AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ತದ ಕಣಜಕ್ಕೆ ಬರಲಿದೆ ಗೂಡ್ಸ್​ರೈಲು: ಈಡೇರಿತು ಹಲವು ವರ್ಷಗಳ ಕನಸು

ಗೂಡ್ಸ್ ರೈಲು ಸಂಚಾರ ಆರಂಭವಾಗೋದ್ರಿಂದ ಭತ್ತ ಮಾರಾಟಗಾರರಿಗೆ, ವ್ಯಾಪಾರಿಗಳಿಗೆ, ಕಾರ್ಖಾನೆಗಳಿಗೆ, ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ.

ಭತ್ತದ ಕಣಜಕ್ಕೆ ಬರಲಿದೆ ಗೂಡ್ಸ್​ರೈಲು: ಈಡೇರಿತು ಹಲವು ವರ್ಷಗಳ ಕನಸು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
| Edited By: ಆಯೇಷಾ ಬಾನು|

Updated on: Dec 09, 2020 | 6:31 AM

Share

ಕೊಪ್ಪಳ: ಭತ್ತದ ಕಣಜ ಎಂದೇ ಹೆಸರುವಾಸಿಯಾದ ಗಂಗಾವತಿಗೆ ಗೂಡ್ಸ್​ ರೈಲು ಸೌಲಭ್ಯ ಒದಗಿಸಲು ನೈರುತ್ಯ ರೈಲ್ವೆ ವಲಯ ಸಮ್ಮತಿಸಿದೆ. ಈ ವಿಷಯವನ್ನು ರೈಲ್ವೆ ಇಲಾಖೆ ಟ್ವೀಟ್ ಮಾಡಿ ಖಚಿತಪಡಿಸಿದೆ.

ಗೂಡ್ಸ್​ ರೈಲು ಸಂಚಾರ ಆರಂಭವಾಗುವುದು ವ್ಯಾಪಾರ ಮತ್ತು ವಹಿವಾಟು ದೃಷ್ಟಿಯಿಂದ ಅನುಕೂಲ ಎಂದು ರೈತರು, ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಗಂಗಾವತಿ ರೈಲು ನಿಲ್ದಾಣದಲ್ಲಿ ಸರಕು ಸಾಗಣೆ ರೈಲಿಗೆ ಮೀಸಲಾದ ನಾಲ್ಕನೇ ಲೈನ್ ಪ್ಲಾಟ್​ಫಾರ್ಮ್ ಸಿದ್ಧವಾಗಿದೆ ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

ಗೂಡ್ಸ್ ರೈಲು ಸಂಚಾರ ಆರಂಭವಾಗೋದ್ರಿಂದ ಭತ್ತ ಮಾರಾಟಗಾರರಿಗೆ, ವ್ಯಾಪಾರಿಗಳಿಗೆ, ಕಾರ್ಖಾನೆಗಳಿಗೆ, ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ. ಗೂಡ್ಸ್ ರೈಲಿನಲ್ಲಿ ಸಾಗಾಟ ಮಾಡುವುದರಿಂದ ವೆಚ್ಚವೂ ಕಡಿಮೆಯಾಗಲಿದೆ ಎನ್ನುವ ಆಶಾಭಾವ ರೈತರಲ್ಲಿ ಮೂಡಿದೆ.

ಈ ಭಾಗದಲ್ಲಿ ರೈತರು ಹೆಚ್ಚು ಭತ್ತ ಬೆಳೆಯುತ್ತಾರೆ. ಗೂಡ್ಸ್ ರೈಲು ಬೇಕು ಅನ್ನೋದು ಇಲ್ಲಿನ ರೈತರ ಒತ್ತಾಯವಾಗಿತ್ತು. ಹೀಗಾಗಿ ನಾನು ಗೂಡ್ಸ್ ರೈಲು ಆರಂಭಿಸಲು ಪತ್ರ ಬರೆದಿದ್ದೆ. ಇದೀಗ ಗೂಡ್ಸ್ ರೈಲು ಸಂಚಾರ ಆರಂಭಿಸೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದು ಖುಷಿ ವಿಚಾರ ಎನ್ನುತ್ತಾರೆ ಸಂಸದ ಸಂಗಣ್ಣ ಕರಡಿ.

ಗೂಡ್ಸ್ ರೈಲು ಸಂಚಾರ ಆರಂಭವಾಗುತ್ತಿರುವುದು ರೈತರಿಗೆ ಖುಷಿತಂದಿದೆ. ಹುಬ್ಬಳ್ಳಿಗೆ ಭತ್ತ, ಮೆಕ್ಕೆಜೋಳ ಸಾಗಿಸಲು ಇದರಿಂದ ಅನುಕೂಲವಾಗಲಿದೆ. ಹಣದ ಖರ್ಚೂ ಕಡಿಮೆ. ಗೂಡ್ಸ್ ರೈಲು ನಮಗೆಲ್ಲಾ ತುಂಬಾ ಅನುಕೂಲ ಅಂತಾರೆ‌ ರೈತ ಮುಖಂಡ ಶರಣೇಗೌಡ.

ಗಿಣಗೇರಾ-ಮೆಹಬೂಬ್ ನಗರ ರೈಲ್ವೆ ಮಾರ್ಗದ ಕಾಮಗಾರಿ ಇದೀಗ ಚುರುಕಾಗಿ ನಡೆಯುತ್ತಿದೆ. 2107ರಲ್ಲಿ ಗಂಗಾವತಿ ತಾಲ್ಲೂಕಿನ ಚಿಕ್ಕಬೆಣಕಲ್​ವರೆಗೂ ರೈಲು ಸಂಚಾರ ಆರಂಭವಾಗಿತ್ತು. ಚಿಕ್ಕಬೆಣಕಲ್ ಗ್ರಾಮದಿಂದ 13 ಕಿಲೋ ಮೀಟರ್ ದೂರವಿರುವ ಗಂಗಾವತಿಗೆ 2019ರಲ್ಲಿ ರೈಲು ಬಂತು. ಗಂಗಾವತಿಯಿಂದ ಕಾರಟಗಿವರೆಗೆ ಸುಮಾರು 27 ಕಿ.ಮೀ. ರೈಲ್ವೆ ಕಾಮಗಾರಿ ಮುಗಿದಿದ್ದು, ರೈಲು ಸಂಚಾರ ಆರಂಭವಾಗಬೇಕಿದೆ.

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ