AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ

ಕೊಲ್ಕತ್ತಾದ ಟಿಟಾಗರ್​​ದಿಂದ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ 6ನೇ ಹೊಸ ಮೆಟ್ರೋ ರೈಲು ಡಿಸೆಂಬರ್​ 23ರಿಂದ ತನ್ನ ಸಂಚಾರ ಆರಂಭಿಸಲಿದೆ. ಆ ಮೂಲಕ ಬಿಎಂಆರ್​ಸಿಎಲ್​ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​ ಕೊಟ್ಟಿದೆ. ಇನ್ಮುಂದೆ ರೈಲಿಗಾಗಿ ಹೆಚ್ಚು ಹೊತ್ತು ಕಾಯುವ ಅವಶ್ಯಕತೆ ಇಲ್ಲ.

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ
ಯೆಲ್ಲೋ ಲೈನ್ ಮೆಟ್ರೋ
Kiran Surya
| Edited By: |

Updated on:Dec 22, 2025 | 8:15 PM

Share

ಬೆಂಗಳೂರು, ಡಿಸೆಂಬರ್​ 22: ನಾಳೆಯಿಂದ ಅಂದರೆ ಡಿಸೆಂಬರ್ 23ರಿಂದ 6ನೇ ಹೊಸ ಮೆಟ್ರೋ (Namma Metro) ರೈಲು ಟ್ರ್ಯಾಕಿಗಿಳಿಯಲಿದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್​ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಆರನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಹಾಗಾಗಿ ಹೆಚ್ಚು ಹೊತ್ತು ರೈಲಿಗಾಗಿ ಕಾಯುವಿಕೆಗೆ ಬ್ರೇಕ್​​ ಬೀಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ (BMRCL)​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು ಡಿಸೆಂಬರ್ 23ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಗೆ ಪ್ರಾರಂಭಿಸಲಾಗುತ್ತಿದೆ. ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ಭಾನುವಾರದಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷ ಇರಲಿದೆ.

ನಮ್ಮ ಮೆಟ್ರೋ ಟ್ವೀಟ್​​​

ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಗಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಇತ್ತೀಚೆಗೆ ನವೆಂಬರ್ 18 ರಂದು ಕೊಲ್ಕತ್ತಾದ ಟಿಟಾಗರ್​​ನಿಂದ ಹೊರಟು ಆರನೇ ಡ್ರೈವರ್ ಲೆಸ್ ಮೆಟ್ರೋ ರೈಲು ಸೆಟ್​​ ಡಿಸೆಂಬರ್​ 3ರಂದು ಸಂಜೆ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಬಂದು ತಲುಪಿತ್ತು. ಈ ಹೊಸ ರೈಲು ಸೇರ್ಪಡೆಯಿಂದ ರೈಲುಗಳ ನಡುವಿನ ಓಡಾಟದ ಸಮಯದಲ್ಲಿ ಇಳಿಕೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:12 pm, Mon, 22 December 25

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!