AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯವಿಲ್ಲ: ಹಿಡಿಶಾಪ ಹಾಕುತ್ತಿರುವ ಚಿತ್ರದುರ್ಗ ಜನರು

ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಈ ಪಟ್ಟಣದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಆಗಬೇಕೆಂಬ ಕನಸು ನನಸಾಗಿದೆ. ಆದರೆ 10 ಕೋಟಿ ರೂ. ವೆಚ್ಚದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ.

ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯವಿಲ್ಲ: ಹಿಡಿಶಾಪ ಹಾಕುತ್ತಿರುವ ಚಿತ್ರದುರ್ಗ ಜನರು
ಹೊಳಲ್ಕೆರೆ ಬಸ್ ನಿಲ್ದಾಣ
sandhya thejappa
| Edited By: |

Updated on: Mar 04, 2021 | 12:21 PM

Share

ಚಿತ್ರದುರ್ಗ: ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಆಗಿದೆ. ಕ್ಷೇತ್ರದ ಶಾಸಕರೇ ಸಾರಿಗೆ ನಿಗಮದ ಅಧ್ಯಕ್ಷರೂ ಆಗಿದ್ದಾರೆ. ಆದರೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಬಸ್ ನಿಲ್ದಾಣ ಮಾತ್ರ ಸಾರ್ವಜನಿಕ ಸೇವೆಗೆ ಲಭ್ಯವಾಗದೆ ಪಾಳು ಬಿದ್ದಿದೆ. ಈ ಬಗ್ಗೆ ತಲೆಕಡೆಸಿಕೊಳ್ಳುವವರು ಗತಿಯಿಲ್ಲದಂತಾಗಿದೆ.

ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಈ ಪಟ್ಟಣದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಆಗಬೇಕೆಂಬ ಕನಸು ನನಸಾಗಿದೆ. ಆದರೆ 10 ಕೋಟಿ ರೂ. ವೆಚ್ಚದಲ್ಲಿ ಸಾರಿಗೆ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷವೇ ಕಳೆದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ. ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರೇ ಸದ್ಯ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದರೂ ಬಸ್ ನಿಲ್ದಾಣ ಸಾರ್ವಜನಿಕ ಸೇವೆಗೆ ಲಭ್ಯವಾಗದೇ ಪಾಳು ಬಿದ್ದಿದೆ. ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಸ್ವ ಪ್ರತಿಷ್ಠೆಯಿಂದಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಬಸ್ ನಿಲ್ದಾಣ ಸೇವೆಗೆ ಸಿಗದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಹೊಳಲ್ಕೆರೆ ಬಿಜೆಪಿ ಶಾಸಕ, ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಅವರನ್ನು ಕೇಳಿದರೆ 10ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಪುರಸಭೆಗೆ ಸೇರಿದ ಜಾಗವನ್ನು ಬಸ್ ನಿಲ್ದಾಣಕ್ಕಾಗಿ ಸಾರಿಗೆ ಇಲಾಖೆಗೆ ನೀಡಲಾಗಿದೆ. ಆದರೆ ಕೆಲ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಹೈಕೋರ್ಟ್​ನಲ್ಲಿ ಪಿಟಿಷನ್ ಹಾಕಿದ್ದರು. ಹೀಗಾಗಿ ಬಸ್ ನಿಲ್ದಾಣ ಉದ್ಘಾಟನೆ ವಿಳಂಬವಾಗಿದೆ. ಇತ್ತೀಚೆಗಷ್ಟೇ ಅವರು ಹಾಕಿದ ಕೇಸು ವಜಾ ಆಗಿದ್ದು, ಶೀಘ್ರದಲ್ಲೇ ಸಾರಿಗೆ ಮಂತ್ರಿ ಲಕ್ಷ್ಮಣ್ ಸವದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲುರವರನ್ನು ಕರೆಸಿ ಬಸ್ ನಿಲ್ದಾಣ ಸೇರಿ ಇತರೆ ಕಾಮಗಾರಿಗಳ ಉದ್ಘಾಟನೆ ಮಾಡುತ್ತೇವೆ ಎಂದು ತಿಳಿಸುತ್ತಿದ್ದಾರೆ.

ಸಾರ್ವಜನಿಕ ಸೇವೆಗೆ ಲಭ್ಯವಾಗದೆ ಪಾಳು ಬಿದ್ದ ಬಸ್​ ನಿಲ್ದಾಣ

ದೂಳಿನಿಂದ ಕೂಡಿರುವ ಬಸ್​ ನಿಲ್ದಾಣ

ಕೋಟೆನಾಡು ಚಿತ್ರದುರ್ಗದಲ್ಲಿ ರಾಜಕೀಯ ಜಿದ್ದಾಜಿದ್ದಿನಿಂದಾಗಿ ಸಾರಿಗೆ ನಿಗಮದ ಅಧ್ಯಕ್ಷರ ತವರು ಕ್ಷೇತ್ರ ಹೊಳಲ್ಕೆರೆಯಲ್ಲೇ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಹೊಳಲ್ಕೆರೆಯ ಜನ ನಿತ್ಯ ಹಿಡಿಶಾಪ ಹಾಕುವಂತಾಗಿದೆ.

ಇದನ್ನು ಓದಿ

ಹಾವೇರಿ ಜಿಲ್ಲೆಯಲ್ಲಿ ಪಾಳುಬಿದ್ದ ಎರಡು ಗರಡಿಮನೆಗಳು; ಕಸರತ್ತಿಗೆ ಬಳಸುತ್ತಿದ್ದ ಪರಿಕರಗಳೆಲ್ಲ ಮಾಯ

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ನಂಜನಗೂಡು ಸರ್ಕಾರಿ ಬಸ್ ಸ್ಟಾಪ್..

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!