ಯಾದಗಿರಿಯಲ್ಲಿ ಪ್ಲಾಟ್​ಫಾರ್ಮ್ ಹತ್ತಿದ ಗೂಡ್ಸ್ ರೈಲು, ಮುಂದೇನಾಯ್ತು?

ಯಾದಗಿರಿ: ನಗರದಲ್ಲಿ ಬೆಳಗ್ಗೆ ಬೆಳಗ್ಗೆಯೇ ಭಾರೀ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದ್ದು, ಗೂಡ್ಸ್ ರೈಲೊಂದು ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಹತ್ತಿಕೊಂಡು ಹೋಗಿದೆ. ಈ ರೈಲು, ಪ್ಲಾಟ್ ಫಾರ್ಮ್ ಮೇಲಿದ್ದ ಬುಕ್ ಸ್ಟಾಲ್ ಅನ್ನು 10 ಅಡಿಯಷ್ಟು ದೂರ ತಳ್ಳಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸ್ಥಳದಲ್ಲಿ ರೈಲ್ವೆಯ ಪಾಯಿಂಟ್ ಯಾರೂ ಇಲ್ಲದ ಕಾರಣ ಈ ಅಚಾತುರ್ಯ ಘಟಿಸಿದೆ ಎಂದು ಹೇಳಲಾಗುತ್ತಿದೆ. ಗೂಡ್ಸ್ ರೈಲು ಖಾಲಿ […]

ಯಾದಗಿರಿಯಲ್ಲಿ ಪ್ಲಾಟ್​ಫಾರ್ಮ್ ಹತ್ತಿದ ಗೂಡ್ಸ್ ರೈಲು, ಮುಂದೇನಾಯ್ತು?
ಸಾಧು ಶ್ರೀನಾಥ್​

Updated on: Nov 20, 2019 | 3:23 PM

ಯಾದಗಿರಿ: ನಗರದಲ್ಲಿ ಬೆಳಗ್ಗೆ ಬೆಳಗ್ಗೆಯೇ ಭಾರೀ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದ್ದು, ಗೂಡ್ಸ್ ರೈಲೊಂದು ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಹತ್ತಿಕೊಂಡು ಹೋಗಿದೆ.

ಈ ರೈಲು, ಪ್ಲಾಟ್ ಫಾರ್ಮ್ ಮೇಲಿದ್ದ ಬುಕ್ ಸ್ಟಾಲ್ ಅನ್ನು 10 ಅಡಿಯಷ್ಟು ದೂರ ತಳ್ಳಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸ್ಥಳದಲ್ಲಿ ರೈಲ್ವೆಯ ಪಾಯಿಂಟ್ ಯಾರೂ ಇಲ್ಲದ ಕಾರಣ ಈ ಅಚಾತುರ್ಯ ಘಟಿಸಿದೆ ಎಂದು ಹೇಳಲಾಗುತ್ತಿದೆ. ಗೂಡ್ಸ್ ರೈಲು ಖಾಲಿ ಮಾಡುವಾಗ ಈ ಘಟನೆ ನಡೆದಿದೆ.
ಸ್ಥಳಕ್ಕೆ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Published On - 12:04 pm, Wed, 20 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us