AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪೊಲೀಸರಿಗೆ ಗುಡ್​ ನ್ಯೂಸ್​: 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ

2023ರಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಂದು ಗುಂಪು ವಿಮಾ ಮೊತ್ತವನ್ನು ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರಂತೆಯೇ ಇದೀಗ ಪೊಲೀಸರಿಗೆ 20 ಲಕ್ಷದಿಂದ 50 ಲಕ್ಷಕ್ಕೆ ವಿಶೇಷ ಗುಂಪು ವಿಮಾ ಯೋಜನೆ ಮೊತ್ತ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಪೊಲೀಸರಿಗೆ ಗುಡ್​ ನ್ಯೂಸ್​: 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ
ಕರ್ನಾಟಕ ಪೊಲೀಸರಿಗೆ ಗುಡ್​ ನ್ಯೂಸ್​: 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ
TV9 Web
| Edited By: |

Updated on:Oct 18, 2024 | 7:57 PM

Share

ಬೆಂಗಳೂರು, ಅಕ್ಟೋಬರ್​ 18: ಪೊಲೀಸರಿಗೆ (police) ವಿಶೇಷ ಗುಂಪು ವಿಮಾ ಯೋಜನೆ ಮೊತ್ತವನ್ನು 20 ಲಕ್ಷದಿಂದ ರೂ. 50 ಲಕ್ಷಕ್ಕೆ ಹೆಚ್ಚಳ ಮಾಡಿ ಶುಕ್ರವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕದ ಪೊಲೀಸ್​ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್​ ನೀಡಲಾಗಿದೆ.

2023ರಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಂದು ಗುಂಪು ವಿಮಾ ಮೊತ್ತವನ್ನು ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆ ಮೂಲಕ ಅಧಿಕಾರಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಸಕಾರಾತ್ಮಕ ಬೆಂಬಲವನ್ನು ವ್ಯಕ್ತಪಡಿಸಲಾಗಿತ್ತು.

ಇದನ್ನೂ ಓದಿ: ಕೆ‌ಎಸ್‌ಆರ್‌ಟಿಸಿ 63ನೇ ಸಂಸ್ಥಾಪನಾ ದಿನಾಚರಣೆ: ಕರ್ತವ್ಯದಲ್ಲಿದ್ದಾಗ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ ಚೆಕ್ ವಿತರಣೆ

ಇದೀಗ ಭರವಸೆಯಂತೆ ಸರ್ಕಾರ ವಿಶೇಷ ಗುಂಪು ವಿಮಾ ಯೋಜನೆ ಮೊತ್ತ ಹೆಚ್ಚಳ ಮಾಡಿದೆ. ಕರ್ತವ್ಯದಲ್ಲಿರುವಾಗ ಪೊಲೀಸರು ಮೃತಪಟ್ಟರೆ ಈ ವಿಶೇಷ ಗುಂಪು ವಿಮಾ ನೀಡಲಾಗುತ್ತದೆ. ಫಾಲೋವರ್, ಪಿಸಿಯಿಂದ ಡಿಜಿ & ಐಜಿಪಿವರೆಗೂ ಅನ್ವಯವಾಗಲಿದೆ.

ಪೊಲೀಸ್​ ಅಧಿಕಾರಿಗಳು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುತ್ತಾರೆ. ಹಾಗಾಗಿ ಅವರು ಮತ್ತು ಅವರ ಕುಟುಂಬಗಳ ಕಲ್ಯಾಣವನ್ನು ಪರಿಗಣಿಸುವುದು ಮುಖ್ಯವಾಗುತ್ತದೆ. ಹಾಗಾಗಿ ಕಾನೂನು ಸುವ್ಯವಸ್ಥೆಯನ್ನು ರಕ್ಷಿಸಲು ನಿರಂತರವಾಗಿ ಶ್ರಮಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬದ ಏಳಿಗೆಗೆ ಸರ್ಕಾರ ಪ್ರಥಮ ಆದ್ಯತೆ ಆಗಿದೆ.

ಇದನ್ನೂ ಓದಿ: ಅಪಘಾತದ ವಿಮಾ ಹಣ ನೀಡಲು ಕಂಪನಿ ನಿರಾಕರಣೆ; ವಿಚಾರಣೆ ನಡೆಸಿ ತಾಯಿ-ಮಗಳಿಗೆ 15 ಲಕ್ಷ ರೂ. ಕೊಡುವಂತೆ​ ಆಯೋಗ ಆದೇಶ

ಆ ಮೂಲಕ ಈ ಯೋಜನೆ ಮೂಲಕ ಅಧಿಕಾರಿ- ಸಿಬ್ಬಂದಿಗಳ ಮನೋಸ್ಥಿತಿಯನ್ನು ಸುಧಾರಿಸುವ ಮೂಲಕ, ಮುಂದೆ ಅವರು ಮಾಡುವ ಕರ್ತವ್ಯದಲ್ಲಿ ಹೆಚ್ಚು ಪ್ರೇರಣೆ ಸಿಗಲಿದೆ ಎನ್ನುವುದು ಸರ್ಕಾರ ನಿರೀಕ್ಷೆಯಾಗಿದೆ.

ಇನ್ನು ಇತ್ತೀಚೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಅಂದು ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಮೂರು ಕುಟುಂಬಕ್ಕೆ 1 ಕೋಟಿ ರೂ ಚೆಕ್​ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:56 pm, Fri, 18 October 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!