AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಇಂದೂ ಏರಿದೆ ಚಿನ್ನದ ಮೌಲ್ಯ.. ಇಲ್ಲಿದೆ ದರ ವಿವರ!

Gold Silver Price in Bangalore: ದಿನ ಸಾಗುತ್ತಿದ್ದಂತೆ ಚಿನ್ನದ ದರ ಏರಿಕೆಯತ್ತ ಸಾಗುತ್ತಲೇ ಇದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,800 ರೂಪಾಯಿ ಆಗಿದೆ.

Gold Rate Today: ಇಂದೂ ಏರಿದೆ ಚಿನ್ನದ ಮೌಲ್ಯ.. ಇಲ್ಲಿದೆ ದರ ವಿವರ!
ಸಾಂದರ್ಭಿಕ ಚಿತ್ರ
shruti hegde
|

Updated on:Apr 08, 2021 | 9:16 AM

Share

ಬೆಂಗಳೂರು: ಕಳೆದ ವಾರ ಚಿನ್ನದ ದರ ಇಳಿಕೆಯತ್ತ ಕುಸಿದಿತ್ತು.‌ ಆದರೀಗ ವಾರ ಕಳೆದ ನಂತರ ದರ ಏರುತ್ತಲೇ ಇದೆ. ಚಿನ್ನ ದರ ಇನ್ನೂ ಕುಸಿಯುತ್ತದೆ ಎಂದು ಕಾದು ಕುಳಿತಿದ್ದ ಗ್ರಾಹಕರಿಗೆ ಚಿನ್ನದ ದರ ಏರಿಕೆ ದೊಡ್ಡ ತಲೆನೋವು ತಂದೊಡ್ಡಿದೆ. 22 ಕ್ಯಾರೆಟ್​ 10 ಗ್ರಾಂ ಚಿನ್ನ ದರ 41 ಸಾವಿರದ ಆಸು ಪಾಸಿನಲ್ಲಿತ್ತು. ಜೊತೆಗೆ 24 ಕ್ಯಾರೆಟ್ ಚಿನ್ನದ ದರ 44 ಸಾವಿರದತ್ತ ಮುಖ ಮಾಡಿತ್ತು. ಆದರೀಗ ಒಂದು ವಾರದಲ್ಲಿ ಚಿನ್ನದ ದರ ಏರಿಕೆ ಕಂಡಿದೆ. ಪ್ರತಿ ನಿತ್ಯ ಕೊಂಚವೇ ದರ ಏರಿತ್ತಾ ಸಾಗಿದ್ದು, ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 42 ಸಾವಿರದ ಗಡಿ ದಾಟಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ದರ 45 ಸಾವಿರದ ಗಡಿ ದಾಟಿದೆ.

ಚಿನ್ನದ ದರ ಇಳಿಕೆ ಕಾಣುತ್ತಿರುವುದನ್ನು ಕಂಡ ಗ್ರಾಹಕರು ಖುಷಿ ಪಟ್ಟಿದ್ದರು. ಜೊತೆಗೆ ಇನ್ನೂ ದರ ಇಳಿಕೆ ಕಂಡು ಬರಬಹುದು ಎಂಬ ನಿರೀಕ್ಷೆಯಲ್ಲೂ ಇದ್ದರು. ಆದರೀಗ ಚಿನ್ನದ ದರ ಏರುತ್ತಲೇ ಇದೆ. ಇನ್ನೂ ಏರಬಹುದು.‌ ದೈನಂದಿನ ಪರಿಶೀಲನೆಯಲ್ಲಿ ಚಿನ್ನದ ದರವನ್ನು ಗಮನಿಸಿದಾಗ ಇಂದು ಗುರವಾರ ಚಿನ್ನದ ದರ ಏರಿಕೆ ಕಂಡಿದೆ.

ಚಿನ್ನ ಕೊಳ್ಳಲು ಮದುವೆ, ವಿಶೇಷಗಳೇ ಬರಬೇಕಂತಿಲ್ಲ. ಸಾಮಾನ್ಯವಾಗಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವುದು ಮೊದಲಿನಿಂದಲೂ ಬಂದಂಥದ್ದು. ಹಣವಿದ್ದಲ್ಲಿ , ಚಿನ್ನದ ದರ ಇಳಿಕೆಯತ್ತ ಸಾಗಿದಾಗಲೇ ಖರೀದಿಸುವುದು ಒಳಿತು. ಕಳೆದ ವರ್ಷದಲ್ಲಿ ಗರಿಷ್ಠ ಮಟ್ಟ ತಲುಪಿದ್ದ ಚಿನ್ನವನ್ನು ಗಮನಿಸಿದ ಗ್ರಾಹಕರು ಚಿನ್ನ ಕೊಳ್ಳುವ ಮಾತು ಸಹ ಆಡುತ್ತಿರಲಿಲ್ಲ. ಆದರೀಗ ಈ ವರ್ಷ ಚಿನ್ನದ ದರ ಗಮನಿಸಿದಾಗ ಕಳೆದ ವರ್ಷಕ್ಕಿಂತ ಚಿನ್ನದ ದರ ಕುಸಿತ ಕಂಡಿದೆ.‌ ಆದರೂ ದೈನಂದಿನ ದರ ಪರಿಶೀಲನೆಯಲ್ಲಿ ಚಿನ್ನದ ದರ ಏರುತ್ತಿದೆ. ಇದೀಗ ಚಿನ್ನ ಕೊಳ್ಳಬೇಕೆಂದೆನಿಸಿದರೆ ಮಾರುಕಟ್ಟೆಯಲ್ಲಿ ದರ ಹೀಗಿದೆ ಗಮನಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ 1 ಗ್ರಾಂಗೆ 4,240 ರೂಪಾಯಿ ಇದ್ದು, ಇಂದು ದರ 4,265 ರೂಪಾಯಿಗೆ ಜಿಗಿದಿದೆ. 8 ಗ್ರಾಂ ಚಿನ್ನದ ದರ ನಿನ್ನೆ 33,920 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 34,120 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ 42,400 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 42,650 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ನಿನ್ನೆ 4,26,500 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,26,500 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿ ಏರಿಕೆ ಕಂಡಿದೆ.

24 ಕ್ಯಾರೆಟ್ 1 ಗ್ರಾಂ ಚಿನ್ನದ ದರ ನಿನ್ನೆ 4,625 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,653 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 37,000 ರೂಪಾಯಿಗೆ ಮಾರಾಟವಾಗಿದ್ದು ಇಂದು 37,224 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 46,250 ರೂಪಾಯಿ ಇದ್ದು, ಇಂದು ದರ 46,530 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ ನಿನ್ನೆ 4,62,500 ರೂಪಾಯಿ ಇತ್ತು. ಇಂದು 2,800 ರೂಪಾಯಿ ಏರಿಕೆಯ ನಂತರದಲ್ಲಿ 4,65,300 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿ ಚಿನ್ನ ದರವನ್ನು ಗಮನಿಸಿದಾಗ ನವದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,800 ರೂಪಾಯಿ ಇದೆ. ಚೆನ್ನೈನಲ್ಲಿ 42,970 ರೂಪಾಯಿಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ದರ 44,300 ರೂಪಾಯಿಗೆ ಮಾರಾಟವಾಗಿದೆ.

ಬೆಳ್ಳಿ ದರ ಮಾಹಿತಿ ದೈನಂದಿನ ದರ ಬದಲಾವಣೆಯನ್ನು ಗಮನಿಸಿದಾಗ ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ. 1 ಗ್ರಾಂ ಬೆಳ್ಳಿ ದರ ನಿನ್ನೆ 65 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 66 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 520 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 530 ರೂಪಾಯಿ ಆಗಿದೆ. 10ಗ್ರಾಂ ಬೆಳ್ಳಿ ನಿನ್ನೆ 650 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 663 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ ನಿನ್ನೆ 6,500 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 6,630 ರೂಪಾಯಿ ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ನಿನ್ನೆ 65,000 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 66,300 ರೂಪಾಯಿಗೆ ಜಿಗಿದಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: Gold Rate Today: ಅಮ್ಮನಿಗೆ ಚಿನ್ನದ ಉಡುಗೊರೆ ಕೊಡುವ ಮನಸ್ಸಿದೆಯೇ?‌ ಕೊಳ್ಳುವುದಾದರೆ ಇಂದಿನ ಚಿನ್ನದ ದರ ಗಮನಿಸಿ!

Gold Price Today: ಕೂಡಿಟ್ಟ ಹಣಕ್ಕೆ ಚಿನ್ನ ಕೊಳ್ಳಬಹುದೇ ಎಂದು ಯೋಚಿಸಿ.. ಚಿನ್ನಾಭರಣದ ದರ ಹೀಗಿದೆ!

( Gold Rate Today in Bengaluru Hyderabad Chennai Mumbai and Delhi silver price on April 8th 2021)

Published On - 8:04 am, Thu, 8 April 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?