AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸರ್ಕಾರಿ ನೌಕರರಿಗೆ ಚಿಟ್ ಫಂಡ್ ಮೋಸ, 8 ಕೋಟಿ ವಂಚನೆ; ಕಚೇರಿಗೆ ಮುತ್ತಿಗೆ

Chit fund fraud in Bangalore : ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಬಾಬು ಚಿಟ್ ಫಂಡ್ ಕಛೇರಿ ಇದ್ದು, ಬಾಬು ಚಿಟ್‌ ಫಂಡ್, ಜೋತೆಗೆ ಅಗರಬತ್ತಿ ಸಪ್ಲೈ ಸೇರಿದಂತೆ ವಿವಿಧ ಉದ್ಯಮಗಳು ಜನರನ್ನು ಮೊಸ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.

ಬೆಂಗಳೂರು: ಸರ್ಕಾರಿ ನೌಕರರಿಗೆ ಚಿಟ್ ಫಂಡ್ ಮೋಸ, 8 ಕೋಟಿ ವಂಚನೆ; ಕಚೇರಿಗೆ ಮುತ್ತಿಗೆ
ವೆಂಕಟೇಶ್ ಬಾಬು
preethi shettigar
|

Updated on:Mar 09, 2021 | 3:11 PM

Share

ಬೆಂಗಳೂರು: ಸರ್ಕಾರಿ ನೌಕರರನ್ನು ಮತ್ತು ಉದ್ಯಮಿಗಳನ್ನೇ ಗುರಿಯಾಗಿಸಿಕೊಂಡು ಚಿಟ್ ಫಂಡ್ ನೋಂದಣಿ ಪಡೆದ ಬಾಬು ಚಿಟ್ ಫಂಡ್ ನೂರಾರು ಜನರಿಗೆ ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಡೆಪಾಸೀಟರ್ ಎಕ್ಸೋರ್ಬಿಟೆಂಟ್ ಆಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಬಾಬು ಚಿಟ್ ಫಂಡ್ ಕಚೇರಿ ಇದ್ದು, ಬಾಬು ಚಿಟ್‌ ಫಂಡ್, ಜೊತೆಗೆ ಅಗರಬತ್ತಿ ಸಪ್ಲೈ ಸೇರಿದಂತೆ ವಿವಿಧ ಉದ್ಯಮಗಳ ಮೂಲಕ ಜನರನ್ನು ಮೊಸ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.

ವೆಂಕಟೇಶ್ ಬಾಬು, ಲೋಕೇಶ್ ಬಾಬು, ನಟರಾಜು ಸೇರಿದಂತೆ 3 ಜನರ ಮಾಲಿಕತ್ವದಲ್ಲಿ 8 ಕೋಟಿಗೂ ಅಧಿಕ ವಂಚನೆ ನಡೆಸಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಇವರು ರಾಜ್ಯ, ನೆರೆ ರಾಜ್ಯಗಳಲ್ಲೂ ನೂರಾರು ಜನರಿಂದ ಹೂಡಿಕೆ ಮಾಡಿಕೊಂಡಿರುವ ಮಾಹಿತಿ ಇದ್ದು, ಹಣ ಕಳೆದುಕೊಂಡ ಜನರು ಸದ್ಯ ವಂಚಿಸಿದವರ ಮನೆ ಹಾಗೂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಮಂಡ್ಯದಲ್ಲಿ ಡೋಲುಗಳ್ಳನನ್ನು ಬಂಧಿಸಿದ ಪೊಲೀಸರು: ಮಂಡ್ಯ ಜಿಲ್ಲೆ ಕೆ. ಆರ್ ಪೇಟೆ ತಾಲೂಕಿನ‌ ಕಿಕ್ಕೇರಿ ಸಮೀಪದ ಕಲ್ಯಾಣ ಮಂಟಪಗಳಲ್ಲಿ ಡೋಲುಗಳನ್ನ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಮೂಲದ ಭಾಸ್ಕರ್ ಎಂಬುವವನು ಬಂಧಿತ ಆರೋಪಿಯಾಗಿದ್ದು, ಕಲಾವಿದರು ಮಲಗಿದ್ದ ಸಮಯದಲ್ಲಿ ಮಂಗಳವಾದ್ಯಗಳ ಕಳವು ಮಾಡುತ್ತಿದ್ದ ಎಂದು ತಿಳಿದುಬಂದಿದೆ.

BASKER

ಭಾಸ್ಕರ್

ಕಳ್ಳತನದ ದೃಶ್ಯ ಕಲ್ಯಾಣಮಂಟಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಂಧಿತನ ಕೃತ್ಯ ಬೆಳಕಿಗೆ ಬಂದಿದೆ. ಮಾರ್ಚ್ 5 ರಂದು ಕೆ. ಆರ್​ ಪೇಟೆಯ ಎಸ್​ಆರ್​ಟಿ ಕಲ್ಯಾಣ ಮಂಟಪದಲ್ಲಿ 80 ಸಾವಿರ ಮೌಲ್ಯದ ಮಂಗಳವಾದ್ಯ ಕಳವಾಗಿದ್ದು, ಡೋಲುಗಳು ಇಲ್ಲದೆ ಇರುವುದನ್ನು ಕಂಡು ಕಂಗಾಲಾಗಿದ್ದ ಕಲಾವಿದರು, ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಭಾಸ್ಕರ್ ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಗಿರವಿ ಇಟ್ಟ ಚಿನ್ನಾಭರಣ ವಾಪಸ್ ನೀಡದೆ ವಂಚನೆ; ಫೈನಾನ್ಸ್​ ಮಾಲೀಕ ಅರೆಸ್ಟ್​

Published On - 2:47 pm, Tue, 9 March 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?