Gold Rate Today: ವಿವಿಧ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಭಾರೀ ಇಳಿಕೆ; ಹೀಗಿದೆ ಬೆಲೆ

Gold Silver Price Today: ಕಳೆದ ಎರಡು ದಿನಗಳಿಂದ ಚಿನ್ನ ದರ ಇಳಿಕೆಯತ್ತ ಸಾಗುತ್ತಿದ್ದರೂ ಕೂಡಾ ಇಂದು ದರವನ್ನು ಗಮನಿಸಿದಾಗ ಚಿನ್ನ ದರ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. ಹಾಗಿದ್ದಾಗ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Gold Rate Today: ವಿವಿಧ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಭಾರೀ ಇಳಿಕೆ; ಹೀಗಿದೆ ಬೆಲೆ
ಸಾಂದರ್ಭಿಕ ಚಿತ್ರ
Follow us
|

Updated on:Mar 30, 2021 | 4:18 PM

ಬೆಂಗಳೂರು: ಕಳೆದೆರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನ ಇಂದು ಮಾರ್ಚ್​ 30ರಂದು ಇಳಿಕೆ ಕಂಡಿದೆ. ದೈನಂದಿನ ದರ ಪರಿಶೀಲನೆಯಲ್ಲಿ ಚಿನ್ನ ದರ ಏರಿಳಿತ ಕಾಣುತ್ತಿರುವುದು ಸಹಜ. ಇನ್ನಿತರ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಇಳಿಕೆ ಕಂಡಿದೆ. ಹಾಗಿದ್ದಾಗ ಬೆಂಗಳೂರಿನಲ್ಲಿ ಚಿನ್ನ ದರ ಹೇಗಿದೆ ಎಂಬುದರ ಮಾಹಿತಿ ನೋಡೋಣ.

ಚೆನ್ನೈ, ದೆಹಲಿ, ಕೊಲ್ಕತ್ತಾ, ಮಧುರೈ, ಜೈಪುರ, ಅಹಮದಾಬಾದ್, ಕೊಯಮತ್ತೂರು ನಗರಗಳಲ್ಲಿ ಚಿನ್ನ ದರ ಏರಿಕೆಯಾಗಿದೆ. ಚಿನ್ನ ದರ ಸರಿ ಸುಮಾರು 48,000 ಗಡಿ ದಾಟಿದೆ. ಹಾಗಿದ್ದಾಗ ಅಂತಹ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಇಳಿಕೆಯಲ್ಲಿದೆ ಎಂದು ವಿಶ್ಲೇಷಿಸಬಹುದು. ಹಣದ ಅವಶ್ಯಕತೆ ಎದುರಾದಾಗ ಚಿನ್ನ ಸಹಾಯವಾಗುವುದಂತೂ ನಿಜ. ಕಷ್ಟ ಕಾಲದಲ್ಲಿ ಸಹಾಯವಾಗುವಂತೆ ಚಿನ್ನದ ಮೇಲೆ ಹೂಡಿಕೆ ಮಾಡುವುದು ಮೊದಲಿನಿಂದಲೂ ಬಂದ ಪದ್ಧತಿ.

22 ಕ್ಯಾರೆಟ್ ಚಿನ್ನ ದರ 1 ಗ್ರಾಂ ಚಿನ್ನ ನಿನ್ನೆ 4,191 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,170 ರೂಪಾಯಿ ನಿಗದಿಯಾಗಿದೆ. 8 ಗ್ರಾಂ ಚಿನ್ನ ನಿನ್ನೆ 33,528 ರೂಪಾಯಿ ನಿಗದಿಯಾಗಿತ್ತು. ದೈನಂದಿನ ದರ ಪರಿಶೀಲಿಸಿದಾಗ 168 ರೂಪಾಯಿ ಇಳಿಕೆ ಕಂಡು ಬಂದಿದ್ದು, ಇಂದು ದರ 33,360 ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ನಿನ್ನೆ 41,910 ರೂಪಾಯಿ ಆಗಿದ್ದು, ಇಂದು ದರ 41,700 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 210 ರೂಪಾಯಿ ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದರ ನಿನ್ನೆ 4,19,100 ರೂಪಾಯಿ ಆಗಿದ್ದು, ಇಂದಿನ ದರ 4,17,000 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,100 ರೂಪಾಯಿ ಇಳಿಕೆ ಕಂಡುಬಂದಿದೆ.

ಚಿನ್ನವನ್ನು ಖರೀದಿಸಿದರೆ ಯಾವಕಾಲಕ್ಕೂ ಹಾಳಾಗುವ ವಸ್ತುವಲ್ಲ. ಆಪತ್ಕಾಲದಲ್ಲಿ ನೆರವಾಗುವ ವಸ್ತುವಾದ್ದರಿಂದಲೇ ಆಪತ್ಕಾಲದ ಬಂಧು ಎಂದು ಚಿನ್ನವನ್ನು ಕರೆಯುತ್ತೇವೆ. ಹಣ ಕೂಡಿಟ್ಟಾಗ ಚಿನ್ನ ಖರೀದಿಸುವುದು ಭಾರತೀಯರ ಲೆಕ್ಕಾಚಾರ. ಚಿನ್ನಕ್ಕೇಂದೇ ಹಣ ಕೂಡಿಡುವ ಪದ್ಧತಿಯೂ ಉಂಟು. ಕೊರೊನಾ ಸೋಂಕು ಎಲ್ಲೆಡೆ ಆರ್ಭಟ ತೋರುತ್ತಿದ್ದಂತೆ, ಜನರು ಹೊರಗಡೆ ಸುತ್ತಾಡುವುದು ಕಡಿಮೆಯಾಯಿತು. ಸಾಮಾಜಿಕ ಅಂತರ ಕಾಪಾಡುವ ದೃಷ್ಟಿಯಿಂದ ಅಂಗಡಿಗಳಲ್ಲಿ ಮಾರಾಟ ಕಡಿಮೆ ಆಗಿದ್ದೆಂತೂ ನಿಜ. ಹಾಗಾಗಿ ಚಿನ್ನ ಬೇಡಿಕೆ ಕುಸಿದಿತ್ತು. ಜೊತೆ ಜೊತೆಗೆ ಚಿನ್ನದ ಪೂರೈಕೆಯಲ್ಲಿಯೂ ಕಡಿಮೆಯಾಗಿತ್ತು. ಹಾಗಾಗಿ ಚಿನ್ನ ದರ ಏರಿಕೆ ಕಂಡಿತ್ತು. ನಂತರದಲ್ಲಿ ಕೊರೊನಾ ಅಲೆಯಿಂದ ಮುಕ್ತರಾಗುತ್ತಾ ಸಾಗಿದಂತೆ ಆರ್ಥಿಕ ಚಟುವಟಿಕೆಗಳು ದೇಶದಲ್ಲಿ ಸುಧಾರಿಸುತ್ತಾ ಬಂದಂತೆ ದರ ಇಳಿಕೆ ಕಂಡಿದೆ.

24 ಕ್ಯಾರೆಟ್ ಚಿನ್ನ ದರ 1 ಗ್ರಾಂ ಚಿನ್ನ ನಿನ್ನೆ 4,572 ರೂಪಾಯಿಗೆ ಮಾರಾಟವಾಗಿತ್ತು. ಇಂದು ದರ 4,549 ರೂಪಾಯಿ ಆಗಿದೆ. 8 ಗ್ರಾಂ ಚಿನ್ನ ನಿನ್ನೆ 36,576 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 36,392 ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 45,720 ರೂಪಾಯಿ ಇದ್ದು, ಇಂದು ದರ 45,490 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 230 ರೂಪಾಯಿ ಇಳಿಕೆ ಕಂಡಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,57,200 ರೂಪಾಯಿಗೆ ನಿಗದಿಯಾಗಿದ್ದು, ಇಂದು ದರ 4,54,900 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,300 ರೂಪಾಯಿ ಇಳಿಕೆ ಕಂಡಿದೆ.

ಬೆಳ್ಳಿ ದರ ಮಾಹಿತಿ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ ದರ ಇಂದು ಕೊಂಚ ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ನಿನ್ನೆ 65.40 ರೂಪಾಯಿ ಇತ್ತು. ಇಂದು ದರ ಏರಿಕೆಯಿಂದ 65.70 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ನಿನ್ನೆ 523.20 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 525.60 ರೂಪಾಯಿ ಆಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 6,570 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 30 ರೂಪಾಯಿ ಏರಿಕೆ ಕಂಡಿದೆ. 1ಕೆಜಿ ಬೆಳ್ಳಿ ದರ ನಿನ್ನೆ 65,400 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 65,700 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 300 ರೂಪಾಯಿ ಏರಿಕೆ ಕಂಡಿದೆ.

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ಕೊಳ್ಳುವ ಆಸೆ ಇದ್ದರೆ.. ದರ ಹೀಗಿದೆ ಗಮನಿಸಿ!

Gold Price Today: ಕೂಡಿಟ್ಟ ಹಣಕ್ಕೆ ಚಿನ್ನ ಕೊಳ್ಳಬಹುದೇ ಎಂದು ಯೋಚಿಸಿ.. ಚಿನ್ನಾಭರಣದ ದರ ಹೀಗಿದೆ!

Published On - 9:02 am, Tue, 30 March 21

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್