AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್: ರಾಜ್ಯಕ್ಕೆ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ; ಡಾ ಶರಣಪ್ರಕಾಶ ಪಾಟೀಲ್

ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ರಾಜ್ಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶವೊಂದು ಲಭಿಸಿದೆ. ರಾಜ್ಯಕ್ಕೆ ಈ ಬಾರಿ ದಾಖಲೆಯ 1,122 ಹೆಚ್ಚುವರಿ ಮೆಡಿಕಲ್ ಸೀಟುಗಳು ಮಂಜೂರಾಗಿವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ನೀಟ್ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್: ರಾಜ್ಯಕ್ಕೆ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ; ಡಾ ಶರಣಪ್ರಕಾಶ ಪಾಟೀಲ್
ಮೆಡಿಕಲ್‌ ಸೀಟ್‌ ಲಭ್ಯ
ಗಂಗಾಧರ​ ಬ. ಸಾಬೋಜಿ
|

Updated on:May 16, 2026 | 6:00 PM

Share

ಬೆಂಗಳೂರು, ಮೇ 16: ನೀಟ್ ಪರೀಕ್ಷೆ (NEET Exam) ಅಕ್ರಮ ದೇಶಾದ್ಯಂತ ಸದ್ದು ಮಾಡುತ್ತಿದೆ. ಬಗೆದಷ್ಟು ನೀಟ್​ ಮಾಫಿಯಾ ಬಯಲಾಗುತ್ತಿದೆ. ಒಂದೆಡೆ ಪರೀಕ್ಷಾ ಅಕ್ರಮಕ್ಕೆ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಆದರೆ ಈ ಮಧ್ಯೆ ರಾಜ್ಯದ (Karnataka) ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಒಂದು ಒದಗಿಬಂದಿದೆ. ಅದೇನೆಂದರೆ ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್​ಗಳು ಮಂಜೂರಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಘೋಷಿಸಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ.

ಮುಖ್ಯಾಂಶಗಳು

  • ಮೆಡಿಕಲ್ ಸೀಟ್ ಲಭ್ಯತೆಯಲ್ಲಿ ಕರ್ನಾಟಕದ ಹೊಸ ದಾಖಲೆ
  • ರಾಜ್ಯಕ್ಕೆ ದಾಖಲೆಯ 1,122 ಹೆಚ್ಚುವರಿ ಮೆಡಿಕಲ್ ಸೀಟುಗಳ ಮಂಜೂರಾತಿ
  • ಮೆಡಿಕಲ್ ಸೀಟ್ ಲಭ್ಯತೆಯಲ್ಲಿ ಕರ್ನಾಟಕದ ಹೊಸ ದಾಖಲೆ

ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್​​, ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದರು. ನಮ್ಮ ರಾಜ್ಯದ ವೈದ್ಯಕೀಯ ಕ್ಷೇತ್ರದ ದೇಶದಲ್ಲೇ ಮುಂಚೂಣಿಯಲ್ಲಿದೆ. ಒಂದು ರಾಜ್ಯಕ್ಕೆ ಒಂದೇ ಬಾರಿ ಸಾವಿರಕ್ಕೂ ಹೆಚ್ಚು ಮೆಡಿಕಲ್ ಸೀಟು ಸಿಕ್ಕಿರುವುದು ದಾಖಲೆಯಾಗಿದೆ. ಇದು ಕರ್ನಾಟಕದ ಸಾಧನೆಗೆ ಪೂರಕ ಸಾಕ್ಷಿ ಎಂದು ಅವರು ಹೇಳಿದರು.

ಎಲ್ಲೆಲ್ಲಿ ಹೆಚ್ಚುವರಿ ಸೀಟು?

ಹೊಸದಾಗಿ ಮಂಜೂರಾದ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಕಾವೇರಿ ಸೇರಿದಂತೆ ಹಲವು ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳಿಗೆ ಹಂಚಿಕೆಯಾಗಲಿವೆ.

1090 ಕೋಟಿ ರೂ ಅನುದಾನ

ಕೇಂದ್ರ ಸರ್ಕಾರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ 15ರಂದು ಇದಕ್ಕೆ ಅಂತಿಮ ಮುದ್ರೆ ಹಾಕಿದೆ. ಪದವಿಪೂರ್ವ ವೈದ್ಯಕೀಯ ಸೀಟುಗಳಿಗೆ 495 ಕೋಟಿ ರೂ. ಹಾಗೂ ಸ್ನಾತಕೋತ್ತರ ಸೀಟುಗಳಿಗೆ 541 ಕೋಟಿ ರೂ. ಸೇರಿ ಒಟ್ಟು 1090 ಕೋಟಿ ರೂ. ಅನುದಾನ ರಾಜ್ಯಕ್ಕೆ ದೊರೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ: ‘ಎರಡು ವರ್ಷದ ಶ್ರಮ ವ್ಯರ್ಥವಾಯಿತು’: ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ

ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಕರ್ನಾಟಕದಲ್ಲಿ ಈಗ ವಿಫುಲ ಅವಕಾಶಗಳು ಸೃಷ್ಟಿಯಾಗಿವೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು.

ರಾಜ್ಯದ ಮೆಡಿಕಲ್ ಸೀಟುಗಳ ವಿವರ

  • ಒಟ್ಟು ವೈದ್ಯಕೀಯ ಕಾಲೇಜು- 72 (ಖಾಸಗಿ, ಡೀಮ್ಡ್ ಸೇರಿ)
  • ಈಗ ಲಭ್ಯವಿರುವ UG ಸೀಟು- 13,945
  • ಈಗ ಲಭ್ಯವಿರುವ PG ಸೀಟು- 7,727
  • ಹೊಸದಾಗಿ ಸೇರ್ಪಡೆಯಾದ ಸೀಟು- 1,122

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:53 pm, Sat, 16 May 26

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!