AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ: ನಾಳೆ ಬೆಳಗಾವಿಯ ಕಣಕುಂಬಿಗೆ ಕೇಂದ್ರ ತಂಡ ಭೇಟಿ

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿದೆ. ಗೋವಾ ಸರ್ಕಾರದ ಒತ್ತಡದಿಂದ ಮಹದಾಯಿ ಪ್ರವಾಹ ತಂಡ ಕಣಕುಂಬಿಗೆ ಭೇಟಿ ಕೊಡುತ್ತಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗೋವಾ ಸರ್ಕಾರದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಮಹದಾಯಿ ಪ್ರವಾಹ ತಂಡ ರಚಿಸಿದೆ.

ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ: ನಾಳೆ ಬೆಳಗಾವಿಯ ಕಣಕುಂಬಿಗೆ ಕೇಂದ್ರ ತಂಡ ಭೇಟಿ
ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ: ನಾಳೆ ಬೆಳಗಾವಿಯ ಕಣಕುಂಬಿಗೆ ಕೇಂದ್ರ ತಂಡ ಭೇಟಿ
Sahadev Mane
| Edited By: |

Updated on:Jul 06, 2024 | 3:51 PM

Share

ಬೆಳಗಾವಿ, ಜುಲೈ 06: ಕರ್ನಾಟಕ, ಗೋವಾ, ಮಹಾರಾಷ್ಟ್ರ ಮಧ್ಯೆ ಇರುವ ಜಲ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಹದಾಯಿ ಯೋಜನೆಗೆ (Mahadayi project) ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ಶುರು ಮಾಡಿದೆ. ಹೀಗಾಗಿ ಯೋಜನೆ ಸಂಬಂಧ ಕೇಂದ್ರದ ಮೇಲೆ ಗೋವಾ ಸಿಎಂ ಒತ್ತಡ ಹಾಕಿದ್ದಾರೆ. ಈ ಸಂಬಂಧ ಗೋವಾ ಸರ್ಕಾರದ ಒತ್ತಡದಿಂದ ಮಹದಾಯಿ ಪ್ರವಾಹ ತಂಡ ಕಣಕುಂಬಿಗೆ ಭೇಟಿ ಕೊಡುತ್ತಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ (Pramod Sawant) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿಯ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ನಾಳೆ ಭೇಟಿ ನೀಡಲಿದೆ. ಸದ್ಯದ ವಸ್ತು ಸ್ಥಿತಿ, ನೀರು ಹರಿದು ಎಲ್ಲಿಗೆ ಹೋಗುತ್ತಿದೆ ಅಂತಾ ಪರಿಶೀಲನೆ ಮಾಡಲಿದ್ದಾರೆ. ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಸಿಎಂ ಸಿದ್ದರಾಮಯ್ಯ, ಸಚಿವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಆದಷ್ಟು ಬೇಗ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸುವಂತೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರದಿಂದ ಮಹದಾಯಿ ಪ್ರವಾಹ ತಂಡ ಭೇಟಿ ಕೊಡುತ್ತಿದ್ದು, ನಾಳೆ 9 ಗಂಟೆಗೆ ಕಳಸಾ ಮತ್ತು ಬಂಡೂರಿ ನಾಲೆಗೆ ತಂಡ ಭೇಟಿ ನೀಡಲಿದೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಟ್ವೀಟ್​

ನಾಡಿದ್ದು ಬೆಂಗಳೂರಿನಲ್ಲಿ ಕೆಎನ್ಎಲ್ಎಲ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದೆ. ಆ ಬಳಿಕ ತನ್ನದೇಯಾದ ವರದಿಯನ್ನ ಕೇಂದ್ರ ಸರ್ಕಾರಕ್ಕೆ ತಂಡ ಸಲ್ಲಿಕೆ ಮಾಡಲಿದೆ. ಆ ಮೂಲಕ ಕರ್ನಾಟಕಕ್ಕೆ ಪರಿಸರ ಇಲಾಖೆ ಅನುಮತಿ ಸಿಗದಂತೆ ತಡೆಯಲು ಗೋವಾ ಹುನ್ನಾರ ನಡೆಸಿದೆ ಎನ್ನಲಾಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಕಳಸಾ, ಬಂಡೂರಿ ನಾಲೆ ತುಂಬಿ ಹರಿಯುತ್ತಿದೆ.

ಇದನ್ನೂ ಓದಿ: ಮಹದಾಯಿ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

2018 ರಲ್ಲಿಯೇ ಮಹದಾಯಿ ನ್ಯಾಯಾಧೀಕರಣದಿಂದ ತೀರ್ಪು ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ 13 ಟಿಎಂಸಿ ನೀರು ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕಳಸಾದಿಂದ 1.72 ಟಿಎಂಸಿ, ಬಂಡೂರಿಯಿಂದ 2.18 ಟಿಎಂಸಿ ನೀರು ಹಂಚಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ: ಮಹದಾಯಿ, ಬೆಂಗಳೂರು ಅಭಿವೃದ್ಧಿ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ

ಮಹದಾಯಿ ತೀರ್ಪು ಬಂದು 6 ವರ್ಷ ಕಳೆದರೂ ಒಂದೇ ಒಂದು ಹನಿ ನೀರು ಕರ್ನಾಟಕಕ್ಕೆ ಸಿಕ್ಕಿಲ್ಲ. ನಾಲ್ಕು ಜಿಲ್ಲೆಯ 13 ತಾಲೂಕಿನ ಜನತೆಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಪರಿಸರ ಇಲಾಖೆ ಅನುಮತಿ ಕರ್ನಾಟಕಕ್ಕೆ ಸಿಗದಂತೆ ತಡೆಯಲು ಗೋವಾ ಸರ್ಕಾರದ ಹುನ್ನಾರ ಮಾಡಿತ್ತು. ಇದೇ ಕಾರಣಕ್ಕೆ ಮಹದಾಯಿ ತೀರ್ಪು ಬಂದ್ರು ಪ್ರವಾಹ ತಂಡದ ನೆಪದಲ್ಲಿ ಯೋಜನೆಗೆ ಮತ್ತೆ ಅಡ್ಡಗಾಲು ಹಾಕಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Sat, 6 July 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ