AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ

ರೈಲು ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಹಾಗೂ ಸುಗಮ ಸಂಚಾರದ ಉದ್ದೇಶದಿಂದ ನೈಋತ್ಯ ರೈಲ್ವೆಯು ಹುಬ್ಬಳ್ಳಿ ಹಾಗೂ ಬೆಂಗಳೂರಿನಿಂದ ರಾಮೇಶ್ವರಂ, ಕೊಲ್ಲಂ ಮತ್ತು ತಿರುವನಂತಪುರಂಗೆ ಸಂಚರಿಸುವ ಬೇಸಿಗೆ ವಿಶೇಷ ರೈಲುಗಳ ಅವಧಿಯನ್ನು ಜೂನ್ ಕೊನೆಯವರೆಗೆ ವಿಸ್ತರಿಸಿದೆ. ವಿಶೇಷ ರೈಲುಗಳ ಸಂಪೂರ್ಣ ವಿವರ ಇಲ್ಲಿದೆ.

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ
ಸಾಂದರ್ಭಿಕ ಚಿತ್ರImage Credit source: South Western Railway
ಗಣಪತಿ ಶರ್ಮಾ
|

Updated on: May 26, 2026 | 10:04 AM

Share

ಬೆಂಗಳೂರು, ಮೇ 26: ಬೇಸಿಗೆಯ ರಜೆ ಮುಗಿಸಿ ಊರುಗಳಿಗೆ ಹಾಗೂ ಕೆಲಸದ ಸ್ಥಳಗಳಿಗೆ ಮರಳುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ (SWR) ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರ್ವಜನಿಕರ ದಟ್ಟಣೆ ನಿಯಂತ್ರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸದ್ಯ ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬೇಸಿಗೆ ವಿಶೇಷ ರೈಲುಗಳ (Summer Special Trains) ಅವಧಿಯನ್ನು ಜೂನ್ ತಿಂಗಳ ಕೊನೆಯ ವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಈ ಎಲ್ಲಾ ವಿಶೇಷ ರೈಲುಗಳು ಈಗ ಅಸ್ತಿತ್ವದಲ್ಲಿರುವ ವೇಳಾಪಟ್ಟಿ, ನಿಲುಗಡೆ (Stoppages) ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ (Composition) ಸಂಚರಿಸಲಿವೆ ಎಂದು ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮುಖ್ಯಾಂಶಗಳು

  • ಹುಬ್ಬಳ್ಳಿ, ಬೆಂಗಳೂರು ಮಾರ್ಗದ ಪ್ರಮುಖ ವಿಶೇಷ ರೈಲುಗಳ ಸಂಚಾರ ಜೂನ್ ಅಂತ್ಯದವರೆಗೆ ವಿಸ್ತರಣೆ.
  • ಸದ್ಯ ಇರುವ ಹಳೆಯ ರೈಲು ಸಮಯ, ನಿಲುಗಡೆ ಹಾಗೂ ಬೋಗಿಗಳ ವ್ಯವಸ್ಥೆಯಲ್ಲೇ ಮುಂದುವರಿಕೆ.
  • ತಾಂತ್ರಿಕ ಕಾಮಗಾರಿ ಹಿನ್ನೆಲೆ ಕೆಲವು ನಿರ್ದಿಷ್ಟ ದಿನಗಳಂದು ಮಾತ್ರ ರೈಲು ಸೇವೆ ರದ್ದು.

ರೈಲುಗಳ ವಿಸ್ತರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನೈಋತ್ಯ ರೈಲ್ವೆ ಪ್ರಕಟಣೆಯ ಪ್ರಕಾರ, ಹುಬ್ಬಳ್ಳಿ-ರಾಮೇಶ್ವರಂ ಭಾನುವಾರದ ವಿಶೇಷ ರೈಲು (07355) ಜೂನ್ 7 ರಿಂದ 28 ರವರೆಗೆ ಹಾಗೂ ರಾಮೇಶ್ವರಂ-ಹುಬ್ಬಳ್ಳಿ ಸೋಮವಾರದ ರೈಲು (07356) ಜೂನ್ 8 ರಿಂದ 29 ರವರೆಗೆ ವಿಸ್ತರಣೆಗೊಂಡಿದೆ. ಅದೇ ರೀತಿ ಹುಬ್ಬಳ್ಳಿ-ಕೊಲ್ಲಂ ಭಾನುವಾರದ ರೈಲು (07313) ಮೇ 31 ರಿಂದ ಜೂನ್ 21 ರವರೆಗೆ ಮತ್ತು ಕೊಲ್ಲಂ-ಹುಬ್ಬಳ್ಳಿ ಸೋಮವಾರದ ರೈಲು (07314) ಜೂನ್ 1 ರಿಂದ ಜೂನ್ 22 ರವರೆಗೆ ಸಂಚರಿಸಲಿವೆ. ಆದರೆ, ಇಂಜಿನಿಯರಿಂಗ್ ಕಾಮಗಾರಿಗಳ ಕಾರಣದಿಂದಾಗಿ ಹುಬ್ಬಳ್ಳಿ-ಕೊಲ್ಲಂ ರೈಲು ಜೂನ್ 7 ರಂದು ಮತ್ತು ಕೊಲ್ಲಂ-ಹುಬ್ಬಳ್ಳಿ ರೈಲು ಜೂನ್ 8 ರಂದು ರದ್ದಾಗಲಿವೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ಮತ್ತೊಂದೆಡೆ, ಬೆಂಗಳೂರಿನ ಎಸ್‌ಎಂವಿಟಿ (SMVT) ನಿಲ್ದಾಣದಿಂದ ತಿರುವನಂತಪುರಂ ಸೆಂಟ್ರಲ್ ನಡುವೆ ಸಂಚರಿಸುವ ಪ್ರಮುಖ ವೀಕ್ಲಿ ಸ್ಪೆಷಲ್ ಟ್ರೈನ್​ಗಳಾದ 06523/06524 (ಸೋಮವಾರ/ಮಂಗಳವಾರ) ಮತ್ತು 06547/06548 (ಬುಧವಾರ/ಗುರುವಾರ) ರೈಲುಗಳ ಸೇವೆಯನ್ನು ಜೂನ್ ನಾಲ್ಕನೇ ವಾರದವರೆಗೆ ವಿಸ್ತರಿಸಲಾಗಿದೆ. ಎಸ್‌ಎಂವಿಟಿ ಬೆಂಗಳೂರು-ತಿರುವನಂತಪುರಂ ಶುಕ್ರವಾರದ ರೈಲು (06555) ಜೂನ್ 19 ರಿಂದ 26 ರವರೆಗೆ ಹಾಗೂ ತಿರುವನಂತಪುರಂ-ಎಸ್‌ಎಂವಿಟಿ ಬೆಂಗಳೂರು ಭಾನುವಾರದ ರೈಲು (06556) ಜೂನ್ 21 ರಿಂದ ಜೂನ್ 28 ರವರೆಗೆ ವಿಸ್ತರಣೆಯಾಗಿದೆ.

ಇದನ್ನೂ ಓದಿ: ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಳಗಾವಿ, ಸಿಕಂದರಾಬಾದ್, ಚರ್ಲಪಲ್ಲಿ ವೀಕ್ಲಿ ವಿಶೇಷ ರೈಲುಗಳು ಇನ್ನು ಕಾಯಂ!

ಈ ರೈಲುಗಳ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ವಿವರಗಳನ್ನು ಪ್ರಯಾಣಿಕರು ಅಧಿಕೃತ ವೆಬ್‌ಸೈಟ್ (www.enquiry.indianrail.gov.in) ಅಥವಾ NTES ಆಪ್ ಮೂಲಕ ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು