
ಬೆಂಗಳೂರು, ಜುಲೈ 17: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಯ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ (holiday) ನೀಡಿ ಮಹತ್ವದ ಆದೇಶ ಹೊರಡಿಸಲಾಗಿದೆ. ಆ ಮೂಲಕ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ಗುಡ್ನ್ಯೂಸ್ ನೀಡಲಾಗಿದೆ.
2021 ಆಗಸ್ಟ್ 03ರಂದು ಪೊಲೀಸ್ ಪ್ರಧಾನ ಕಚೇರಿಯ ಸುತ್ತೋಲೆ ಸಂಖ್ಯೆ ಆರ್ಎಲ್ಎನ್-1/14/2021 ಅನ್ನು ಉಲ್ಲೇಖಿಸಿ ಈ ನಿರ್ದೇಶನವನ್ನು ನೀಡಲಾಗಿದ್ದು, ಡಿಸಿಆರ್ಇ ಕಂಟ್ರೋಲ್ ರೂಮ್ನಿಂದ ಅಧಿಕೃತ ಸಂದೇಶ ರವಾನಿಸಲಾಗಿದೆ. ಈ ಆದೇಶದ ಅನ್ವಯ, ಪಾಳಿ (ಶಿಫ್ಟ್) ಆಧಾರದ ಮೇಲೆ ಪ್ರತಿಯೊಬ್ಬ ಸಿಬ್ಬಂದಿಗೂ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ರಜೆ ನೀಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ.
ಇಲಾಖೆಯ ಈ ಮಹತ್ವದ ನಿರ್ಧಾರದಿಂದಾಗಿ ನಿರಂತರ ಕರ್ತವ್ಯ ನಿರ್ವಹಣೆಯಿಂದ ಒತ್ತಡಕ್ಕೆ ಒಳಗಾಗುತ್ತಿದ್ದ ಸಿಬ್ಬಂದಿಗೆ ವಾರಕ್ಕೊಮ್ಮೆ ವಿಶ್ರಾಂತಿ ದೊರೆಯಲಿದ್ದು, ಇದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅತ್ಯಂತ ಸಹಕಾರಿಯಾಗಲಿದೆ.
ಇದನ್ನೂ ಓದಿ: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ, ಒಟ್ಟು 90ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ
ಇನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರು ಜುಲೈ 16ರಂದು ಈ ಮಹತ್ವದ ಆದೇಶಕ್ಕೆ ಸಹಿ ಹಾಕಿದ್ದಾರೆ. ತದನಂತರ, ಈ ಆದೇಶದ ಪ್ರತಿಗಳನ್ನು ಡಿಸಿಆರ್ಇ ವಲಯದ ಎಲ್ಲಾ ಪೊಲೀಸ್ ಅಧೀಕ್ಷಕರಿಗೆ, ಆಡಳಿತಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳಿಗೆ ರವಾನಿಸಲಾಗಿದೆ.
ರಸ್ತೆಯಲ್ಲಿ ಸಿಕ್ಕ ಮಾಂಗಲ್ಯ ಸರವನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿಗೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ದೊಡ್ಡ ಅಯ್ಯೂರು ಸರಳ ಎಂಬುವರು ಕೋಲಾರ ನಗರದ ಟೇಕಲ್ ರಸ್ತೆಯಲ್ಲಿ ಹಣ್ಣು ಖರೀದಿಸುವ ವೇಳೆ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದರು. ದಾರಿಯಲ್ಲಿ ಬಿದಿದ್ದ ಮಾಂಗಲ್ಯ ಸರವನ್ನು ಮುನಿಯಪ್ಪ ಅವರು ಕೋಲಾರ ನಗರಠಾಣೆಗೆ ತಂದು ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಝಗಮಗಿಸಲಿದೆ ವೀಕೆಂಡ್! ಭಾನುವಾರ ಮುಂಜಾನೆ 5 ರ ವರೆಗೂ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಸಾಧ್ಯತೆ
ಈ ಬಗ್ಗೆ ಪೊಲೀಸ್ ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ನೋಡಿದ ಸರಳ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ಮಾಂಗಲ್ಯ ಸರವನ್ನು ಪೊಲೀಸರ ಸಮ್ಮುಖದಲ್ಲಿ ಪಡೆದಿದ್ದಾರೆ. ಇನ್ನು ದಾರಿಯಲ್ಲಿ ಸಿಕ್ಕಿದ್ದ ಮಾಂಗಲ್ಯ ಸರವನ್ನು ಮುನಿಯಪ್ಪ ಪ್ರಾಮಾಣಿಕತೆಯಿಂದ ತಂದು ಪೊಲೀಸರಿಗೆ ನೀಡಿದ ಹಿನ್ನಲೆಯಲ್ಲಿ ಕೋಲಾರ ನಗರ ಠಾಣೆ ಸಿಪಿಐ ಲೊಕೇಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.