AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಕಾರ್ಡ್​​​​ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್; ಹೊಸ ಕಾರ್ಡ್​​ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಸಾಧ್ಯತೆ

BPL Card; ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಕಾರ್ಡ್​​ಗಳನ್ನು ವಿತರಣೆ ಮಾಡಿದರೆ, ಹೊಸ ಕಾರ್ಡ್​​​ಗಳಿಗೆ ಅವಕಾಶ ನೀಡಬಹುದಾಗಿದೆ. ಸದ್ಯ ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲದೇ, ಅರ್ಜಿ ಸಲ್ಲಿಕೆ ಮಾಡಿದ ಕಾರ್ಡ್​​ಗಳೂ ಸಿಗದೆ ಜನ ರೋಸಿ ಹೋಗಿದ್ದಾರೆ.

ಬಿಪಿಎಲ್ ಕಾರ್ಡ್​​​​ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್; ಹೊಸ ಕಾರ್ಡ್​​ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಸಾಧ್ಯತೆ
ಸಾಂದರ್ಭಿಕ ಚಿತ್ರ
Poornima Agali Nagaraj
Poornima Agali Nagaraj| Edited By: |

Updated on: Sep 09, 2023 | 12:49 PM

Share

ಬೆಂಗಳೂರು, ಸೆಪ್ಟೆಂಬರ್ 9: ಬಿಪಿಎಲ್ ಕಾರ್ಡ್​​​​ದಾರರಿಗೆ (BPL Card) ಆಹಾರ ಇಲಾಖೆ (Food Department) ಗುಡ್ ನ್ಯೂಸ್ ನೀಡುವ ಸುಳಿವು ನೀಡಿದೆ. ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸಲ್ಲಿಕೆಯಾಗಿರುವ 3 ಲಕ್ಷ ಎಪಿಎಲ್ ಕಾರ್ಡ್ ಅರ್ಜಿಗಳಲ್ಲಿ ಶೇ 75ರ ದೃಢೀಕರಣ ಪೂರ್ಣಗೊಂಡಿದೆ. ಸದ್ಯದಲ್ಲೆ ಈ ಕಾರ್ಡ್​​​ಗಳನ್ನು ವಿತರಣೆ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಕಾರ್ಡ್​​ಗಳನ್ನು ವಿತರಣೆ ಮಾಡಿದರೆ, ಹೊಸ ಕಾರ್ಡ್​​​ಗಳಿಗೆ ಅವಕಾಶ ನೀಡಬಹುದಾಗಿದೆ. ಸದ್ಯ ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲದೇ, ಅರ್ಜಿ ಸಲ್ಲಿಕೆ ಮಾಡಿದ ಕಾರ್ಡ್​​ಗಳೂ ಸಿಗದೆ ಜನ ರೋಸಿ ಹೋಗಿದ್ದಾರೆ.

ಈ ಮಧ್ಯೆ, ಬಿಪಿಎಲ್ ಕಾರ್ಡ್​​ಗಳಲ್ಲಿ ಮೃತಪಟ್ಟಿರುವ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿಸುವುದಲ್ಲದೇ ಆಹಾರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಬಳಸುತ್ತಿದ್ದ ಫಲಾನುಭವಿಗಳನ್ನ ಪತ್ತೆ ಮಾಡಲಾಗುತ್ತಿದೆ. ಕಳೆದ ತಿಂಗಳಷ್ಟೇ 5 ಲಕ್ಷಕ್ಕೂ ಹೆಚ್ಚು ಕಾರ್ಡ್​​​ಗಳನ್ನು ರದ್ದು ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಮಿತಿಯನ್ನು ಮೀರಿದ್ದರಿಂದ ಹೊಸ ಆರ್ಜಿ ಸಲ್ಲಿಕೆಗೆ ಅವಾಕಾಶ ನೀಡಿರಲಿಲ್ಲ.

ಇದನ್ನೂ ಓದಿ: ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶಾಕ್!

ಇತ್ತೀಚೆಗಷ್ಟೇ ತಿದ್ದುಪಡಿಗೆ ಅವಕಾಶ ನೀಡಿದ್ದ ಸರ್ಕಾರ

ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದ್ರೆ, ಆಹಾರ ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇದ್ದಾರೆ ಎಂಬುದು ದಾಖಲೆಗಳಿಂದ ತಿಳಿದುಬಂದಿತ್ತು. ಹೀಗಾಗಿ ಸರ್ಕಾರ ತಿದ್ದುಪಡಿಗೆ ಅವಕಾಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ