AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನ. 2ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ; ಪ್ರಧಾನಿ ಮೋದಿಗೆ ಆಹ್ವಾನ

ನವೆಂಬರ್ 2, 3, 4ರಂದು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಈ ಬಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕರೆಸುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನ. 2ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ; ಪ್ರಧಾನಿ ಮೋದಿಗೆ ಆಹ್ವಾನ
ಮುರುಗೇಶ್ ನಿರಾಣಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 10, 2022 | 5:17 PM

Share

ಬೆಂಗಳೂರು: ಬೆಂಗಳೂರಿನಲ್ಲಿ ನವೆಂಬರ್ 2, 3, 4ರಂದು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಈ ಬಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (Narendra Modi) ಕರೆಸುತ್ತೇವೆ. ಉದ್ಯೋಗ ನೀಡು, ಉದ್ಯಮಿಯಾಗು ಎಂಬ ಕಾರ್ಯಕ್ರಮ ನಡೆಸಲಾಗುವುದು. ಬೆಳಗಾವಿಯಲ್ಲಿ ಫೆಬ್ರವರಿ 27ರಂದು ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ 5,000 ಪದವೀಧರರು ಪಾಲ್ಗೊಳ್ಳಲಿದ್ದಾರೆ. 2010ರಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಿದಾಗ 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಒಪ್ಪಂದ ಮಾಡಿಕೊಳ್ಳಲಾಗಿತ್ತು ಎಂದು ಬೆಂಗಳೂರಿನಲ್ಲಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿದ್ದಾರೆ.

ಉದ್ಯೋಗ ನೀಡು, ಉದ್ಯಮಿಯಾಗು ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಈ ತಿಂಗಳ 27ರಂದು ಮಾಡಲಾಗುವುದು. ಅದರಲ್ಲಿ 5000 ಪದವೀಧರರು ಪಾಲ್ಗೊಳ್ಳಲಿದ್ದಾರೆ. ನಾನು ಕೈಗಾರಿಕೆ ಇಲಾಖೆ ತೆಗೆದುಕೊಂಡ ನಂತರ ರಾಜ್ಯಕ್ಕೆ ಅತಿ ಹೆಚ್ಚು ಬಂಡವಾಳ ಹರಿದು ಬಂದು ನಂಬರ್ ಒನ್ ರಾಜ್ಯವಾಗಿದೆ. ನವೆಂಬರ್ ಒಳಗಾಗಿ 50 ಸಾವಿರ ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಜಮೀನು ಪಡೆದು, ಉದ್ಯಮ ಸ್ಥಾಪನೆ ಮಾಡದೇ ಇರುವವರ ಜಮೀನು ವಾಪಾಸ್ ಪಡೆಯಲಾಗುತ್ತಿದೆ. ಸುಮಾರು 1,000 ಎಕರೆ ಭೂಮಿಯನ್ನು ವಾಪಾಸ್ ಪಡೆಯಲಾಗುತ್ತಿದೆ. ಏಕಾಏಕಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾದರೆ ಕೋರ್ಟ್ ಮೆಟ್ಟಿಲು ಹತ್ತುತ್ತಾರೆ. ಎಸ್​ಸಿ, ಎಸ್​ಟಿಯವರಿಗೆ ಶೇ 75ರಷ್ಟು ಸಬ್ಸಿಡಿ ಕೊಡಲಾಗುತ್ತಿದೆ. ಆರ್ಥಿಕವಾಗಿ ದುರ್ಬಲವಾಗಿರುವವರಿಗೆ 2 ಎಕರೆ ಜಮೀನು ಶೇ 75ರಷ್ಟು ರಿಯಾಯಿತಿ ದರದಲ್ಲಿ ಜಮೀನು ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪಂಚಮಸಾಲಿ 3ನೇ ಪೀಠ ಸ್ಥಾಪನೆಗೆ ನಾನು ಅತಿಥಿಯಾಗಿ ಹೋಗುತ್ತೇನೆ. ವಚನಾನಂದ ಸ್ವಾಮೀಜಿ ಮುಂದೆ ನಿಂತು ಪೀಠ ಮಾಡುತ್ತಿದ್ದಾರೆ. ಹರಿಹರ ಪೀಠ ಇದ್ದರೂ ಕೂಡಲ ಸಂಗಮ ಪೀಠವನ್ನು ನಾವೇ ಸ್ಥಾಪನೆ ಮಾಡಿದ್ದೇವೆ. ನಮ್ಮ ಹಿಂದೂ ಧರ್ಮದಲ್ಲಿ ಸ್ವಾಮೀಜಿಗಳಿಗೆ ಉನ್ನತ ಸ್ಥಾನ ಇದೆ. ನಾವು ಎಷ್ಟೇ ದೊಡ್ಡ ಹುದ್ದೆಯಲ್ಲಿದ್ದರೂ ಸ್ವಾಮೀಜಿಗೆ ಗೌರವಿಸುತ್ತೇವೆ. ಯಾವುದೇ ಪೀಠ ರಾಜಕಾರಣಿಗಳ ಲಾಭಕ್ಕೆ ಹುಟ್ಟಿಕೊಂಡಿದೆ ಅನ್ನುವುದನ್ನು ನಾನು ಒಪ್ಪುವುದಿಲ್ಲ. ಇನ್ನಷ್ಟು ಪೀಠಗಳು ಹುಟ್ಟಿಕೊಂಡರೂ ಯಾವುದೇ ಸಮಸ್ಯೆ ಇಲ್ಲ. ನಾನು ತನು ಮನ ಧನದಿಂದ ಸಹಾಯ ಮಾಡುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಕೇಸರಿ ಶಾಲು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ನಿರಾಣಿ, ನಮ್ಮ ಎಲ್ಲ ಹಿಂದೂ ಯುವಕರಿಗೆ ಕೇಸರಿ ಶಾಲು ಖರೀದಿಸುವ ಶಕ್ತಿ ಇದೆ. ಅವರೇ ಸ್ವತಃ ತಂದು ಹಾಕಿಕೊಳ್ಳುತ್ತಾರೆ. ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ವೈಯಕ್ತಿಕ ವಿಚಾರ. ಕೇಸರಿ‌ ಶಾಲು ಖರೀದಿಸಿ ಹಾಕಿಕೊಳ್ಳುವ ಶಕ್ತಿ ನಮ್ಮ ಯುವಕರಿಗೆ ಇದೆ. ವಿವಾದ ಪ್ರಾರಂಭ ಆಗಿರೋದು ಬಿಜೆಪಿಯಿಂದ ಅಲ್ಲ, ಯಾವ ಪಕ್ಷದಿಂದ ಆಗ್ತಿದೆ ಅನ್ನೋದು ನಿಮಗೆ ಗೊತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಂಡವಾಳ ಹೂಡಲು ಫಿನ್ ಟೆಕ್‌ ಕಂಪನಿಗಳಿಗೆ ಆಹ್ವಾನ ನೀಡಿದ ಸಚಿವ ಮುರುಗೇಶ್ ನಿರಾಣಿ

ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ, ಇದಕ್ಕೂ ನನಗೂ ಸಂಬಂಧವಿಲ್ಲ; ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ