AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ-ಬಾಲಚಂದ್ರ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿ ಚರ್ಚೆ; ಗೋಕಾಕ್​ನಲ್ಲಿ ಭುಗಿಲೆದ್ದ ಆಕ್ರೋಶ

ಕೆಎಂಎಫ್​ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿಯನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಈ ಭೇಟಿ ನಡೆದಿದೆ.

ರಮೇಶ್ ಜಾರಕಿಹೊಳಿ-ಬಾಲಚಂದ್ರ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿ ಚರ್ಚೆ; ಗೋಕಾಕ್​ನಲ್ಲಿ ಭುಗಿಲೆದ್ದ ಆಕ್ರೋಶ
ಗೋಕಾಕ್​ ಬಂದ್​ಗೆ ಕರೆ ನೀಡುತ್ತಿರುವ ಬೆಂಬಲಿಗರು
ರಾಜೇಶ್ ದುಗ್ಗುಮನೆ
|

Updated on:Mar 03, 2021 | 4:13 PM

Share

ಗೋಕಾಕ್​ (ಮಾ.03): ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ರಮೇಶ್​ ಜಾರಕಿಹೊಳಿ. ಆದರೆ, ಈಗ ಅವರ ಅಶ್ಲೀಲ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. ಇದರ ಜತೆಗೆ ನೀರಾವರಿ ಸಚಿವ ಸ್ಥಾನ ಪಟ್ಟ ಪಡೆದ ಒಂದೇ ವರ್ಷಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುವಂತಾಗಿದೆ. ಬಿಜೆಪಿ ಸರ್ಕಾರಕ್ಕೆ ಸಾರ್ವಜನಿಕರು ಛೀಮಾರಿ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ಕೆಎಂಎಫ್​ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ರಮೇಶ್ ಜಾರಕಿಹೊಳಿ ಇಂದು ಭೇಟಿ ಮಾಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಈ ಭೇಟಿ ನಡೆದಿದೆ.ಮುಂದಿನ ನಡೆ ಕುರಿತು ಜಾರಕಿಹೊಳಿ ಬ್ರದರ್ಸ್​ ಮಾತುಕತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ರಾಜಕೀಯ ನಡೆ, ಪ್ರಕರಣ ಯಾವ ರೀತಿ, ಹೇಗೆ ನಿಭಾಯಿಸಬೇಕು, ಸಿಡಿ ರಿಲೀಸ್​ ಹಿಂದೆ ಯಾರ ಕೈವಾಡವಿರಬಹುದು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬೂದಿ ಮುಚ್ಚಿದ ಕೆಂಡದಂತಾದ ಗೋಕಾಕ್​ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುತ್ತಿದ್ದಂತೆ ಸ್ವಕ್ಷೇತ್ರ ಗೋಕಾಕ್​ ಬೂದಿ ಮುಚ್ಚಿದ ಕೆಂಡದಂತಾಗಿದೆ. ರಮೇಶ್​ ಜಾರಕಿಹೊಳಿ ಅಭಿಮಾನಿಗಳು ಒತ್ತಾಯಪೂರ್ವಕವಾಗಿ ಗೋಕಾಕ್ ಮಾರುಕಟ್ಟೆಯನ್ನು ಬಂದ್‌ ಮಾಡುತ್ತಿದ್ದಾರೆ. ಕೈಯಲ್ಲಿ ಕಲ್ಲು ಹಿಡಿದುಕೊಂಡು ನಿಂತು ಮಾರುಕಟ್ಟೆ ಬಂದ್ ಮಾಡಿಸುತ್ತಿದ್ದಾರೆ. ಟಾಯರ್​ಗಳಿಗೆ ಬೆಂಕಿ ಹಚ್ಚಲಾಗಿದೆ. ಸದ್ಯ, ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಾರುಕಟ್ಟೆ ಬಂದ್ ಮಾಡಲಾಗಿದೆ. ಬೆಂಬಲಿಗರನ್ನು ನಿಭಾಯಿಸಲು ಪೊಲೀಸರಿಂದ ಹರಸಾಹಸ ಪಡುತ್ತಿದ್ದಾರೆ.  ಈ ಎಲ್ಲಾ ಬೆಳವಣಿಗೆಯಿಂದ ಗೋಕಾಕ್ ನಗರ‌ ಬೂದಿಮುಚ್ಚಿದ ಕೆಂಡದಂತಾಗಿದೆ.

ರಮಶ್​ ಜಾರಕಿಹೊಳಿ ರಾಜೀನಾಮೆ ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್​ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯೂ ಸಮೀಪಿಸುತ್ತಿರುವುದರಿಂದ ಪಕ್ಷಕ್ಕೆ ತೊಂದರೆಯಾಗಬಾರದೆಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿರುವ ರಮೇಶ್​ ಜಾರಕಿಹೊಳಿ, ಸಂಪುಟ ಸಭೆಗೂ ಮುನ್ನ ರಾಜೀನಾಮೆ ನೀಡಿದ್ದು ಆರೋಪಮುಕ್ತರಾಗಿ ಬಂದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? – ಸಿದ್ದರಾಮಯ್ಯ

Published On - 4:11 pm, Wed, 3 March 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ