AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?
ಸ್ವಚ್ಚವಿಲ್ಲದ ಶೌಚಾಲಯ
sandhya thejappa
sandhya thejappa| Edited By: |

Updated on: Dec 06, 2020 | 12:20 PM

Share

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಿಸಿ ನೀರಿನ ವ್ಯವಸ್ಥೆಯಿಂದ ವಂಚಿತರಾದ ವಿದ್ಯಾರ್ಥಿನಿಯರಿಗೆ ಒಳ್ಳೆಯ ಆಹಾರ ಸಹ ಸಿಗದೆ ಹಾಸ್ಟಲ್​ನಲ್ಲಿ ಪರದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಶೌಚಾಲಯಗಳನ್ನು ಹಾಗೂ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲು ಸಿಬ್ಬಂದಿಯಿಲ್ಲದೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ.

ಹಾಸ್ಟೆಲ್ ತೊರೆಯುತ್ತಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ಬಿಸಿ ನೀರು ಹಾಗೂ ಉತ್ತಮ ಊಟದ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ಎಂಟ್ರಿಗೆ ಥರ್ಮಲ್ ಸ್ಕ್ಯಾನರ್​ ಅಳವಡಿಸಿ, ಕಟ್ಟಡವನ್ನು ಸ್ಯಾನಿಟೈಸ್ ಮಾಡಬೇಕು. ರೂಮ್​ಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ಹಾಸ್ಟೆಲ್ ಪ್ರವೇಶಕ್ಕೆ ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಬೇಕೆಂದು ಸರ್ಕಾರದಿಂದ ಕೆಲವು ಮಾರ್ಗಸೂಚೆ ಬಿಡುಗಡೆಯಾಗಿತ್ತು.​ ಆದ್ರೆ, ಈ ಯಾವುದೇ ನಿಯಮಗಳು ವಿ.ವಿ ಹಾಸ್ಟೆಲ್​ನಲ್ಲಿ ಪಾಲನೆಯಾಗುತ್ತಿಲ್ಲ.

ಸದ್ಯಕ್ಕೆ ಮಾಸ್ಕ್ ಧರಿಸುವುದನ್ನು ಮಾತ್ರ ಕಡ್ಡಾಯ ಮಾಡಿದ್ದು, ಬೇರೆ ಯಾವ ರೂಲ್ಸ್​ಗಳತ್ತ ಗಮನ ಹರಿಸಿಲಾಗುತ್ತಿಲ್ಲ. ಆದರೆ, ತಿಂಗಳಿಗೆ 1,200 ರೂ. ಇದ್ದ ಹಾಸ್ಟೆಲ್ ಫೀಸ್ ಈಗ ಏಕಾಏಕಿ 3,200 ರೂ. ಗೆ  ಏರಿಕೆ ಮಾಡಿಲಾಗಿದೆ. ಇದನ್ನು, V-Cರವರ ಗಮನಕ್ಕೆ ತರಲು ಹೋದ್ರೆ ಕುಲಪತಿಗಳು ಕೈಗೆ ಸಿಗುತ್ತಿಲ್ಲವೆಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಾಗಾಗಿ, ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆಯಲು ಮುಂದಾಗಿದ್ದಾರೆ.

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣು

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು