AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?
ಸ್ವಚ್ಚವಿಲ್ಲದ ಶೌಚಾಲಯ
sandhya thejappa
| Edited By: |

Updated on: Dec 06, 2020 | 12:20 PM

Share

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಿಸಿ ನೀರಿನ ವ್ಯವಸ್ಥೆಯಿಂದ ವಂಚಿತರಾದ ವಿದ್ಯಾರ್ಥಿನಿಯರಿಗೆ ಒಳ್ಳೆಯ ಆಹಾರ ಸಹ ಸಿಗದೆ ಹಾಸ್ಟಲ್​ನಲ್ಲಿ ಪರದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಶೌಚಾಲಯಗಳನ್ನು ಹಾಗೂ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲು ಸಿಬ್ಬಂದಿಯಿಲ್ಲದೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ.

ಹಾಸ್ಟೆಲ್ ತೊರೆಯುತ್ತಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ಬಿಸಿ ನೀರು ಹಾಗೂ ಉತ್ತಮ ಊಟದ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ಎಂಟ್ರಿಗೆ ಥರ್ಮಲ್ ಸ್ಕ್ಯಾನರ್​ ಅಳವಡಿಸಿ, ಕಟ್ಟಡವನ್ನು ಸ್ಯಾನಿಟೈಸ್ ಮಾಡಬೇಕು. ರೂಮ್​ಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ಹಾಸ್ಟೆಲ್ ಪ್ರವೇಶಕ್ಕೆ ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಬೇಕೆಂದು ಸರ್ಕಾರದಿಂದ ಕೆಲವು ಮಾರ್ಗಸೂಚೆ ಬಿಡುಗಡೆಯಾಗಿತ್ತು.​ ಆದ್ರೆ, ಈ ಯಾವುದೇ ನಿಯಮಗಳು ವಿ.ವಿ ಹಾಸ್ಟೆಲ್​ನಲ್ಲಿ ಪಾಲನೆಯಾಗುತ್ತಿಲ್ಲ.

ಸದ್ಯಕ್ಕೆ ಮಾಸ್ಕ್ ಧರಿಸುವುದನ್ನು ಮಾತ್ರ ಕಡ್ಡಾಯ ಮಾಡಿದ್ದು, ಬೇರೆ ಯಾವ ರೂಲ್ಸ್​ಗಳತ್ತ ಗಮನ ಹರಿಸಿಲಾಗುತ್ತಿಲ್ಲ. ಆದರೆ, ತಿಂಗಳಿಗೆ 1,200 ರೂ. ಇದ್ದ ಹಾಸ್ಟೆಲ್ ಫೀಸ್ ಈಗ ಏಕಾಏಕಿ 3,200 ರೂ. ಗೆ  ಏರಿಕೆ ಮಾಡಿಲಾಗಿದೆ. ಇದನ್ನು, V-Cರವರ ಗಮನಕ್ಕೆ ತರಲು ಹೋದ್ರೆ ಕುಲಪತಿಗಳು ಕೈಗೆ ಸಿಗುತ್ತಿಲ್ಲವೆಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಾಗಾಗಿ, ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆಯಲು ಮುಂದಾಗಿದ್ದಾರೆ.

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ