AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್

ಜನವರಿ 1ರಿಂದ ಋತುಚಕ್ರ ರಜೆ ಮಂಜೂರು ಮಾಡಲು ಸಾರಿಗೆ ಇಲಾಖೆ ಗ್ರೀನ್‌ಸಿಗ್ನಲ್ ನೀಡಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಗುಡ್‌ನ್ಯೂಸ್​​ ಸಿಕ್ಕಿದೆ. ಪ್ರತಿ ತಿಂಗಳು ಒಂದು ದಿನ ರಜೆ ಪಡೆಯಬಹುದಾಗಿದೆ. ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್
ಋತುಚಕ್ರದ ರಜೆ
Kiran Surya
| Edited By: |

Updated on: Dec 23, 2025 | 6:53 PM

Share

ಬೆಂಗಳೂರು, ಡಿಸೆಂಬರ್​​ 23: ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ (Menstrual Leave) ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ ನಾಲ್ಕು ನಿಗಮದ ಮಹಿಳಾ ನೌಕರರಿಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಗುಡ್ ನ್ಯೂಸ್​​ ಸಿಕ್ಕಿದೆ.

ಆದೇಶದಲ್ಲೇನಿದೆ?

ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿದೆ.

ಇದನ್ನೂ ಓದಿ: ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಗೆ ತಾತ್ಕಾಲಿಕ ಮಾರ್ಪಾಡು ಮಾಡಿದ ಹೈಕೋರ್ಟ್

ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ 01 ಜನವರಿ 2026ರಿಂದ ಜಾರಿಗೆ ಬರುತ್ತಿದ್ದು, ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಷರತ್ತುಗಳೇನು?

  • ಋತುಚಕ್ರ ಹೊಂದಿರುವ 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
  • ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
  • ಈ ರಜೆಯನ್ನು ರಜೆ ಅಥವಾ ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.
  • ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸಬಾರದು. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ಅವಕಾಶವಿರುವುದಿಲ್ಲ. ಸಂಬಂಧಪಟ್ಟವರೆಲ್ಲರೂ ಆದೇಶಕ್ಕೆ ತಕ್ಕಂತೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು