AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಯುಗಾದಿಯಂದು ಗೊಂಬೆ ಹೇಳುತೈತೆ: ಕುತೂಹಲ ಮೂಡಿಸಿದ ರಾಜಕೀಯ ಭವಿಷ್ಯ

ರಾಜಕೀಯ, ಮಳೆ, ಬೆಳೆಯ ಬಗ್ಗೆ ನಾಳೆ  ಗೊಂಬೆಗಳ ಭವಿಷ್ಯ ನಿರ್ಧಾರವಾಗಲಿದೆ. ಗ್ರಾಮಸ್ಥರು ಎತ್ತು, ಗೊಂಬೆ, ವಿವಿಧ ಮಳೆಗಳ ಹೆಸರಿನ ಮೇಲೆ ಕಾಳನ್ನು ಹಳ್ಳದಲ್ಲಿಡುತ್ತಾರೆ. ಸದ್ಯ ಫಲ ಭವಿಷ್ಯದ ಪ್ರತಿಷ್ಠಾಪನೆ ಮಾಡಿರೋ ಗ್ರಾಮದ ಪ್ರಮುಖರು, ನಾಳೆ ಬೆಳಗ್ಗೆ ಭವಿಷ್ಯ ಗೊತ್ತಾಗಲಿದೆ.

ಧಾರವಾಡದಲ್ಲಿ ಯುಗಾದಿಯಂದು ಗೊಂಬೆ ಹೇಳುತೈತೆ: ಕುತೂಹಲ ಮೂಡಿಸಿದ ರಾಜಕೀಯ ಭವಿಷ್ಯ
ಗೊಂಬೆ ಭವಿಷ್ಯ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Apr 08, 2024 | 9:32 PM

Share

ಧಾರವಾಡ, ಏಪ್ರಿಲ್ 08: ಪ್ರತಿ ವರ್ಷದಂತೆ ಈ ವರ್ಷವು ಧಾರವಾಡ ತಾಲೂಕಿನ ಹನುಮನಕೊಪ್ಪ ಗ್ರಾಮದ ಹಳ್ಳದಲ್ಲಿ ಸೇನಾಧಿಪತಿ ಗೊಂಬೆ (Gombe), ಮಣ್ಣಿನ ಎತ್ತು ಮಾಡಿ ಗ್ರಾಮಸ್ಥರು ಫಲ ಕಟ್ಟುತ್ತಾರೆ. ಈ ಸಲದ ಗೊಂಬೆ ಭವಿಷ್ಯ ಏನಾಗಲಿದೆ ಅನ್ನೋ ಕುತೂಹಲ  ಎಲ್ಲರಿಗೂ ಇದೆ. ರಾಜಕೀಯ, ಮಳೆ, ಬೆಳೆಯ ಬಗ್ಗೆ ನಾಳೆ  ಗೊಂಬೆಗಳ ಭವಿಷ್ಯ ನಿರ್ಧಾರವಾಗಲಿದೆ. ಗ್ರಾಮಸ್ಥರು ಎತ್ತು, ಗೊಂಬೆ, ವಿವಿಧ ಮಳೆಗಳ ಹೆಸರಿನ ಮೇಲೆ ಕಾಳನ್ನು ಹಳ್ಳದಲ್ಲಿಡುತ್ತಾರೆ. ಸದ್ಯ ಫಲ ಭವಿಷ್ಯದ ಪ್ರತಿಷ್ಠಾಪನೆ ಮಾಡಿರೋ ಗ್ರಾಮದ ಪ್ರಮುಖರು, ನಾಳೆ ಬೆಳಗ್ಗೆ ಭವಿಷ್ಯ ಗೊತ್ತಾಗಲಿದೆ.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುವುದನ್ನು, ಕಳೆದ ಸಲ ರಾಜ್ಯದಲ್ಲಿ ಅಧಿಕಾರ ಬದಲಿ, ಇಂದಿರಾ ಗಾಂಧಿ ನಿಧನದ ಸುದ್ದಿಯನ್ನೂ ಮುಂಚಿತವಾಗಿ ಗೊಂಬೆಗಳು ಭವಿಷ್ಯ ನುಡಿದಿದ್ದವು. ಆಯಾ ದಿಕ್ಕಿನಲ್ಲಿ ಪ್ರತಿಷ್ಠಾಪನೆಯಾಗುವ ಸೇನಾಪತಿ ಗೊಂಬೆಗಳು, ಯಾವ ದಿಕ್ಕಿನ ಗೊಂಬೆಗೆ ಪೆಟ್ಟಾಗುತ್ತೋ ಅದರ ಮೇಲೆ ಭವಿಷ್ಯ ನಿರ್ಧಾರ ಮಾಡಲಾಗುತ್ತದೆ.

ಇದನ್ನೂ ಓದಿ: ಬಿಸಿಲಿನ ತಾಪಕ್ಕೆ ಮೂಕ ಪ್ರಾಣಿಗಳ ಗೋಳಾಟ: ಆಹಾರಕ್ಕಾಗಿ ಮಂಗಗಳ ಪರದಾಟ

ಒಂದು ವೇಳೆ ಯಾವುದೇ ದಿಕ್ಕಿಗೆ ಪೆಟ್ಟಾಗದೇ ಹೋದರೆ ಯಾವುದೇ ಬದಲಾವಣೆ ಇಲ್ಲ ಅಂತ ಭವಿಷ್ಯ ನಿರ್ಧಾರ. ನೂರಾರು ವರ್ಷಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.

ಸಾಮಾನ್ಯವಾಗಿ ಯುಗಾದಿ ಅಂದರೆ ಹಿಂದು ವರ್ಷದ ಆರಂಭ ಇದ್ದಂತೆ. ಈ ಸಮಯದಲ್ಲಿ ರೈತರು ವರ್ಷದ ಕೃಷಿ ಲೆಕ್ಕಾಚಾರಗಳನ್ನು ಹಾಕುವುದು ರೂಢಿ. ಆಯಾ ವರ್ಷ ಏನು ಬೆಳೆ ತೆಗೆಯಬೇಕು ಅನ್ನೋದನ್ನು ಅನೇಕ ಕಡೆ ಅನೇಕ ರೀತಿಯಲ್ಲಿ ನೋಡುತ್ತಾರೆ. ಅಂತಹುದೇ ಒಂದು ಪದ್ಧತಿ ಧಾರವಾಡ ತಾಲೂಕಿನ ಹನುಮನಕೊಪ್ಪ ಗ್ರಾಮದಲ್ಲಿದೆ.

ಇದನ್ನೂ ಓದಿ: ರಂಜಾನ್​ಗೆ ಪ್ರಾಮುಖ್ಯತೆ, ಯುಗಾದಿ ಕಡೆಗಣನೆ: ರೇಷ್ಮೆ ಇಲಾಖೆ ಉಪ ನಿರ್ದೇಶಕರ ವಿರುದ್ಧ ಆರೋಪ

ಇಲ್ಲಿನ ತುಪ್ಪರಿಹಳ್ಳದಲ್ಲಿ ಗ್ರಾಮಸ್ಥರೆಲ್ಲ ಸೇರಿ ಯುಗಾದಿ ಅಮಾವಾಸ್ಯೆಯ ಸಂಜೆ ಹೊತ್ತು ಹೋಗಿ ಮಣ್ಣಿನಿಂದ ಗೊಂಬೆ ತಯಾರಿಸಿ, ಆಯಾ ಮಳೆಗಳ ಹೆಸರಿನಲ್ಲಿ ಎಕ್ಕೆ ಎಲೆಯಲ್ಲಿ ಕಾಳುಗಳನ್ನು ಹಾಕಿ ಮಳೆ ಬೆಳೆ ನೋಡುತ್ತಾರೆ. ಈ ಫಲ ಭವಿಷ್ಯದಲ್ಲಿಯೇ ರಾಜಕೀಯ ಭವಿಷ್ಯ ನೋಡಿಕೊಂಡು ಬರುವ ರೂಢಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ