Gold Price | ಚಿನ್ನದ ದರ ಸತತ ಇಳಿಕೆ; ಖರೀದಿಗೆ ಮುಂದಾದ ಗ್ರಾಹಕರು

ಕಳೆದ ವರ್ಷಕ್ಕೆ ಹೋಲಿಸಿದರೆ ಚಿನ್ನ ದರ ಭಾರೀ ಪ್ರಮಾಣದ ಕುಸಿತ ಕಂಡಿದೆ. ದರ ಇಳಿಕೆಯತ್ತ ಸಾಗಿರುವುದು ಗ್ರಾಹಕರಿಗೆ ಖುಷಿ ತಂದಿದೆ.

Gold Price | ಚಿನ್ನದ ದರ ಸತತ ಇಳಿಕೆ; ಖರೀದಿಗೆ ಮುಂದಾದ ಗ್ರಾಹಕರು
ಸಾಂದರ್ಭಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 14, 2021 | 2:24 PM

ಬೆಂಗಳೂರು: ಚಿನ್ನದ ಬೆಲೆ ಇಳಿಯುತ್ತಿದ್ದು ಗ್ರಾಹಕರಿಗೆ ಖುಷಿ ತಂದಿದೆ. ಕಳೆದ ಶುಕ್ರವಾರ ಗೋಲ್ಡ್​ ಫ್ಯೂಚರ್ಸ್​ ಕುಸಿತ ಕಂಡಿದ್ದು, 10 ಗ್ರಾಂ ಚಿನ್ನದ ದರ ₹ 44,271ಕ್ಕೆ ಬಂದಿತ್ತು. ಇದು ಒಂದುವರ್ಷದ ಕನಿಷ್ಠ ಮಟ್ಟವಾದ ₹ 44,150ಕ್ಕೆ ಸನಿಹದ ಧಾರಣೆಯಾಗಿದೆ. ಕಳೆದ ವರ್ಷ ಚಿನ್ನದ ವಹಿವಾಟು  ಏರುಗತಿಯಲ್ಲಿಯೇ ಇತ್ತು. ₹ 44,000ದಿಂದ ಮೇಲೇರಲು ಆರಂಭಿಸಿದ ಚಿನ್ನ ₹ 56,000 ಮುಟ್ಟಿ ಮತ್ತೆ ಇಳಿಯಲು ಆರಂಭಿಸಿತ್ತು. ಒಂದು ವರ್ಷದ ಗರಿಷ್ಠ ಮೊತ್ತಕ್ಕೆ ಹೋಲಿಸಿದರೆ ಈಗ ಚಿನ್ನವು ₹ 12,000 ಕಡಿಮೆ ಮೊತ್ತಕ್ಕೆ ವಹಿವಾಟು ನಡೆಸುತ್ತಿದೆ. ಈ ವರ್ಷದ ಆರಂಭದಲ್ಲಿ ನಡೆಯುತ್ತಿದ್ದ ಮೊತ್ತಕ್ಕೆ ಹೋಲಿಸಿದರೆ ಪ್ರತಿ 10 ಗ್ರಾಂ ಚಿನ್ನದ ಬೆಲೆ ಕಳೆದ ಮೂರು ತಿಂಗಳಲ್ಲಿ ₹ 6000ದಷ್ಟು ಕಡಿಮೆಯಾಗಿದೆ.

ಎಂಸಿಎಕ್ಸ್​ನಲ್ಲಿ ಚಿನ್ನದ ಧಾರಣೆ ಸೋಮವಾರ ₹ 44,218, ಮಂಗಳವಾರ ₹ 44,857, ಬುಧವಾರ ₹ 44,792 ರೂಪಾಯಿ ಹಾಗೂ ಗುರುವಾರ ₹ 44,879 ಇತ್ತು. ಮೊದಲೇ ಹೇಳಿದಂತೆ ಶುಕ್ರವಾರದ ಗೋಲ್ಡ್​ ಫ್ಯೂಚರ್ಸ್​ ₹ 44,271ರಲ್ಲಿ ವಹಿವಾಟು ಅಂತ್ಯಕಂಡಿತ್ತು.

ಚಿನ್ನದ ಬೆಲೆಗಳ ಇಳಿಕೆಯು ಚಿನ್ನದ ಮಾರಾಟವನ್ನು ಹೆಚ್ಚಿಸಿದೆ. ಗ್ರಾಹಕರು ಚಿನ್ನ ಕೊಳ್ಳುವತ್ತ ಸಾಗುತ್ತಿದ್ದಾರೆ ಎಂದು ರಾಯಿಟರ್ಸ್ ತನ್ನ ವರದಿಯಲ್ಲಿ ತಿಳಿಸಿದೆ. ಬೆಲೆ ಬದಲಾವಣೆಯಿಂದ ಹೂಡಿಕೆದಾರರು ಹಣವನ್ನು ಎಕ್ಸ್​ಚೇಂಜ್​ಗಳಲ್ಲಿ ಟ್ರೇಡ್ ಆಗುವ ಚಿನ್ನದ ಫಂಡ್​ಗಳಲ್ಲಿ (Exchange Traded Funds – ETF) ಹೂಡಿಕೆ ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ.

ಚಿನ್ನದ ಫಂಡ್​ಗಳಲ್ಲಿ ಕಳೆದ ಮೂರು ತಿಂಗಳಿನಿಂದ ಗಮನಾರ್ಹ ಮೊತ್ತದ ಹೂಡಿಕೆ ಕಂಡುಬರುತ್ತಿದೆ. ಫೆಬ್ರುವರಿಯಲ್ಲಿ ₹ 491 ಕೋಟಿ, ಜನವರಿಯಲ್ಲಿ ₹ 625 ಕೋಟಿ ಹಾಗೂ ಡಿಸೆಂಬರ್​ ತಿಂಗಳಲ್ಲಿ ₹ 431 ಕೋಟಿ ರೂಪಾಯಿ ಹೂಡಿಕೆ ಆಗಿದೆ ಎಂದು ‘ದಿ ಮಿಂಟ್’ ಜಾಲತಾಣ ವರದಿ ಮಾಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ನ ಮೌಲ್ಯ ತುಸು ಇಳಿದಿರುವುದು ಸಹ ಚಿನ್ನದ ಬೆಲೆಯ ಪರಿಣಾಮ ಬೀರಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

ಇದನ್ನೂ ಓದಿ: Gold Silver Price: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ! 1ಕೆಜಿ ಬೆಳ್ಳಿ ದರ 66,900 ರೂಪಾಯಿ

ಇದನ್ನೂ ಓದಿ: Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! 22 ಕ್ಯಾರೆಟ್ 10 ಗ್ರಾಂ ಚಿನ್ನ 42,150 ರೂಪಾಯಿ

Published On - 2:21 pm, Sun, 14 March 21

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?