ಸಿದ್ದಗಂಗಾ ಮಠದ ಊಟಕ್ಕೂ ಸರ್ಕಾರದಿಂದ ಕತ್ತರಿ!

ಬೆಂಗಳೂರು: ಸಿದ್ದಗಂಗಾ ಮಠದ ಊಟಕ್ಕೂ ರಾಜ್ಯ ಬಿಜೆಪಿ ಸರ್ಕಾರ ಬ್ರೇಕ್ ಹಾಕಿದೆ. ದಾಸೋಹ ಯೋಜನೆ ಅಡಿ ಸಿದ್ಧಗಂಗಾ ಮಠಕ್ಕೆ ನೀಡುತ್ತಿದ್ದ ಅಕ್ಕಿ, ಗೋಧಿ ಪೂರೈಕೆ ಕಳೆದ ಮೂರು ತಿಂಗಳಿಂದ ನಿಂತಿದೆ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್‌ ದಾಖಲೆಗಳನ್ನ ರಿಲೀಸ್ ಮಾಡಿದ್ದಾರೆ. ದಾಸೋಹ ಯೋಜನೆ ಅಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಸಿದ್ದಗಂಗಾ ಮಠದ 7,359 ವಿದ್ಯಾರ್ಥಿಗಳ ಊಟಕ್ಕೆ 73590 ಕೆಜಿ ಅಕ್ಕಿ, 36795 ಕೆಜಿ ಗೋಧಿ ಪೂರೈಕೆಯಾಗುತ್ತಿತ್ತು. ಆದರೆ ಕಳೆದ ಮೂರು ತಿಂಗಳಿಂದ ಆಹಾರ […]

ಸಿದ್ದಗಂಗಾ ಮಠದ ಊಟಕ್ಕೂ ಸರ್ಕಾರದಿಂದ ಕತ್ತರಿ!

Updated on: Feb 04, 2020 | 4:22 PM

ಬೆಂಗಳೂರು: ಸಿದ್ದಗಂಗಾ ಮಠದ ಊಟಕ್ಕೂ ರಾಜ್ಯ ಬಿಜೆಪಿ ಸರ್ಕಾರ ಬ್ರೇಕ್ ಹಾಕಿದೆ. ದಾಸೋಹ ಯೋಜನೆ ಅಡಿ ಸಿದ್ಧಗಂಗಾ ಮಠಕ್ಕೆ ನೀಡುತ್ತಿದ್ದ ಅಕ್ಕಿ, ಗೋಧಿ ಪೂರೈಕೆ ಕಳೆದ ಮೂರು ತಿಂಗಳಿಂದ ನಿಂತಿದೆ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್‌ ದಾಖಲೆಗಳನ್ನ ರಿಲೀಸ್ ಮಾಡಿದ್ದಾರೆ.

ದಾಸೋಹ ಯೋಜನೆ ಅಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಸಿದ್ದಗಂಗಾ ಮಠದ 7,359 ವಿದ್ಯಾರ್ಥಿಗಳ ಊಟಕ್ಕೆ 73590 ಕೆಜಿ ಅಕ್ಕಿ, 36795 ಕೆಜಿ ಗೋಧಿ ಪೂರೈಕೆಯಾಗುತ್ತಿತ್ತು. ಆದರೆ ಕಳೆದ ಮೂರು ತಿಂಗಳಿಂದ ಆಹಾರ ಧಾನ್ಯಗಳು ಪೂರೈಕೆಯಾಗಿಲ್ಲ. ದಾಸೋಹ ಯೋಜನೆ ಅಡಿ ಮಠಗಳಿಗೆ ನೀಡುತ್ತಿದ್ದ ಅಕ್ಕಿಗೂ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ ಎಂದು ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ.

Published On - 3:53 pm, Tue, 4 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us