ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಸಮಿತಿ ರಚಿಸಿದ ಸರ್ಕಾರ

ನೌಕರರು ಸರ್ಕಾರದ ಮುಂದಿಟ್ಟಿರುವ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ. 6ನೇ ವೇತನ ಆಯೋಗ ಹೊರತುಪಡಿಸಿ ಉಳಿದ 8 ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದೆ.

ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಸಮಿತಿ ರಚಿಸಿದ ಸರ್ಕಾರ
ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿ, ಬೆಂಗಳೂರು
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 15, 2020 | 9:06 PM

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ನಡೆಸಿದ ಮುಷ್ಕರ ಮತ್ತು ಅವರು ಮುಂದಿಟ್ಟಿರುವ ಬೇಡಿಕೆಗಳು ಕ್ರಮೇಣ ಈಡೇರುವಂತೆ ಕಾಣುತ್ತಿದೆ.

ನೌಕರರು ಸರ್ಕಾರದ ಮುಂದಿಟ್ಟಿರುವ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ. 6ನೇ ವೇತನ ಆಯೋಗ ಹೊರತುಪಡಿಸಿ ಉಳಿದ 8 ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದೆ.

ಸಮಿತಿಯ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್​ಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ಬೆಂಗಳೂರು ನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಆಗ್ನೇಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಎನ್​ಡಬ್ಲ್ಯೂಕೆಆರ್​ಟಿಸಿ) ಮತ್ತು ಈಶಾನ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಎನ್​ಈಕೆಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

ಆರ್ಥಿಕ ಸ್ಥಿತಿಗತಿ ಪರಿಶೀಲಿಸಿ, 6ನೇ ವೇತನ ಆಯೋಗದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಸಮಿತಿಯ ಕಾರ್ಯದರ್ಶಿಯಾಗಿ ಕೆಎಸ್​ಆರ್​ಟಿಸಿಯ ಸದಸ್ಯರೊಬ್ಬರನ್ನು ನೇಮಕ ಮಾಡಲಾಗಿದೆ. ಹಾಗೆಯೇ, ನಿಗಮದ ನೌಕರರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ ಮತ್ತು ಅಂತರ್ ನಿಗಮ ವರ್ಗಾವಣೆ ಸಾಧ್ಯತೆಯನ್ನೂ ಈ ಸಮಿತಿ ಪರಿಶೀಲಿಸಲಿದೆ. ಅಧಿಕಾರಿಗಳಿಂದ ಕಿರುಕುಳವಾಗುತ್ತಿದೆಯೆಂದು ಆರೋಪಿಸಿದ್ದ ನೌಕರರು ಅದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದರು. ಈ ನಿಟ್ಟಿನಲ್ಲಿ ಒಂದು ಪ್ರತ್ಯೇಕ ಸಮಿತಿ ರಚಿಸಲು ಸಂಸ್ಥೆ ನಿರ್ಧರಿಸಿದೆ.

ಸಾರಿಗೆ ನೌಕರರು ಮುಷ್ಕರ ಹಿಂಪಡೆದ ಬೆನ್ನಲ್ಲೇ ಬಸ್​ ಸಂಚಾರ ಪುನರಾರಂಭ; ನಿಟ್ಟುಸಿರು ಬಿಟ್ಟ ಪ್ರಯಾಣಿಕರು

Published On - 9:06 pm, Tue, 15 December 20