Gold Silver Price: ಗ್ರಾಹಕರೇ ಇಲ್ಲೊಮ್ಮೆ ಗಮನಿಸಿ.. ಏರಿಕೆಯತ್ತ ಹೆಜ್ಜೆ ಇಟ್ಟ ಚಿನ್ನ ದರ..

Gold Silver Rate in Bengaluru: ನಿನ್ನೆಗಿಂತ ಇಂದಿನ ದರ ಗಮನಿಸಿದಾಗ ಚಿನ್ನ ಕೊಂಚ ಏರಿಕೆಯತ್ತ ಜಿಗಿದಿದೆ. ಬೆಳ್ಳಿ ದರ ಕೂಡಾ ಬದಲಾವಣೆ ಕಂಡಿದ್ದು, ನಿನ್ನೆಗಿಂತ ದರದಲ್ಲಿ ಹೆಚ್ಚಳ ಕಂಡು ಬಂದಿದೆ.

Gold Silver Price: ಗ್ರಾಹಕರೇ ಇಲ್ಲೊಮ್ಮೆ ಗಮನಿಸಿ.. ಏರಿಕೆಯತ್ತ ಹೆಜ್ಜೆ ಇಟ್ಟ ಚಿನ್ನ ದರ..
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Mar 02, 2021 | 9:10 AM

ಬೆಂಗಳೂರು: ಚಿನ್ನ ದರ ಹಾವು ಎಣಿ ಆಟ ಆಡುತ್ತಿರುವುದು ಸರ್ವೇಸಾಮಾನ್ಯ. ಕಳೆದ 2 ದಿನದಿಂದ ಇಳಿಕೆಯತ್ತ ಸಾಗುತ್ತಿದ್ದ ಚಿನ್ನ ಇಂದು ಕೊಂಚ ಏರಿಕೆಯತ್ತ ಮುಖ ಮಾಡಿದೆ. 22 ಕ್ಯಾರೆಟ್​ 10 ಗ್ರಾಂ ಚಿನ್ನ ದರ ಇಂದು 43,050 ರೂಪಾಯಿ ಅಗಿದೆ. ಹಾಗೂ 24 ಕ್ಯಾರೆಟ್​ 10 ಗ್ರಾಂ ಚಿನ್ನ ದರ 46,970 ರೂಪಾಯಿ ಆಗಿದೆ. ಹಾಗೆಯೇ ಬೆಳ್ಳಿ ದರ ಕೂಡಾ ಏರಿಕೆಯತ್ತ ಸಾಗಿದ್ದು ಇಂದಿನ ದರ 1ಕೆ.ಜಿ ಬೆಳ್ಳಿಗೆ 70,100 ರೂಪಾಯಿ ಇದೆ. ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯದಲ್ಲಿ ಏರಿಳಿತ ಕಾಣುತ್ತಿದೆ. ಇದಕ್ಕೆ ಕಾರಣವೇನೆಂದರೆ, ಡಾಲರ್ ಮೌಲ್ಯದಲ್ಲಿ ಆಗುತ್ತಿರುವ ಏರಿಳಿತ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುವ ಬೆಲೆಯ ಏರಿಳಿತಗಳು, ಭಾರತದ ಚಿನ್ನದ ಮಾರುಕಟ್ಟೆ ಮೇಲೆ ಪ್ರಭಾವ ಬೀರುತ್ತದೆ.

ಕಳೆದ ಎರಡು ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ಚಿನ್ನ ದರ ಇದೀಗ ಕೊಂಚ ಏರಿಕೆ ಕಂಡಿದೆ. ಆದರೂ, ಕಳೆದ ವರ್ಷಕ್ಕೆ ಹೋಲಿಸಿದರೆ ಚಿನ್ನ ಗಗನ ಮುಟ್ಟಿಲ್ಲ ಎಂಬುದು ಗ್ರಾಹಕರಿಗೆ ನಿರಳಾದ ವಿಚಾರ. ಪೆಟ್ರೋಲ್, ಡೀಸೆಲ್ ಸೇರಿದಂತೆ ಸಿಲಿಂಡರ್​ (ಗ್ಯಾಸ್) ದರ ಕೂಡಾ ಒಂದೇ ಸಮನೇ ಏರಿಕೆಯತ್ತಲೇ ಸಾಗುತ್ತಿದೆ. ಇದರಿಂದಾಗ ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಜೊತೆಯಲ್ಲಿಯೇ ಚಿನ್ನ ದರವೂ ಗಗನಕ್ಕೇರಿದ್ದರೆ ಗ್ರಾಹಕರಿಗೆ ತುಂಬಾ ಕಷ್ಟವಾಗಿ ಬಿಡುತ್ತಿತ್ತು. ಚಿನ್ನ ದರ ಹಾವು ಏಣಿ ಆಟ ಆಡುತ್ತಿದ್ದರೂ ಕೂಡಾ ದರ ಅತಿರೇಕದ ಏರಿಕೆ ಕಂಡಿಲ್ಲ ಎಂಬುದು ಸಂತೋಷ ತರುವ ವಿಚಾರ.

22 ಕ್ಯಾರೆಟ್ ಚಿನ್ನ ದರ 1ಗ್ರಾಂ ಚಿನ್ನದರ ನಿನ್ನೆ 4,269 ರೂಪಾಯಿಗೆ ಮಾರಾಟವಾಗಿತ್ತು. ಆದರೆ 4,305 ರೂಪಾಯಿಗೆ ಏರಿದೆ. 8 ಗ್ರಾಂ ಚಿನ್ನ ದರ ನಿನ್ನೆ 34,152 ರೂಪಾಯಿ ಇದ್ದು, ಇಂದಿನ ದರ 34,440 ರೂಪಾಯಿ ಏರಿಕೆ ಕಂಡಿದೆ. ದೈನಂದಿನ ದರ ಬದಲಾವಣೆಯಲ್ಲಿ 288 ರೂಪಾಯಿಯಷ್ಟು ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 42,690 ರೂಪಾಯಿ ಇದ್ದು, ಇಂದು ದರ 43,050 ರೂಪಾಯಿಗೆ ಏರಿಕೆಯಾಗಿದೆ. ಸುಮಾರು 360 ರೂಪಾಯಿಯಷ್ಟು ಏರಿಕೆ ಕಂಡಿದೆ. 100 ಗ್ರಾಂ ಚಿನ್ನ ನಿನ್ನೆ 4,26,900 ರೂಪಾಯಿಗೆ ಮಾರಾಟವಾಗಿತ್ತು. ಇದೀಗ ಚಿನ್ನ ದರ 4,30,500 ರೂಪಅಯಿ ಆಗಿದೆ. ಅಂದರೆ ದರ ಬದಲಾವಣೆಯಲ್ಲಿ 3,600 ರೂಪಾಯಿ ಏರಿಕೆ ಕಂಡಿದೆ.

24 ಕ್ಯಾರೆಟ್​ ಚಿನ್ನ ದರ 1 ಗ್ರಾಂ ಚಿನ್ನ ದರ ನಿನ್ನೆ 4,657 ರೂಪಾಯಿಗೆ ಮಾರಾಟವಾಗಿದೆ. ಇಂದಿನ ದರ 4,697 ರೂಪಾಯಿಗೆ ಏರಿಕೆಯಾಗಿದ್ದು, ದರ ಬದಲಾವಣೆಯಲ್ಲಿ 40 ರೂಪಾಯಿ ಏರಿಕೆ ಕಂಡಿದೆ. 8 ಗ್ರಾಂ ಚಿನ್ನ ನಿನ್ನೆ 37,256 ರೂಪಾಯಿ ಇದ್ದು, ಇಂದಿನ ದರ 37,576 ರೂಪಾಯಿ ಆಗಿದೆ. ಅಂದರೆ ದೈನಂದಿನ ದರ ಬದಲಾವಣೆಯಲ್ಲಿ 320 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 46,570 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 46,970 ರೂಪಾಯಿ ಆಗಿದೆ. ಹಾಗೂ 100 ಗ್ರಾಂ ಚಿನ್ನ ದರ ನಿನ್ನೆ 4,65,700 ರೂಪಾಯಿ ಇದ್ದು, ಇಂದಿನ ದರ 4,69,700 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,000 ರೂಪಾಯಿಯಷ್ಟು ಏರಿಕೆ ಕಂಡಿದೆ.

ಬೆಳ್ಳಿ ದರ: ಬೆಳ್ಳಿ ದರವೂ ಕೂಡಾ ನಿನ್ನೆಗಿಂತ ಕೊಂಚ ಏರಿಕೆಯತ್ತ ಸಾಗಿದೆ. ನಿನ್ನೆ 1 ಗ್ರಾಂ ಬೆಳ್ಳಿ 69.30 ರೂಪಾಯಿ ಇದ್ದು, ಇಂದು 70.10 ರೂಪಾಯಿಗೆ ಏರಿಕೆಯಾಗಿದೆ. 8 ಗ್ರಾಂ ಬೆಳ್ಳಿ ನಿನ್ನೆ 554.40 ರೂಪಾಯಿತ್ತು, ಇಂದಿನ ದರ 560 ರೂಪಾಯಿಗೆ ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 693 ರೂಪಾಯಿ ಇದ್ದು, ಇಂದಿನ ದರ 701 ರೂಪಾಯಿ ಆಗಿದೆ.100 ಗ್ರಾಂ ಬೆಳ್ಳಿ ದರ ನಿನ್ನೆ 6,930 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 7,010 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ 1 ಕೆ.ಜಿ ಬೆಳ್ಳಿ ದರ ನಿನ್ನೆ 69,300 ರೂಪಾಯಿ ಇದ್ದು, ಇಂದಿನ ದರ 70,100ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿGold Silver Price: ಮಾರ್ಚ್​ ತಿಂಗಳ ಆರಂಭ.. ಇಳಿಕೆಯತ್ತ ಸಾಗುತ್ತಿರುವ ಚಿನ್ನದ ದರ!

ಇದನ್ನೂ ಓದಿ: Gold/Silver Prices: ಚಿನ್ನ ದರ ಕೊಂಚ ಏರಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Published On - 8:52 am, Tue, 2 March 21

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​