AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

KMF Nandini milk price reduced: ಕೇಂದ್ರದಿಂದ ಶೇ.12ರಿಂದ 5ಕ್ಕೆ ಜಿಎಸ್​​ಟಿ ಕಡಿತ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಕೆಎಂಎಫ್​​ ತನ್ನ ನಂದಿನಿ ಹಾಲಿನ ಕೆಲ ಉತ್ಪನ್ನಗಳ ದರ ಇಳಿಕೆ ಮಾಡಿದೆ. ಸೋಮವಾರದಿಂದ ಹೊಸ ದರ ಜಾರಿಗೆ ಕೆಎಂಎಫ್​ ಪ್ಲ್ಯಾನ್ ಮಾಡಿದೆ. ಯಾವುದರ ದರ ಎಷ್ಟು ಇಳಿಕೆ ಅನ್ನೋದು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ
ನಂದಿನ ಉತ್ಪನ್ನಗಳು
ಶಾಂತಮೂರ್ತಿ
| Edited By: |

Updated on:Sep 20, 2025 | 8:43 AM

Share

ಬೆಂಗಳೂರು, ಸೆಪ್ಟೆಂಬರ್​ 20: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು (GST) ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್​​ (KMF) ಗುಡ್​​ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.

ಜಿಎಸ್​​ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್​​ ಈ ಬಗ್ಗೆ ಶುಕ್ರವಾರ ಕೆಎಂಎಫ್​​ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್​ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ.

ಇದನ್ನೂ ಓದಿ: ಗುಡ್​ ನ್ಯೂಸ್: ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರ ಇಳಿಕೆ ಸಾಧ್ಯತೆ

2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್​​ಟಿ ವಿಧಿಸಲಾಗಿತ್ತು. 2022 ರಲ್ಲಿ ಜಿಎಸ್​ಟಿಯನ್ನ ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಇದು ಸೆ. 22ರಿಂದ ಜಾರಿಗೆ ಬರಲಿದೆ. ಆ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: ಜಿಎಸ್​ಟಿ ಕಡಿತದ ಎಫೆಕ್ಟ್; ಮದರ್ ಡೈರಿ ಹಾಲು ಬೆಲೆ 2 ರೂ, ತುಪ್ಪದ ಬೆಲೆ 30 ರೂ ಇಳಿಕೆ

ಕರ್ನಾಟಕದ ಸ್ಟಾರ್ ಬ್ರ್ಯಾಂಡ್ ಕೆಎಂಎಫ್​​ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಎಲ್ಲೆಡೆ ಭಾರೀ ಬೇಡಿಕೆ ಇದೆ. ಇತ್ತೀಚೆಗೆ ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂ. ಏರಿಕೆ ಮಾಡಲಾಗಿತ್ತು. ಅದೇ ರೀತಿಯಾಗಿ ಮೊಸರಿನ ದರ ಕೂಡ ಪ್ರತಿ ಲೀಟರ್​​ಗೆ 4 ರೂ. ಏರಿಕೆ ಮಾಡಲಾಗಿತ್ತು. ಸದ್ಯ ಈ ನಾಲ್ಕು ರೂ. ಅನ್ನು ಕೆಎಂಎಫ್​ ಕಡಿತಕ್ಕೆ ನಿರ್ಧರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:32 am, Sat, 20 September 25

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​