AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಯುಗಾದಿಯಂದು ಗೊಂಬೆ ಹೇಳುತೈತೆ: ಕುತೂಹಲ ಮೂಡಿಸಿದ ರಾಜಕೀಯ ಭವಿಷ್ಯ

ರಾಜಕೀಯ, ಮಳೆ, ಬೆಳೆಯ ಬಗ್ಗೆ ನಾಳೆ  ಗೊಂಬೆಗಳ ಭವಿಷ್ಯ ನಿರ್ಧಾರವಾಗಲಿದೆ. ಗ್ರಾಮಸ್ಥರು ಎತ್ತು, ಗೊಂಬೆ, ವಿವಿಧ ಮಳೆಗಳ ಹೆಸರಿನ ಮೇಲೆ ಕಾಳನ್ನು ಹಳ್ಳದಲ್ಲಿಡುತ್ತಾರೆ. ಸದ್ಯ ಫಲ ಭವಿಷ್ಯದ ಪ್ರತಿಷ್ಠಾಪನೆ ಮಾಡಿರೋ ಗ್ರಾಮದ ಪ್ರಮುಖರು, ನಾಳೆ ಬೆಳಗ್ಗೆ ಭವಿಷ್ಯ ಗೊತ್ತಾಗಲಿದೆ.

ಧಾರವಾಡದಲ್ಲಿ ಯುಗಾದಿಯಂದು ಗೊಂಬೆ ಹೇಳುತೈತೆ: ಕುತೂಹಲ ಮೂಡಿಸಿದ ರಾಜಕೀಯ ಭವಿಷ್ಯ
ಗೊಂಬೆ ಭವಿಷ್ಯ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Apr 08, 2024 | 9:32 PM

Share

ಧಾರವಾಡ, ಏಪ್ರಿಲ್ 08: ಪ್ರತಿ ವರ್ಷದಂತೆ ಈ ವರ್ಷವು ಧಾರವಾಡ ತಾಲೂಕಿನ ಹನುಮನಕೊಪ್ಪ ಗ್ರಾಮದ ಹಳ್ಳದಲ್ಲಿ ಸೇನಾಧಿಪತಿ ಗೊಂಬೆ (Gombe), ಮಣ್ಣಿನ ಎತ್ತು ಮಾಡಿ ಗ್ರಾಮಸ್ಥರು ಫಲ ಕಟ್ಟುತ್ತಾರೆ. ಈ ಸಲದ ಗೊಂಬೆ ಭವಿಷ್ಯ ಏನಾಗಲಿದೆ ಅನ್ನೋ ಕುತೂಹಲ  ಎಲ್ಲರಿಗೂ ಇದೆ. ರಾಜಕೀಯ, ಮಳೆ, ಬೆಳೆಯ ಬಗ್ಗೆ ನಾಳೆ  ಗೊಂಬೆಗಳ ಭವಿಷ್ಯ ನಿರ್ಧಾರವಾಗಲಿದೆ. ಗ್ರಾಮಸ್ಥರು ಎತ್ತು, ಗೊಂಬೆ, ವಿವಿಧ ಮಳೆಗಳ ಹೆಸರಿನ ಮೇಲೆ ಕಾಳನ್ನು ಹಳ್ಳದಲ್ಲಿಡುತ್ತಾರೆ. ಸದ್ಯ ಫಲ ಭವಿಷ್ಯದ ಪ್ರತಿಷ್ಠಾಪನೆ ಮಾಡಿರೋ ಗ್ರಾಮದ ಪ್ರಮುಖರು, ನಾಳೆ ಬೆಳಗ್ಗೆ ಭವಿಷ್ಯ ಗೊತ್ತಾಗಲಿದೆ.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುವುದನ್ನು, ಕಳೆದ ಸಲ ರಾಜ್ಯದಲ್ಲಿ ಅಧಿಕಾರ ಬದಲಿ, ಇಂದಿರಾ ಗಾಂಧಿ ನಿಧನದ ಸುದ್ದಿಯನ್ನೂ ಮುಂಚಿತವಾಗಿ ಗೊಂಬೆಗಳು ಭವಿಷ್ಯ ನುಡಿದಿದ್ದವು. ಆಯಾ ದಿಕ್ಕಿನಲ್ಲಿ ಪ್ರತಿಷ್ಠಾಪನೆಯಾಗುವ ಸೇನಾಪತಿ ಗೊಂಬೆಗಳು, ಯಾವ ದಿಕ್ಕಿನ ಗೊಂಬೆಗೆ ಪೆಟ್ಟಾಗುತ್ತೋ ಅದರ ಮೇಲೆ ಭವಿಷ್ಯ ನಿರ್ಧಾರ ಮಾಡಲಾಗುತ್ತದೆ.

ಇದನ್ನೂ ಓದಿ: ಬಿಸಿಲಿನ ತಾಪಕ್ಕೆ ಮೂಕ ಪ್ರಾಣಿಗಳ ಗೋಳಾಟ: ಆಹಾರಕ್ಕಾಗಿ ಮಂಗಗಳ ಪರದಾಟ

ಒಂದು ವೇಳೆ ಯಾವುದೇ ದಿಕ್ಕಿಗೆ ಪೆಟ್ಟಾಗದೇ ಹೋದರೆ ಯಾವುದೇ ಬದಲಾವಣೆ ಇಲ್ಲ ಅಂತ ಭವಿಷ್ಯ ನಿರ್ಧಾರ. ನೂರಾರು ವರ್ಷಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.

ಸಾಮಾನ್ಯವಾಗಿ ಯುಗಾದಿ ಅಂದರೆ ಹಿಂದು ವರ್ಷದ ಆರಂಭ ಇದ್ದಂತೆ. ಈ ಸಮಯದಲ್ಲಿ ರೈತರು ವರ್ಷದ ಕೃಷಿ ಲೆಕ್ಕಾಚಾರಗಳನ್ನು ಹಾಕುವುದು ರೂಢಿ. ಆಯಾ ವರ್ಷ ಏನು ಬೆಳೆ ತೆಗೆಯಬೇಕು ಅನ್ನೋದನ್ನು ಅನೇಕ ಕಡೆ ಅನೇಕ ರೀತಿಯಲ್ಲಿ ನೋಡುತ್ತಾರೆ. ಅಂತಹುದೇ ಒಂದು ಪದ್ಧತಿ ಧಾರವಾಡ ತಾಲೂಕಿನ ಹನುಮನಕೊಪ್ಪ ಗ್ರಾಮದಲ್ಲಿದೆ.

ಇದನ್ನೂ ಓದಿ: ರಂಜಾನ್​ಗೆ ಪ್ರಾಮುಖ್ಯತೆ, ಯುಗಾದಿ ಕಡೆಗಣನೆ: ರೇಷ್ಮೆ ಇಲಾಖೆ ಉಪ ನಿರ್ದೇಶಕರ ವಿರುದ್ಧ ಆರೋಪ

ಇಲ್ಲಿನ ತುಪ್ಪರಿಹಳ್ಳದಲ್ಲಿ ಗ್ರಾಮಸ್ಥರೆಲ್ಲ ಸೇರಿ ಯುಗಾದಿ ಅಮಾವಾಸ್ಯೆಯ ಸಂಜೆ ಹೊತ್ತು ಹೋಗಿ ಮಣ್ಣಿನಿಂದ ಗೊಂಬೆ ತಯಾರಿಸಿ, ಆಯಾ ಮಳೆಗಳ ಹೆಸರಿನಲ್ಲಿ ಎಕ್ಕೆ ಎಲೆಯಲ್ಲಿ ಕಾಳುಗಳನ್ನು ಹಾಕಿ ಮಳೆ ಬೆಳೆ ನೋಡುತ್ತಾರೆ. ಈ ಫಲ ಭವಿಷ್ಯದಲ್ಲಿಯೇ ರಾಜಕೀಯ ಭವಿಷ್ಯ ನೋಡಿಕೊಂಡು ಬರುವ ರೂಢಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!