ರೂಮ್​ಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ಹಾಸ್ಟೆಲ್ ಪ್ರವೇಶಕ್ಕೆ ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಬೇಕೆಂದು ಸರ್ಕಾರದಿಂದ ಕೆಲವು ಮಾರ್ಗಸೂಚೆ ಬಿಡುಗಡೆಯಾಗಿತ್ತು.​ ಆದ್ರೆ, ಈ ಯಾವುದೇ ನಿಯಮಗಳು ವಿ.ವಿ ಹಾಸ್ಟೆಲ್​ನಲ್ಲಿ ಪಾಲನೆಯಾಗುತ್ತಿಲ್ಲ.

ಸದ್ಯಕ್ಕೆ ಮಾಸ್ಕ್ ಧರಿಸುವುದನ್ನು ಮಾತ್ರ ಕಡ್ಡಾಯ ಮಾಡಿದ್ದು, ಬೇರೆ ಯಾವ ರೂಲ್ಸ್​ಗಳತ್ತ ಗಮನ ಹರಿಸಿಲಾಗುತ್ತಿಲ್ಲ. ಆದರೆ, ತಿಂಗಳಿಗೆ 1,200 ರೂ. ಇದ್ದ ಹಾಸ್ಟೆಲ್ ಫೀಸ್ ಈಗ ಏಕಾಏಕಿ 3,200 ರೂ. ಗೆ  ಏರಿಕೆ ಮಾಡಿಲಾಗಿದೆ. ಇದನ್ನು, V-Cರವರ ಗಮನಕ್ಕೆ ತರಲು ಹೋದ್ರೆ ಕುಲಪತಿಗಳು ಕೈಗೆ ಸಿಗುತ್ತಿಲ್ಲವೆಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಾಗಾಗಿ, ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆಯಲು ಮುಂದಾಗಿದ್ದಾರೆ.

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣು

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!