Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳಸಾಗಾಣಿಕೆ: ಪತಿ ನೀಡಿದ ಸುಳಿವಿನಿಂದ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ ರಾವ್​?

ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ.ನಟಿ ರನ್ಯಾ ರಾವ್ ಬಂಧನ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ಮಧ್ಯೆ ನಟಿ ರನ್ಯಾ ರಾವ್​ ಡಿಆರ್​​​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಹೇಗೆ? ಎಂಬ ಪ್ರಶ್ನೆ ಉದ್ಭವಾಗಿದೆ. ರಾನ್ಯಾ ರಾವ್ ಪದೇ ಪದೇ ವಿದೇಶ ಪ್ರಯಾಣ ಮಾಡುತ್ತಿದ್ದರು, ಇದು ಡಿಆರ್​ಐ ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿತ್ತು. ಅಲ್ಲದೇ, ರನ್ಯಾ ರಾವ್​ ಪತಿಯೇ ಈ ಬಗ್ಗೆ ಡಿಆರ್​ಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ಅನುಮಾನವೂ ಇದೆ. ರನ್ಯಾ ರಾವ್​ ಒಂದೇ ವರ್ಷದಲ್ಲಿ 28 ಬಾರಿ ವಿದೇಶ ಪ್ರಯಾಣ ಮಾಡಿದ್ದಾರೆ.

ಚಿನ್ನ ಕಳ್ಳಸಾಗಾಣಿಕೆ: ಪತಿ ನೀಡಿದ ಸುಳಿವಿನಿಂದ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ ರಾವ್​?
ನಟಿ ರನ್ಯಾ ರಾವ್​
Follow us
Kiran HV
| Updated By: ವಿವೇಕ ಬಿರಾದಾರ

Updated on:Mar 11, 2025 | 10:06 AM

ಬೆಂಗಳೂರು, ಮಾರ್ಚ್​ 11: ಚಿನ್ನ ಕಳ್ಳಸಾಗಾಣಿಕೆ (Gold Smuggling) ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್​ (Ranya Rao) ಸದ್ಯ ನಾಯಾಂಗ ಬಂಧನದಲ್ಲಿದ್ದಾರೆ. ಅಷ್ಟಕ್ಕೂ ನಟಿ ರನ್ಯಾ ರಾವ್​ ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಹೇಗೆ? ಎಂಬ ಪ್ರಶ್ನೆ ಉದ್ಭವಾಗಿದೆ. ನಟಿ ರನ್ಯಾ ರಾವ್​ ಹೆಚ್ಚು ವಿದೇಶ ಪ್ರಯಾಣ ಮಾಡುತ್ತಿದ್ದರು. ಮದುವೆಯಾದ ನಂತರವೂ ತಮ್ಮ ವಿದೇಶ ಪ್ರಯಾಣವನ್ನು ಮುಂದುವರೆಸಿದ್ದರು.

ಮದುವೆಯಾದ ಎರಡೇ ತಿಂಗಳಿಗೆ ನಟಿ ರನ್ಯಾ ರಾವ್ ವಿದೇಶಕ್ಕೆ ತೆರಳಿದ್ದರು. ಇದು, ಸಂಸಾರದಲ್ಲಿ ಬಿರುಕು ಮೂಡಲು ಕಾರಣವಾಗಿತ್ತಂತೆ. ರನ್ಯಾ ರಾವ್​ ಪದೇ ಪದೆ ವಿದೇಶಕ್ಕೆ ಪ್ರಯಾಣ ಮಾಡುವ ವಿಚಾರವಾಗಿ ಪತಿ-ಪತ್ನಿ ನಡುವೆ ಜಗಳವಾಗಿದ್ದು, ವಿಚ್ಛೇದನ ಹಂತಕ್ಕೂ ತಲುಪಿತ್ತಂತೆ. ಈ ಹಿನ್ನೆಲೆಯಲ್ಲಿ ಚಿನ್ನ ಕಳ್ಳಸಾಗಾಣಿಕೆ ಬಗ್ಗೆ ಸ್ವತಃ ರನ್ಯಾ ರಾವ್​ ಪತಿಯೇ ಡಿಆರ್​ಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಡಿಆರ್​ಐಗೆ ನಟಿ ಮೇಲೆ ಮೂಡಿದ್ದ ಅನುಮಾನ

ನಟಿ ರನ್ಯಾ ರಾವ್​ ಹೆಚ್ಚು ಹೆಚ್ಚು ವಿದೇಶ ಪ್ರಯಾಣ ಮಾಡುತ್ತಿದ್ದರು. ಇದು, ಡಿಐಆರ್​ ಅಧಿಕಾರಿಗಳಲ್ಲಿ ಅನುಮಾನ ಹುಟ್ಟುವಂತೆ ಮಾಡಿತ್ತು. ಹೀಗಾಗಿ, ರನ್ಯಾ ರಾವ್​ ಟ್ರಾವೆಲಿಂಗ್​ ಹಿಸ್ಟ್ರಿ ಮೇಲೆ ಡಿಐಆರ್ ಅಧಿಕಾರಿಗಳು ಕಳೆದ ಆರು ಕಣ್ಣಿಟ್ಟಿದ್ದರು. ನಟಿ ರನ್ಯಾ ರಾವ್ ಒಂದೇ ದಿನಕ್ಕೆ ದುಬೈಗೆ ಹೋಗಿ ಬರುತ್ತಿದ್ದಳು. ಈ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್​ ಮೇಲೆ ದೆಹಲಿಯ ಡಿಆರ್‌ಐ ಅಧಿಕಾರಿಗಳು ನಿಗಾ ಇಟ್ಟಿದ್ದರು. ಹೀಗಾಗಿ, ನಟಿ ರನ್ಯಾ ರಾವ್ ಡಿಆರ್​ಐ ಬಲೆಗೆ ಬಿದ್ದಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ
Image
ಚಿನ್ನ ಕಳ್ಳ ಸಾಗಣೆ: ರನ್ಯಾ ಜತೆ ನಿರಂತರ ಸಂಪರ್ಕದಲ್ಲಿ ಇದ್ದ ಪ್ರಭಾವಿಗಳು
Image
ಸ್ಮಗ್ಲಿಂಗ್ ಹಿಂದಿರೋ ಸಚಿವರಾರು? ಸದನದಲ್ಲೂ ಸದ್ದು ಮಾಡಿದ ರನ್ಯಾ ರಾವ್ ಕೇಸ್
Image
ರನ್ಯಾ ಪ್ರಕರಣ: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ
Image
ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ರಾಜಕಾರಣಿ

ಇನ್ನು, ಚಿನ್ನ ವ್ಯಾಪರಿಗಳ ದ್ವೇಷದಿಂದ ಮತ್ತು ಸಚಿವರೊಬ್ಬರು ದೆಹಲಿಯ ಅಧಿಕಾರಿಗಳಿಗೆ ನೀಡಿದ ಮಾಹಿತಿಯಿಂದ ರನ್ಯಾ ರಾವ್​ ಡಿಆರ್​ಐ ಅಧಿಕಾರಿಗಳ ಬಲೆಗೆ ಬಿದ್ದಿದ್ದಾಳೆ ಎಂಬ ಅನುಮಾನವೂ ಇದೆ.

28 ಬಾರಿ ವಿದೇಶಿ ಪ್ರಯಾಣ

ನಟಿ ರನ್ಯಾ ರಾವ್​ ಒಂದೇ ವರ್ಷದಲ್ಲಿ 28 ಬಾರಿ ವಿದೇಶಿ ಪ್ರಯಾಣ ಮಾಡಿದ್ದಳು. ಕಳೆದ 15 ದಿನದಲ್ಲಿ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದಳು. ಐದನೇ ಬಾರಿ ಪ್ರಯಾಣದ ವೇಳೆ ರನ್ಯಾ ರಾವ್ ಸಿಕ್ಕಿಬಿದ್ದಾಳೆ. ನಟಿ ರನ್ಯಾ ರಾವ್ ಬಂಧನದ ಬೆನ್ನಲ್ಲೆ ಮತ್ತೊಬ್ಬ ಆರೋಪಿಯನ್ನು ಡಿಆರ್​ಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತವಾಗಿರುವ ಎರಡನೇ ಆರೋಪಿ ತರುಣ್ ಕೊಂಡಾರುರಾಜು ಗೊಲ್ಡ್ ಸ್ಮಗ್ಲಿಂಗ್​ನ ಕಿಂಗ್ ಪಿನ್ ಆಗಿದ್ದಾನೆ.

ನಟಿ ರನ್ಯಾ ರಾವ್​ ಮುಖಾಂತರ ದುಬೈನಿಂದ ಬೆಂಗಳೂರಿಗೆ ತರುಣ್ ಚಿನ್ನ ತರಿಸುತ್ತಿದ್ದಿದ್ದನು. ಬೆಂಗಳೂರಿನಿಂದ ಹವಾಲ ಮೂಲಕ ಹಣ ದುಬೈಗೆ ಕಳುಹಿಸುತ್ತಿದ್ದನು. ಮತ್ತು ದುಬೈನಲ್ಲಿ ಚಿನ್ನ ಖರೀದಿ, ಟ್ರಾನ್ಸಪೋರ್ಟ್ ಖರ್ಚನ್ನು ತರುಣ್ ನೋಡಿಕೊಳ್ಳುತ್ತಿದ್ದಿದ್ದನು. ಐಪಿಎಸ್ ಅಧಿಕಾರಿ ಮಗಳಾದ ಹಿನ್ನೆಲೆಯಲ್ಲಿ ರನ್ಯಾ ರಾವ್​ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ಇಲ್ಲದೇ ಹೊರ ಬರುತ್ತಾಳೆ. ಇದನ್ನು ತಿಳಿದ ತರುಣ ಆಕೆಯ ಜೊತೆ ಸೇರಿ ಚಿನ್ನ ಕಳ್ಳಸಾಗಾಣಿಕೆಗೆ ಪ್ಲಾನ್​ ಮಾಡಿದ್ದನು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 am, Tue, 11 March 25

ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!