AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

70ರ ಹರೆಯದ ಮಹಿಳೆಗೆ ಒಲಿದು ಬಂತು ಚಿನ್ನದ ಪದಕ; ಸಂಸ್ಕೃತ ವಿಷಯದಲ್ಲಿ ವಿಶೇಷ ಸಾಧನೆ

ಬೆಂಗಳೂರಿನ ಗಾಯನ ಸಮಾಜದಲ್ಲಿ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಶುಕ್ಲಯಜುರ್ವೇದ ಕ್ರಮಾಂಕ (ಬಿ.ಎ) ವಿಷಯದಲ್ಲಿ ಪರಮಪೂಜ್ಯ ಶ್ರೀ ಚಿದಂಬರ ಮೂರ್ತಿ ಚಕ್ರವರ್ತಿ ಮಹಾಸ್ವಾಮಿ ಸ್ವರ್ಣ ಪದಕವನ್ನು ಅನುಸೂಯ ಪಡೆದುಕೊಂಡಿದ್ದಾರೆ.

70ರ ಹರೆಯದ ಮಹಿಳೆಗೆ ಒಲಿದು ಬಂತು ಚಿನ್ನದ ಪದಕ; ಸಂಸ್ಕೃತ ವಿಷಯದಲ್ಲಿ ವಿಶೇಷ ಸಾಧನೆ
ಚಿನ್ನದ ಪದಕ ಪಡೆದ ಅನುಸೂಯ
preethi shettigar
| Updated By: ganapathi bhat|

Updated on: Apr 11, 2021 | 4:15 PM

Share

ಬೆಂಗಳೂರು: ಸಾಧನೆ ಮಾಡುವುದಕ್ಕೆ ವಯಸ್ಸಿನ ಮಿತಿ ಇಲ್ಲ. ಸಾಧಿಸುವ ಛಲ ಮಾತ್ರ ಮುಖ್ಯ ಎನ್ನುವುದನ್ನು 70ರ ಹರೆಯದ ವೃದ್ಧೆ ನಿರೂಪಿಸಿದ್ದಾರೆ. ಒಂದು ಪದವಿ ಪಡೆದು ಉದ್ಯೋಗ ಮಾಡಲು ಶುರು ಮಾಡಿದರೆ ಅಷ್ಟೇ ಸಾಕು ಎನ್ನುವ ಜನರ ನಡುವೆ ಮೈಸೂರಿನ ಅನುಸೂಯ ಎಂಬುವವರು ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಬಳಿಕ ಸಂಸ್ಕೃತ ಅಧ್ಯಯನಕ್ಕೆ ಮುಂದಾಗಿ, ಸ್ವರ್ಣ ಪದಕವನ್ನು ಮುಡಿಗೆರಿಸಿಕೊಂಡಿದ್ದಾರೆ.

ಮೂರು ದಶಕಗಳಿಗೂ ಅಧಿಕ ಕಾಲ ಭಾರತೀಯ ಸೇನೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸಿ, ನಿವೃತ್ತರಾದ ಬಳಿಕ ವೈದ್ಯಕೀಯ ವೃತ್ತಿ ಮಾಡಿದ ಅನುಸೂಯ, ನಂತರ ಸಂಸ್ಕೃತವನ್ನು ಕಲಿಕೆಯ ವಿಷಯವಾಗಿ ತೆಗೆದುಕೊಂಡು ಆ ಕ್ಷೇತ್ರದಲ್ಲಿಯೇ ಸಾಧನೆ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನ ಗಾಯನ ಸಮಾಜದಲ್ಲಿ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಶುಕ್ಲಯಜುರ್ವೇದ ಕ್ರಮಾಂಕ (ಬಿ.ಎ) ವಿಷಯದಲ್ಲಿ, ಪರಮಪೂಜ್ಯ ಶ್ರೀ ಚಿದಂಬರ ಮೂರ್ತಿ ಚಕ್ರವರ್ತಿ ಮಹಾಸ್ವಾಮಿ ಅವರಿಂದ ಅನುಸೂಯ ಅವರು ಸ್ವರ್ಣ ಪದಕವನ್ನು ಪಡೆದುಕೊಂಡಿದ್ದಾರೆ.

ಭಾರತೀಯ ಸೇನೆಯಲ್ಲಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅನುಸೂಯ ಅವರು ಮೈಸೂರಿನಲ್ಲಿ ವೈದ್ಯರಾಗಿಯೂ ಸೇವೆಸಲ್ಲಿಸಿದ್ದಾರೆ. ಆದರೆ ತುಂಬಿದ ಕೊಡ ತುಳುಕುವುದಿಲ್ಲ ಎಂಬಂತೆ ಅನುಸೂಯ, ವೈದ್ಯ ಸೇವೆಯ ಜೊತೆಗೆ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಯನವನ್ನು ಪ್ರಾರಂಭ ಮಾಡಿದ್ದರು. ಇದೀಗ, ಬಿಎ ಪದವಿಯನ್ನು ಸ್ವರ್ಣಪದಕದೊಂದಿಗೆ ಪೂರ್ತಿ ಗೊಳಿಸಿದ್ದಾರೆ. ಇದರ ಜೊತೆಗೆ ಎಂಎ, ಪಿಎಚ್​​ಡಿ, ಆಫ್ತಾಮಾಲಜಿಯಲ್ಲಿ ಎಂಎಸ್, ಪ್ರಸೂತಿ ವಿಭಾಗದಲ್ಲಿ ಎಂಡಿ ಹಾಗೂ ಆಕ್ಯೂಪಂಚರ್ ವಿಭಾಗದಲ್ಲಿ ಎಂಡಿ ಪದವಿಯನ್ನು ಪಡೆದು, ಸ್ತ್ರೀ ರೋಗ ಮತ್ತು ನೇತ್ರತಜ್ಞೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶುಕ್ರವಾರ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಒಟ್ಟು 30 ಮಂದಿಗೆ ಪಿಎಚ್​ಡಿ ಪದವಿ ಹಾಗೂ 43 ಮಂದಿಗೆ ಎಂಫಿಲ್ ಪದವಿ ನೀಡಲಾಯಿತು. 2018-19ರ ಸಾಲಿನ 13 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ 17 ಮಂದಿಗೆ 20 ಚಿನ್ನದ ಪದಕವನ್ನು ವಿತರಣೆ ಮಾಡಲಾಯಿತು.

ಇದನ್ನೂ ಓದಿ:

 ದಾವಣಗೆರೆ ವಿಶ್ವವಿದ್ಯಾಲಯ ಘಟಿಕೋತ್ಸವ: ಮೆದುಳಿನಲ್ಲಿ ರಕ್ತಸ್ರಾವ ಆದರೂ ಛಲ ಬಿಡದೆ ಚಿನ್ನದ ಪದಕ ಮುಡಿಗೇರಿಸಿಕೊಂಡ ಯುವತಿ

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ; 14 ಚಿನ್ನದ ಪದಕಗಳಿಸಿ ಸಂಭ್ರಮಿಸಿದ ವಿದ್ಯಾರ್ಥಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ