AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price | ಚಿನ್ನದ ದರ ಸತತ ಇಳಿಕೆ; ಖರೀದಿಗೆ ಮುಂದಾದ ಗ್ರಾಹಕರು

ಕಳೆದ ವರ್ಷಕ್ಕೆ ಹೋಲಿಸಿದರೆ ಚಿನ್ನ ದರ ಭಾರೀ ಪ್ರಮಾಣದ ಕುಸಿತ ಕಂಡಿದೆ. ದರ ಇಳಿಕೆಯತ್ತ ಸಾಗಿರುವುದು ಗ್ರಾಹಕರಿಗೆ ಖುಷಿ ತಂದಿದೆ.

Gold Price | ಚಿನ್ನದ ದರ ಸತತ ಇಳಿಕೆ; ಖರೀದಿಗೆ ಮುಂದಾದ ಗ್ರಾಹಕರು
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Mar 14, 2021 | 2:24 PM

Share

ಬೆಂಗಳೂರು: ಚಿನ್ನದ ಬೆಲೆ ಇಳಿಯುತ್ತಿದ್ದು ಗ್ರಾಹಕರಿಗೆ ಖುಷಿ ತಂದಿದೆ. ಕಳೆದ ಶುಕ್ರವಾರ ಗೋಲ್ಡ್​ ಫ್ಯೂಚರ್ಸ್​ ಕುಸಿತ ಕಂಡಿದ್ದು, 10 ಗ್ರಾಂ ಚಿನ್ನದ ದರ ₹ 44,271ಕ್ಕೆ ಬಂದಿತ್ತು. ಇದು ಒಂದುವರ್ಷದ ಕನಿಷ್ಠ ಮಟ್ಟವಾದ ₹ 44,150ಕ್ಕೆ ಸನಿಹದ ಧಾರಣೆಯಾಗಿದೆ. ಕಳೆದ ವರ್ಷ ಚಿನ್ನದ ವಹಿವಾಟು  ಏರುಗತಿಯಲ್ಲಿಯೇ ಇತ್ತು. ₹ 44,000ದಿಂದ ಮೇಲೇರಲು ಆರಂಭಿಸಿದ ಚಿನ್ನ ₹ 56,000 ಮುಟ್ಟಿ ಮತ್ತೆ ಇಳಿಯಲು ಆರಂಭಿಸಿತ್ತು. ಒಂದು ವರ್ಷದ ಗರಿಷ್ಠ ಮೊತ್ತಕ್ಕೆ ಹೋಲಿಸಿದರೆ ಈಗ ಚಿನ್ನವು ₹ 12,000 ಕಡಿಮೆ ಮೊತ್ತಕ್ಕೆ ವಹಿವಾಟು ನಡೆಸುತ್ತಿದೆ. ಈ ವರ್ಷದ ಆರಂಭದಲ್ಲಿ ನಡೆಯುತ್ತಿದ್ದ ಮೊತ್ತಕ್ಕೆ ಹೋಲಿಸಿದರೆ ಪ್ರತಿ 10 ಗ್ರಾಂ ಚಿನ್ನದ ಬೆಲೆ ಕಳೆದ ಮೂರು ತಿಂಗಳಲ್ಲಿ ₹ 6000ದಷ್ಟು ಕಡಿಮೆಯಾಗಿದೆ.

ಎಂಸಿಎಕ್ಸ್​ನಲ್ಲಿ ಚಿನ್ನದ ಧಾರಣೆ ಸೋಮವಾರ ₹ 44,218, ಮಂಗಳವಾರ ₹ 44,857, ಬುಧವಾರ ₹ 44,792 ರೂಪಾಯಿ ಹಾಗೂ ಗುರುವಾರ ₹ 44,879 ಇತ್ತು. ಮೊದಲೇ ಹೇಳಿದಂತೆ ಶುಕ್ರವಾರದ ಗೋಲ್ಡ್​ ಫ್ಯೂಚರ್ಸ್​ ₹ 44,271ರಲ್ಲಿ ವಹಿವಾಟು ಅಂತ್ಯಕಂಡಿತ್ತು.

ಚಿನ್ನದ ಬೆಲೆಗಳ ಇಳಿಕೆಯು ಚಿನ್ನದ ಮಾರಾಟವನ್ನು ಹೆಚ್ಚಿಸಿದೆ. ಗ್ರಾಹಕರು ಚಿನ್ನ ಕೊಳ್ಳುವತ್ತ ಸಾಗುತ್ತಿದ್ದಾರೆ ಎಂದು ರಾಯಿಟರ್ಸ್ ತನ್ನ ವರದಿಯಲ್ಲಿ ತಿಳಿಸಿದೆ. ಬೆಲೆ ಬದಲಾವಣೆಯಿಂದ ಹೂಡಿಕೆದಾರರು ಹಣವನ್ನು ಎಕ್ಸ್​ಚೇಂಜ್​ಗಳಲ್ಲಿ ಟ್ರೇಡ್ ಆಗುವ ಚಿನ್ನದ ಫಂಡ್​ಗಳಲ್ಲಿ (Exchange Traded Funds – ETF) ಹೂಡಿಕೆ ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ.

ಚಿನ್ನದ ಫಂಡ್​ಗಳಲ್ಲಿ ಕಳೆದ ಮೂರು ತಿಂಗಳಿನಿಂದ ಗಮನಾರ್ಹ ಮೊತ್ತದ ಹೂಡಿಕೆ ಕಂಡುಬರುತ್ತಿದೆ. ಫೆಬ್ರುವರಿಯಲ್ಲಿ ₹ 491 ಕೋಟಿ, ಜನವರಿಯಲ್ಲಿ ₹ 625 ಕೋಟಿ ಹಾಗೂ ಡಿಸೆಂಬರ್​ ತಿಂಗಳಲ್ಲಿ ₹ 431 ಕೋಟಿ ರೂಪಾಯಿ ಹೂಡಿಕೆ ಆಗಿದೆ ಎಂದು ‘ದಿ ಮಿಂಟ್’ ಜಾಲತಾಣ ವರದಿ ಮಾಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ನ ಮೌಲ್ಯ ತುಸು ಇಳಿದಿರುವುದು ಸಹ ಚಿನ್ನದ ಬೆಲೆಯ ಪರಿಣಾಮ ಬೀರಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

ಇದನ್ನೂ ಓದಿ: Gold Silver Price: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ! 1ಕೆಜಿ ಬೆಳ್ಳಿ ದರ 66,900 ರೂಪಾಯಿ

ಇದನ್ನೂ ಓದಿ: Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! 22 ಕ್ಯಾರೆಟ್ 10 ಗ್ರಾಂ ಚಿನ್ನ 42,150 ರೂಪಾಯಿ

Published On - 2:21 pm, Sun, 14 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ