ಬೆಳ್ತಂಗಡಿಯಲ್ಲಿ ದೈವಾರಾಧನೆ ವಿವಾದ: ಕೋರ್ಟ್​ ಮೆಟ್ಟಿಲೇರಿದ ಮೊಗೇರ ಸಮುದಾಯ

ಬೆಳ್ತಂಗಡಿಯಲ್ಲಿ ಗುಳಿಗ ದೈವದ ನರ್ತನದ ವಿವಾದವು ನ್ಯಾಯಾಲಯವನ್ನು ತಲುಪಿದೆ. ಪರಂಪರಾಗತವಾಗಿ ಮೂರು ನಿರ್ದಿಷ್ಟ ಸಮುದಾಯಗಳಿಗೆ ಮಾತ್ರ ದೈವ ನರ್ತನದ ಅವಕಾಶವಿರುವಾಗ, ಮೊಗೇರ ಸಮುದಾಯದ ಯುವಕನೊಬ್ಬ ನರ್ತನ ಮಾಡಿದ್ದರಿಂದ ವಿವಾದ ಉದ್ಭವಿಸಿದೆ. ನಲಿಕೆ ಸಮಾಜದ ವಿರೋಧದಿಂದಾಗಿ, ಉದ್ಭವ ಶ್ರೀ ಆದಿಲಿಂಗೇಶ್ವರ ಸೇವಾ ಟ್ರಸ್ಟ್ ನ್ಯಾಯಾಲಯಕ್ಕೆ ದೂರು ನೀಡಿದೆ. ನಲಿಕೆ ಸಮಾಜದ ಅಧ್ಯಕ್ಷರಿಗೆ ಸಮನ್ಸ್ ಜಾರಿಯಾಗಿದೆ.

ಬೆಳ್ತಂಗಡಿಯಲ್ಲಿ ದೈವಾರಾಧನೆ ವಿವಾದ: ಕೋರ್ಟ್​ ಮೆಟ್ಟಿಲೇರಿದ ಮೊಗೇರ ಸಮುದಾಯ
ಬೆಳ್ತಂಗಡಿಯಲ್ಲಿ ದೈವಾರಾಧನೆ ವಿವಾದ: ಕೋರ್ಟ್​ ಮೆಟ್ಟಿಲೇರಿದ ಮೊಗೇರ ಸಮುದಾಯ
Edited By:

Updated on: Dec 19, 2024 | 6:34 PM

ಮಂಗಳೂರು, ಡಿಸೆಂಬರ್​ 19: 2024ರ ಜನವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದ್ದ ಅನ್ಯ (ಮೊಗೇರ) ಸಮಾಜದ ಯುವಕನಿಂದ ಗುಳಿಗ ದೈವಕ್ಕೆ (daivaradhane)  ನರ್ತನ ಸೇವೆ ವಿಚಾರ ಸದ್ಯ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದೆ.  ಈ ಬಾರಿ ಕೂಡ ಅದೇ ಜಾಗದಲ್ಲಿ ಗುಳಿಗ ದೈವದ ಕೋಲ ನಡೆಯಲಿದೆ. ಆ ಕೋಲದಲ್ಲಿ ಮೊಗೇರ ಸಮುದಾಯದ ಯುವಕ ಮತ್ತೆ ದೈವ ನರ್ತನ ನಡೆಸಲಿದ್ದಾರೆ. ಹೀಗಾಗಿ ಮತ್ತೆ ನಲಿಕೆ ಸಮುದಾಯದಿಂದ ಗುಳಿಗ ಕೋಲ ತಡೆಯುವ ಸಾಧ್ಯತೆ ಇದೆ. ಈ ಕಾರಣಕ್ಕೆ ಉದ್ಭವ ಶ್ರೀ ಆದಿಲಿಂಗೇಶ್ವರ ಸೇವಾ ಟ್ರಸ್ಟ್ ಬೆಳ್ತಂಗಡಿ ಕೋರ್ಟ್ ಮೆಟ್ಟಿಲೇರಿದೆ.

ನಲಿಕೆ ಸಮಾಜದಿಂದ ಗುಳಿಗ ಕೋಲಕ್ಕೆ ತಡೆಯಾಗದಂತೆ ಟ್ರಸ್ಟ್ ಕೋರ್ಟ್ ಮೆಟ್ಟಿಲೇರಿದ್ದು, ಬೆಳ್ತಂಗಡಿಯ ನಲಿಕೆ ಸಮಾಜ ಸೇವಾ ಸಂಘದ ವಿರುದ್ದ ಕೋರ್ಟ್​ನಲ್ಲಿ ಖಾಸಗಿ ದೂರು ನೀಡಲಾಗಿದೆ. ದೂರು ಸ್ವೀಕರಿಸಿದ ನ್ಯಾಯಾಲಯದಿಂದ ನಲಿಕೆ ಸಮಾಜ ಸೇವಾ ಸಂಘಕ್ಕೆ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿಂದೆ ಸಿನಿಮಾಗಳಲ್ಲೂ ನಟರು ದೈವ ನರ್ತನ ಮಾಡುವುದನ್ನು ನಲಿಕೆ ಸಮಾಜ ವಿರೋಧಿಸಿದೆ.

ಇದನ್ನೂ ಓದಿ: ಮಂಗಳೂರು; ದೈವ ಕ್ಷೇತ್ರದಲ್ಲಿ ಮತ್ತೊಂದು ಪವಾಡ, ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ

ಇಂದು ಬೆಳ್ತಂಗಡಿ ಕೋರ್ಟ್​ಗೆ ಹಾಜರಾಗುವಂತೆ ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಪ್ರಭಾಕರ್ ಎಂಬವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಕೋರ್ಟ್ ತೀರ್ಮಾನದ ಮೇಲೆ ದೈವರಾಧಕರ ಚಿತ್ತ ನೆಟ್ಟಿದೆ.

ಪ್ರಕರಣ ಹಿನ್ನಲೆ

ದೈವಾರಾಧನೆ ಕಟ್ಟುಪಾಡಿನ ಪ್ರಕಾರ ಮೂರು ಸಮಾಜದವರಿಂದ ಮಾತ್ರ ದೈವ ನರ್ತನ ಸೇವೆ ಮಾಡಬೇಕು. ಪರವ, ಪಂಬದ, ನಲಿಕೆ ಸಮಾಜದಿಂದ ಮಾತ್ರ ದೈವ ನರ್ತನ ಸೇವೆ ಅನ್ನೋ ಕಟ್ಟುಪಾಡಿದೆ. ಆದರೆ ಕಳೆದ ಜನವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅನ್ಯ (ಮೊಗೇರ) ಸಮಾಜದ ಯುವಕನಿಂದ ಗುಳಿಗ ದೈವಕ್ಕೆ ನರ್ತನ ಸೇವೆ ಮಾಡಲಾಗಿದೆ.

ಇದನ್ನೂ ಓದಿ: ದೈವಾರಾಧನೆ ಎಂಬ ವಿಸ್ಮಯ ಜಗತ್ತಿನ ಒಂದು ನೋಟ; ಯಾರು ಈ ದೈವಗಳು?

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಯುವಕ ಕೋಲ ಕಟ್ಟಿದ್ದ. ಈ ವೇಳೆ ದೈವ ನರ್ತಕ ನಲಿಕೆ ಸಮಾಜ ಕೋಲ ತಡೆದು ಆಕ್ರೋಶ ಹೊರ ಹಾಕಿತ್ತು. ಭಾರೀ ವಿವಾದದ ಬೆನ್ನಲ್ಲೇ ಗುಳಿಗ ದೈವ ಹಾಗೂ ನಲಿಕೆ ಸಮಾಜಕ್ಕೆ ಯುವಕ ಕ್ಷಮೆ ಯಾಚಿಸಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:33 pm, Thu, 19 December 24

Loading...
Unable to load recommendations.
Follow Us