AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS Dam: ಕಬಿನಿ ಜಲಾನಯನ ಪ್ರದೇಶದಲ್ಲಿ ಬಿರುಸುಗೊಂಡ ಮಳೆ, ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಎಷ್ಟಿದೆ ಈಗ?

ಅದರಂತೆ ನಿನ್ನೆ ಮತ್ತು ಇಂದು ಕಬಿನಿ ಜಲಾಶಯ ಪ್ರದೇಶದಲ್ಲಿ ಮಳೆ ಬೀಳುತ್ತಿದ್ದು, ಕಬಿನಿ ಜಲಾಶಯದಲ್ಲಿ ನೀರಿನ ಒಳಹರಿವು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜಲಾಶಯದ ಇಂದಿನ ಒಳ ಹರಿವು 11,628 ಕ್ಯೂಸೆಕ್ ಗೆ ಹೆಚ್ಚಳಗೊಂಡಿದೆ. ಜಲಾಶಯದ ಹೊರಹರಿವು 1,700 ಕ್ಯೂಸೆಕ್ ನಷ್ಟಾಗಿದೆ.

KRS Dam: ಕಬಿನಿ ಜಲಾನಯನ ಪ್ರದೇಶದಲ್ಲಿ ಬಿರುಸುಗೊಂಡ ಮಳೆ, ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಎಷ್ಟಿದೆ ಈಗ?
KRS Dam:
TV9 Web
| Edited By: |

Updated on:Jul 15, 2021 | 12:25 PM

Share

ಮೈಸೂರು: ರಾಜ್ಯಾದ್ಯಂತ ಮುಂಗಾರು ಮಳೆ ಜೋರಾಗಿಯೇ ಬೀಳುತ್ತಿದೆ. ಮಡಿಕೇರಿ ಭಾಗದಲ್ಲೂ ಮಳೆ ಉತ್ತಮವಾಗಿದೆ. ಈ ಮಧ್ಯೆ, ಕಬಿನಿ ಜಲಾನಯನ ಪ್ರದೇಶದಲ್ಲಿಯೂ ಮಳೆ ಬಿರುಸುಗೊಂಡಿದೆ. ಇದರಿಂದ ನಿಧಾನವಾಗಿ ತುಂಬತೊಡಗಿದ್ದ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಈಗ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಜುಲೈ ಅಂತ್ಯದ ವೇಳೆಗೆ ಕಾವೇರಿ ಜಲಾನಯ ಪ್ರದೇಶಗಳಲ್ಲಿ ಮುಂಗಾರಿ ಮಳೆ ಹೆಚ್ಚಾಗಿ ಆಗಸ್ಟ್​-ಸೆಪ್ಟೆಂಬರ್​ ವೇಳೆಗೆ ಕೆಆರ್‌ಎಸ್ ಅಣೆಕಟ್ಟೆ ಭರ್ತಿ ಯಾಗುವ ವಾಡಿಕೆಯಿದೆ.

ಅದರಂತೆ ನಿನ್ನೆ ಮತ್ತು ಇಂದು ಕಬಿನಿ ಜಲಾಶಯ ಪ್ರದೇಶದಲ್ಲಿ ಮಳೆ ಬೀಳುತ್ತಿದ್ದು, ಕಬಿನಿ ಜಲಾಶಯದಲ್ಲಿ ನೀರಿನ ಒಳಹರಿವು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜಲಾಶಯದ ಇಂದಿನ ಒಳ ಹರಿವು 11,628 ಕ್ಯೂಸೆಕ್ ಗೆ ಹೆಚ್ಚಳಗೊಂಡಿದೆ. ಜಲಾಶಯದ ಹೊರಹರಿವು 1,700 ಕ್ಯೂಸೆಕ್ ನಷ್ಟಾಗಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯವು ಸಮುದ್ರ ಮಟ್ಟದಿಂದ 2284 ಅಡಿ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 2278.71 ಅಡಿಗೆ ಏರಿಕೆಯಾಗಿದೆ. ಜಲಾಶಯದಲ್ಲಿ ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದೆ. ಜಲಾಶಯದಲ್ಲಿಂದು 16.31 ಟಿಎಂಸಿ ನೀರು ಸಂಗ್ರಹಗೊಂಡಿದೆ.

6ನೇ ಬಾರಿಗೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲು ಸಜ್ಜಾಗುತ್ತಿರುವ ಸಿಎಂ ಯಡಿಯೂರಪ್ಪ: ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್​ ಮಾಡಿ 5ನೇ ಬಾರಿಗೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಭಾಗ್ಯ ನನ್ನದು CM ಯಡಿಯೂರಪ್ಪ

ಇನ್ನು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಡ್ಯಾಂ ಕೆಆರ್‌ಎಸ್ ಡ್ಯಾಂ ನಲ್ಲಿ ಇಂದಿನ ನೀರಿನ ಮಟ್ಟ ಹೀಗಿದೆ:

ಡ್ಯಾಂ ನ ಗರಿಷ್ಠ ಮಟ್ಟ – 124.80 ಅಡಿ ಇಂದಿನ ಮಟ್ಟ – 89.62 ಅಡಿ ಒಳಹರಿವು – 6039 ಕ್ಯೂಸೆಕ್ ಹೊರ ಹರಿವು- 1426 ಕ್ಯೂಸೆಕ್

Karnataka Dams: ಜುಲೈ18 ರವರೆಗೂ ವರುಣನ ಆರ್ಭಟ, ಜಲಾಶಯಗಳತ್ತ ಹರಿದುಬರುತ್ತಿದೆ ಮಳೆ ನೀರು (good rain in kabini reservoir catchment area krs dam gets more inflow of water)

Published On - 12:22 pm, Thu, 15 July 21

Follow Us
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ