AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಬಸ್​ ಬುಕ್​: ನಾಳೆ ಉತ್ತರ ಕರ್ನಾಟ ಜಿಲ್ಲೆಗಳಲ್ಲಿ ಸಂಚಾರ ವ್ಯತ್ಯಯ

ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ ವಿಜಯನಗರದಲ್ಲಿ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ಸರ್ಕಾರಿ ಬಸ್​ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ನಾಳೆ ಒಂದು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಸ್​​ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಬಸ್​ ಬುಕ್​: ನಾಳೆ ಉತ್ತರ ಕರ್ನಾಟ ಜಿಲ್ಲೆಗಳಲ್ಲಿ ಸಂಚಾರ ವ್ಯತ್ಯಯ
ನಾಳೆ ಸರ್ಕಾರದ ಸಾಧನಾ ಸಮಾವೇಶ
TV9 Web
| Edited By: |

Updated on:May 19, 2025 | 9:54 PM

Share

ವಿಜಯನಗರ, ಮೇ 19: ಕಾಂಗ್ರೆಸ್ (Congress) ಸರ್ಕಾರ 2 ವರ್ಷಗಳ ಅಧಿಕಾರವಧಿ ಪೂರ್ಣಗೊಳಿಸಿದೆ. ಈ ಹಿನ್ನಲೆ ನಾಳೆ ಜಿಲ್ಲೆಯಲ್ಲಿ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇನ್ನು ಈ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆದೊಯ್ಯಲು, ಸರ್ಕಾರಿ ಬಸ್​ಗಳನ್ನು (Government bus) ನಿಯೋಜನೆ ಮಾಡಲಾಗಿದೆ. ಹಾಗಾಗಿ ನಾಳೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಪ್ರಯಾಣಿಕರು ನಾಳೆಯ ಪ್ರಯಾಣವನ್ನು ಮುಂದೂಡುವುದು ಉತ್ತಮ ಎನ್ನಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಳೆಗೆ ಎರಡು ವರ್ಷ ಯಶಸ್ವಿಯಾಗಿ ಪೂರೈಸುತ್ತದೆ. ಈ ಹಿನ್ನೆಲೆ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವಿವಿಧ ಸವಲತ್ತುಗಳ ವಿತರಣಾ ಸಮಾವೇಶವೂ ನಡೆಯಲಿದೆ. ಎಲ್ಲಾ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ವಿಜಯನಗರದತ್ತ ಮುಖ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯಿಂದ 200 ಬಸ್​​ಗಳು ನಿಗದಿ

ವಿಜಯಪುರ ಜಿಲ್ಲೆಯಿಂದ 200 ಬಸ್​​ಗಳನ್ನು ನಿಗದಿ ಮಾಡಲಾಗಿದೆ. ವಿಜಯಪುರದಿಂದ ಸಾವಿರಾರು ಜನರು ತೆರಳಿದ್ದಾರೆ. ಫಲಾನುಭವಿಗಳ ಬೆಂಬಲಿಗರು ತೆರಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನಲೆ ನಾಳೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಬಸ್​ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹಾಗಾಗಿ ಸಾರ್ವಜನಿಕರು ಸಹಕಾರ ನೀಡಬೇಕೆಂದು ವಿಜಯಪುರ ಜಿಲ್ಲಾ ವಿಭಾಗೀಯ ನಿಯಂತ್ರಾಣಾಧಿಕಾರಿ ನಾರಾಯಣಪ್ಪ ಕುರುಬರ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಳೆ ಸೃಷ್ಟಿಸಿರುವ ಅವಾಂತರಗಳನ್ನು ಬಿಬಿಎಂಪಿ ವಾರ್​ರೂಮಲ್ಲಿ ಕೂತು ನೋಡಿದರೆ ಪರಿಹಾರಗಳು ಸಿಗುತ್ತವೆಯೇ?

ಜಿಲ್ಲೆಯಲ್ಲಿ ನಿತ್ಯ 800 ಬಸ್​ಗಳು ಜಿಲ್ಲೆ, ಅಂತರ್ ಜಿಲ್ಲೆ ಹಾಗೂ ಅಂತಾರಾಜ್ಯಗಳಲ್ಲಿ ಪ್ರಯಾಣ ಮಾಡುತ್ತವೆ. ನಾಳೆ ವಿಜಯನಗರಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಜಿಲ್ಲೆಯಿಂದ 200 ಬಸ್​ಗಳನ್ನು ನೀಡಲಾಗಿದೆ. ಉಳಿದ 600 ಬಸ್​ಗಳು ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದೆ. ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾದಂತೆ ಸೇವೆ ನೀಡುತ್ತೇವೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

200 ಬಸ್​ಗಳು ಮೀಸಲು

ಬಾಗಲಕೋಟೆ ‌ಜಿಲ್ಲೆಯ 200 ಬಸ್​ಗಳು ಮೀಸಲಿಡಲಾಗಿದೆ. ವಿವಿಧ ಸವಲತ್ತುಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನ ಕರೆದೊಯ್ಯುವ ನೆಪದಲ್ಲಿ ಬಸ್ ಮೀಸಲಿಡಲಾಗಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಯಾದಗಿರಿಯಿಂದ 76 ಕೆಕೆಆರ್​ಟಿಸಿ ಬಸ್ ಬಳಕೆ

ಇನ್ನು ಯಾದಗಿರಿಯಿಂದ ಕೂಡ 76 ಕೆಕೆಆರ್​ಟಿಸಿ ಬಸ್ ಬಳಕೆ ಮಾಡಲಾಗುತ್ತಿದೆ. ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆದೊಯ್ಯಲು ಬಸ್​ಗಳ ಬಳಕೆ ಹಿನ್ನಲೆ ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ಬಸ್ ನಿಲ್ದಾಣದಲ್ಲಿ ಮಹಿಳೆಯರು, ಮಕ್ಕಳು, ವೃದ್ಧ ಪ್ರಯಾಣಿಕರು ಪರದಾಡುವಂತಾಗಿದೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: 4 ತಿಂಗಳು ಮಲ್ಪೆ ಬೀಚ್, ಸೈಂಟ್ ಮೇರಿಸ್ ದ್ವೀಪ ಬಂದ್​​

ದೂರದ ಊರುಗಳಿಗೆ ತೆರಳಲು ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸಿದ್ದು, ಗಂಟೆಗಟ್ಟಲೆ ಕಾದರೂ ಬಸ್​ಗಳು ಬಂದಿಲ್ಲ. ಸಮಾವೇಶಕ್ಕೆ ಸರ್ಕಾರಿ ಬಸ್ ಬದಲು ಖಾಸಗಿ ಬಸ್ ಬಳಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ. ತಮಗೆ ಬಸ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:50 pm, Mon, 19 May 25

Follow Us
Web contact
Web contact

TV9 Kannada

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?