AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆದಾರರಿಗೆ ಸಿಹಿ ಸುದ್ದಿ; ಮಾದರಿ ಬಾಡಿಗೆ ಕಾಯ್ದೆಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ

ಮಾದರಿ ಬಾಡಿಗೆ ಕಾಯ್ದೆಯನ್ನು ಕೇಂದ್ರ ಸಚಿವ ಸಂಪುಣ ಅನುಮೋದನೆ ಮಾಡಿದ ಬಳಿಕ ಒಂದು ತಿಂಗಳ ನಂತರ ಈ ಕಾಯ್ದೆಯನ್ನು ಅಳವಡಿಸಿಕೊಳ್ಳಲಾಗುತ್ತೆ. ರಾಜ್ಯದಲ್ಲಿ ಹಾಲಿ ಇರುವ ಬಾಡಿಗೆ ಕಾಯಿದೆಯನ್ನು ಸರಳೀಕರಿಸುತ್ತಿದ್ದೇವೆ ಎಂದು ಆರ್.ಅಶೋಕ ತಿಳಿಸಿದರು.

ಬಾಡಿಗೆದಾರರಿಗೆ ಸಿಹಿ ಸುದ್ದಿ; ಮಾದರಿ ಬಾಡಿಗೆ ಕಾಯ್ದೆಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ
ಸಚಿವ ಆರ್. ಅಶೋಕ್
TV9 Web
| Edited By: |

Updated on: Jul 09, 2021 | 1:39 PM

Share

ಬಾಡಿಗೆ ದಾರ ಮತ್ತು ಮಾಲೀಕರ ವಿವಾದಗಳನ್ನು ಕೊನೆಗೊಳಿಸಲು ಮತ್ತು ಬಾಡಿಗೆ ವಸತಿ ವಲಯವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾದರಿ ಬಾಡಿಗೆ ಕಾಯ್ದೆಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ ಗುರುವಾರ ತಿಳಿಸಿದ್ದಾರೆ.

ಮಾದರಿ ಬಾಡಿಗೆ ಕಾಯ್ದೆಯನ್ನು ಕೇಂದ್ರ ಸಚಿವ ಸಂಪುಣ ಅನುಮೋದನೆ ಮಾಡಿದ ಬಳಿಕ ಒಂದು ತಿಂಗಳ ನಂತರ ಈ ಕಾಯ್ದೆಯನ್ನು ಅಳವಡಿಸಿಕೊಳ್ಳಲಾಗುತ್ತೆ. ರಾಜ್ಯದಲ್ಲಿ ಹಾಲಿ ಇರುವ ಬಾಡಿಗೆ ಕಾಯಿದೆಯನ್ನು ಸರಳೀಕರಿಸುತ್ತಿದ್ದೇವೆ ಎಂದು ಆರ್.ಅಶೋಕ ತಿಳಿಸಿದರು. ಈ ಮೊದಲು, ಬಾಡಿಗೆಯನ್ನು ನಿಗದಿಪಡಿಸುವಲ್ಲಿ ಸರ್ಕಾರದ ಪಾತ್ರವಿತ್ತು. ಈಗ ಬಾಡಿಗೆಯನ್ನು ಮಾಲೀಕರು ಮತ್ತು ಬಾಡಿಗೆದಾರರು ಇಬ್ಬರೂ ಸೇರಿ ನಿಗದಿಪಡಿಸಬೇಕು ಎಂಬ ನಿಯಮ ಜಾರಿಗೆ ತರುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದ್ರು.

ಬಾಡಿಗೆದಾರರು ಮತ್ತು ಮಾಲೀಕರ ನಡುವೆ ಒಪ್ಪಂದವಾದರೆ ಅದನ್ನು ಕಾನೂನುಬದ್ದವಾಗಿ ಅಂತಿಮಗೊಳಿಸಬೇಕು. ಮತ್ತು ಅದನ್ನು ಸರ್ಕಾರದ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ. ಯಾವುದೇ ವಿವಾದವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅದನ್ನು 60 ದಿನಗಳೊಳಗೆ ಪರಿಹರಿಸುತ್ತಾರೆ. ವಿವಾದಗಳನ್ನು 60 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಮತ್ತು ವಿಚಾರಣೆಯನ್ನು ಮುಂದೂಡಲು ಯಾರಾದರೂ ಯೋಜಿಸಿದರೆ, ಮೂರು ಅವಕಾಶಗಳಿಗಿಂತ ಹೆಚ್ಚು ಸಮಯ ಇರುವುದಿಲ್ಲ ಎಂದು ತಿಳಿಸಿದರು.

ಪ್ರಸ್ತುತ ಬೆಂಗಳೂರಿನಲ್ಲಿ ಸುಮಾರು ಎರಡರಿಂದ ಮೂರು ಲಕ್ಷ ಮನೆಗಳು ಖಾಲಿ ಇವೆ. ಒಮ್ಮೆ ಈ ಕಾಯಿದೆಯನ್ನು ರಾಜ್ಯದಲ್ಲಿ ಜಾರಿಗೆ ತಂದ ಮೇಲೆ ಮಾಲೀಕರು ತಮ್ಮ ಬಾಡಿಗೆದಾರರನ್ನು ಪಡೆಯುತ್ತಾರೆ ಎಂದು ಅಂದಾಜಿಸಲಾಗಿದೆ. ಅದರಂತೆಯೇ ಬಾಡಿಗೆ ದರ ಕೂಡ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದ ಜನಸಾಮಾನ್ಯರಿಗೆ ಖಂಡಿತ ಅನುಕೂಲವಾಗುತ್ತದೆ. ಇದು ಕೇವಲ ಪ್ರಸ್ತಾಪವಾಗಿದೆ ಮತ್ತು ನಾವು ಇದನ್ನು ಕರ್ನಾಟಕದಲ್ಲಿ ಅಧಿಕೃತವಾಗಿ ಪರಿಚಯಿಸುವ ಮೊದಲು ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Model Tenancy Act ಮಾದರಿ ಬಾಡಿಗೆ ಕಾಯ್ದೆಗೆ ಕೇಂದ್ರ ಅನುಮೋದನೆ: ಏನಿದು ಕಾಯ್ದೆ?

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?