AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಬಸ್​ ಬುಕ್​: ನಾಳೆ ಉತ್ತರ ಕರ್ನಾಟ ಜಿಲ್ಲೆಗಳಲ್ಲಿ ಸಂಚಾರ ವ್ಯತ್ಯಯ

ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ ವಿಜಯನಗರದಲ್ಲಿ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ಸರ್ಕಾರಿ ಬಸ್​ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ನಾಳೆ ಒಂದು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಸ್​​ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಬಸ್​ ಬುಕ್​: ನಾಳೆ ಉತ್ತರ ಕರ್ನಾಟ ಜಿಲ್ಲೆಗಳಲ್ಲಿ ಸಂಚಾರ ವ್ಯತ್ಯಯ
ನಾಳೆ ಸರ್ಕಾರದ ಸಾಧನಾ ಸಮಾವೇಶ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:May 19, 2025 | 9:54 PM

Share

ವಿಜಯನಗರ, ಮೇ 19: ಕಾಂಗ್ರೆಸ್ (Congress) ಸರ್ಕಾರ 2 ವರ್ಷಗಳ ಅಧಿಕಾರವಧಿ ಪೂರ್ಣಗೊಳಿಸಿದೆ. ಈ ಹಿನ್ನಲೆ ನಾಳೆ ಜಿಲ್ಲೆಯಲ್ಲಿ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇನ್ನು ಈ ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆದೊಯ್ಯಲು, ಸರ್ಕಾರಿ ಬಸ್​ಗಳನ್ನು (Government bus) ನಿಯೋಜನೆ ಮಾಡಲಾಗಿದೆ. ಹಾಗಾಗಿ ನಾಳೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಪ್ರಯಾಣಿಕರು ನಾಳೆಯ ಪ್ರಯಾಣವನ್ನು ಮುಂದೂಡುವುದು ಉತ್ತಮ ಎನ್ನಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಳೆಗೆ ಎರಡು ವರ್ಷ ಯಶಸ್ವಿಯಾಗಿ ಪೂರೈಸುತ್ತದೆ. ಈ ಹಿನ್ನೆಲೆ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವಿವಿಧ ಸವಲತ್ತುಗಳ ವಿತರಣಾ ಸಮಾವೇಶವೂ ನಡೆಯಲಿದೆ. ಎಲ್ಲಾ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ವಿಜಯನಗರದತ್ತ ಮುಖ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯಿಂದ 200 ಬಸ್​​ಗಳು ನಿಗದಿ

ವಿಜಯಪುರ ಜಿಲ್ಲೆಯಿಂದ 200 ಬಸ್​​ಗಳನ್ನು ನಿಗದಿ ಮಾಡಲಾಗಿದೆ. ವಿಜಯಪುರದಿಂದ ಸಾವಿರಾರು ಜನರು ತೆರಳಿದ್ದಾರೆ. ಫಲಾನುಭವಿಗಳ ಬೆಂಬಲಿಗರು ತೆರಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನಲೆ ನಾಳೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಬಸ್​ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹಾಗಾಗಿ ಸಾರ್ವಜನಿಕರು ಸಹಕಾರ ನೀಡಬೇಕೆಂದು ವಿಜಯಪುರ ಜಿಲ್ಲಾ ವಿಭಾಗೀಯ ನಿಯಂತ್ರಾಣಾಧಿಕಾರಿ ನಾರಾಯಣಪ್ಪ ಕುರುಬರ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಳೆ ಸೃಷ್ಟಿಸಿರುವ ಅವಾಂತರಗಳನ್ನು ಬಿಬಿಎಂಪಿ ವಾರ್​ರೂಮಲ್ಲಿ ಕೂತು ನೋಡಿದರೆ ಪರಿಹಾರಗಳು ಸಿಗುತ್ತವೆಯೇ?

ಜಿಲ್ಲೆಯಲ್ಲಿ ನಿತ್ಯ 800 ಬಸ್​ಗಳು ಜಿಲ್ಲೆ, ಅಂತರ್ ಜಿಲ್ಲೆ ಹಾಗೂ ಅಂತಾರಾಜ್ಯಗಳಲ್ಲಿ ಪ್ರಯಾಣ ಮಾಡುತ್ತವೆ. ನಾಳೆ ವಿಜಯನಗರಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಜಿಲ್ಲೆಯಿಂದ 200 ಬಸ್​ಗಳನ್ನು ನೀಡಲಾಗಿದೆ. ಉಳಿದ 600 ಬಸ್​ಗಳು ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದೆ. ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾದಂತೆ ಸೇವೆ ನೀಡುತ್ತೇವೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

200 ಬಸ್​ಗಳು ಮೀಸಲು

ಬಾಗಲಕೋಟೆ ‌ಜಿಲ್ಲೆಯ 200 ಬಸ್​ಗಳು ಮೀಸಲಿಡಲಾಗಿದೆ. ವಿವಿಧ ಸವಲತ್ತುಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನ ಕರೆದೊಯ್ಯುವ ನೆಪದಲ್ಲಿ ಬಸ್ ಮೀಸಲಿಡಲಾಗಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಯಾದಗಿರಿಯಿಂದ 76 ಕೆಕೆಆರ್​ಟಿಸಿ ಬಸ್ ಬಳಕೆ

ಇನ್ನು ಯಾದಗಿರಿಯಿಂದ ಕೂಡ 76 ಕೆಕೆಆರ್​ಟಿಸಿ ಬಸ್ ಬಳಕೆ ಮಾಡಲಾಗುತ್ತಿದೆ. ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆದೊಯ್ಯಲು ಬಸ್​ಗಳ ಬಳಕೆ ಹಿನ್ನಲೆ ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ಬಸ್ ನಿಲ್ದಾಣದಲ್ಲಿ ಮಹಿಳೆಯರು, ಮಕ್ಕಳು, ವೃದ್ಧ ಪ್ರಯಾಣಿಕರು ಪರದಾಡುವಂತಾಗಿದೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: 4 ತಿಂಗಳು ಮಲ್ಪೆ ಬೀಚ್, ಸೈಂಟ್ ಮೇರಿಸ್ ದ್ವೀಪ ಬಂದ್​​

ದೂರದ ಊರುಗಳಿಗೆ ತೆರಳಲು ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸಿದ್ದು, ಗಂಟೆಗಟ್ಟಲೆ ಕಾದರೂ ಬಸ್​ಗಳು ಬಂದಿಲ್ಲ. ಸಮಾವೇಶಕ್ಕೆ ಸರ್ಕಾರಿ ಬಸ್ ಬದಲು ಖಾಸಗಿ ಬಸ್ ಬಳಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ. ತಮಗೆ ಬಸ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:50 pm, Mon, 19 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ