AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ ಕ್ಷಮೆ ಕೋರಿದ ಕಾರಣ ಪ್ರಕರಣವನ್ನು ಅಂತ್ಯಗೊಳಿಸಲಾಗಿದೆ: ಸಚಿವ ಅರವಿಂದ ಲಿಂಬಾವಳಿ

Ugliest language of India: ತಂತ್ರಜ್ಞಾನ ದೈತ್ಯ ಗೂಗಲ್​ನಲ್ಲಿ Ugliest Language of India ಎಂದು ಸರ್ಚ್ ಮಾಡಿದರೆ ಕನ್ನಡ ಎಂದು ಪ್ರದರ್ಶಿಸುತ್ತಿದ್ದ ಬಗ್ಗೆ ಅಪಾರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಗೂಗಲ್ ಈ ಬಗ್ಗೆ ಕ್ಷಮೆ ಯಾಚಿಸಿದೆ.

ಗೂಗಲ್​ ಕ್ಷಮೆ ಕೋರಿದ ಕಾರಣ ಪ್ರಕರಣವನ್ನು ಅಂತ್ಯಗೊಳಿಸಲಾಗಿದೆ: ಸಚಿವ ಅರವಿಂದ ಲಿಂಬಾವಳಿ
ಸಚಿವ ಅರವಿಂದ ಲಿಂಬಾವಳಿ
TV9 Web
| Edited By: |

Updated on: Jun 04, 2021 | 3:18 PM

Share

ಬೆಂಗಳೂರು: ಕನ್ನಡ ಭಾಷೆಯನ್ನು ಗೂಗಲ್‌ನಲ್ಲಿ ಕೊಳಕು ಭಾಷೆಯೆಂದು ಬಿಂಬಿಸಿದ್ದ (Ugliest language of India )ಪ್ರಮಾದ ವಿಚಾರವಾಗಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆ‌ ಕೊಟ್ಟಿದ್ದೆ. ಆದರೆ ಇದೀಗ ಗೂಗಲ್‌ನವರು ಎಚ್ಚೆತ್ತುಕೊಂಡು ಕ್ಷಮೆ ಕೇಳಿದ್ದಾರೆ. ಹೀಗಾಗಿ ಪ್ರಕರಣವನ್ನು ಇಲ್ಲಿಗೆ ಅಂತ್ಯಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರವಿಂದ ಲಿಂಬಾವಳಿ ತಿಳಿಸಿದರು.

ತಂತ್ರಜ್ಞಾನ ದೈತ್ಯ ಗೂಗಲ್​ನಲ್ಲಿ Ugliest Language of India ಎಂದು ಸರ್ಚ್ ಮಾಡಿದರೆ ಕನ್ನಡ ಎಂದು ಪ್ರದರ್ಶಿಸುತ್ತಿದ್ದ ಬಗ್ಗೆ ಅಪಾರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಗೂಗಲ್ ಈ ಬಗ್ಗೆ ನಿನ್ನೆ ರಾತ್ರಿ (ಜೂನ್ 3) ಕ್ಷಮೆ ಯಾಚಿಸಿದೆ. ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿರುವ ಗೂಗಲ್, ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ ಎಂದು ಕನ್ನಡಿಗರ ಕ್ಷಮೆ ಯಾಚಿಸಿದೆ. ಕನ್ನಡಿಗರ ಆಗ್ರೋಶಕ್ಕೆ ಮಣಿದು ವೆಬ್​ಸೈಟ್​ ಗೋಚರವಾಗದಂತೆ ಮಾಡಿದ್ದ ಗೂಗಲ್ ಇದೀಗ ಕನ್ನಡಿಗರಲ್ಲಿ ಬೇಷರತ್ ಕ್ಷಮೆ ಯಾಚಿಸಿದೆ.

ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ ಇಂಟರ್​ನೆಟ್​ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಕ್ರಮ ಕೈಗೊಳ್ಳುತ್ತೇವೆ. ಮತ್ತು ನಮ್ಮ ಅಲ್ಗೋರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲರಾಗಿರುವುದನ್ನು ಮುಂದುವರೆಸುತ್ತೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ ಎಂದು ಗೂಗಲ್ ಕ್ಷಮೆ ಕೇಳಿದೆ.

ಭಾರತದ ಕೊಳಕು ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ, ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತಾಡಿದರೂ ಅದನ್ನು ಸಹಿಸಲಾಗುವುದಿಲ್ಲ, ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್ ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: Ugliest Language in India: ಕನ್ನಡಿಗರ ಸ್ವಾಭಿಮಾನ ಕೆಣಕಿದ ಗೂಗಲ್​; ಕನ್ನಡವನ್ನು ಕೊಳಕು ಭಾಷೆ ಎಂದು ಅಪಮಾನಿಸಿದ ಸರ್ಚ್​ ಎಂಜಿನ್

Queen of all Languages ಎಂದು ಗೂಗಲ್​ ಸರ್ಚ್​ ಮಾಡಿದರೆ ಉತ್ತರವೇನು ಗೊತ್ತಾ?

(Google apologizes in Ugliest language of India case so case is closed says Karnataka Culture and Kannada Minister Arvind Limbavali)

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ