AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರದ ಕಸರತ್ತು; ಸಂಜೆ ಮತ್ತೆ ಸಭೆ

ಸಂಜೆ ಮತ್ತೊಂದು ಸುತ್ತಿನ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಸಿಎಸ್​ ಷಡಕ್ಷರಿ ಜತೆ ವಂದಿತಾ ಶರ್ಮಾ ಅವರು ಸಂಜೆ ಸಭೆ ನಡೆಸಲಿದ್ದಾರೆ.

ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರದ ಕಸರತ್ತು; ಸಂಜೆ ಮತ್ತೆ ಸಭೆ
ವಿಧಾನಸೌಧ
Ganapathi Sharma
|

Updated on: Feb 28, 2023 | 4:37 PM

Share

ಬೆಂಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿದಿರುವ ಸರ್ಕಾರಿ ನೌಕರರ (government employees) ಮನವೊಲಿಸಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್​ ಷಡಕ್ಷರಿ, ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಸೇರಿದಂತೆ ಹಲವು ನೌಕರ ಮುಖಂಡರ ಜತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಂದು (ಮಂಗಳವಾರ) ಮಧ್ಯಾಹ್ನ ನಡೆಸಿದ್ದ ಸಭೆ ವಿಫಲವಾಗಿದೆ. ಇದರ ಬೆನ್ನಲ್ಲೇ ಸಂಜೆ ಮತ್ತೊಂದು ಸುತ್ತಿನ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಸಿಎಸ್​ ಷಡಕ್ಷರಿ ಜತೆ ವಂದಿತಾ ಶರ್ಮಾ ಅವರು ಸಂಜೆ ಸಭೆ ನಡೆಸಲಿದ್ದಾರೆ.

ಈ ಮಧ್ಯೆ, ನಾಳೆ ಸರ್ಕಾರಿ ನೌಕರರು ಕೆಲಸ ಮಾಡುವುದಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ನಮ್ಮ ತಂಡ​ ಇರುತ್ತದೆ. ರಾಜ್ಯಾದ್ಯಂತ ನಮ್ಮ ತಂಡ ಕೆಲಸ ಮಾಡಲಿದೆ ಎಂದು ಸಿಎಸ್​ ಷಡಕ್ಷರಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ್ದ ಅವರು, ಮುಖ್ಯ ಕಾರ್ಯದರ್ಶಿಗಳ ಜತೆ ನಡೆದ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದರು. ಜತೆಗೆ, ಬೇಡಿಕೆಗಳ ಪರವಾಗಿ ಸರ್ಕಾರದ ಆದೇಶ ಬಂದರೆ ಮಾತ್ರ ಪ್ರತಿಭಟನೆ ವಾಪಸ್ ಪಡೆಯುತ್ತೇವೆ ಎಂಬುದಾಗಿ ಹೇಳಿದ್ದೆವು. ಸಮಯಾವಕಾಶ ನೀಡಿ ಅಂತ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಳಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಹೇಳಿದ್ದೇವೆ‌. ಐದು ರಾಜ್ಯಗಳ ಮಾದರಿಯಂತೆ ಎನ್​ಪಿಎಸ್ ರದ್ದು ಮಾಡಿ, ಒಪಿಎಸ್​ ಜಾರಿ ಮಾಡಿ ಎಂದು ಮನವಿ ಮಾಡಿದ್ದೆವು. ಅದರ ಬಗ್ಗೆ ಮುಖ್ಯಮಂತ್ರಿಗಳು ಮಾತೇ ಆಡುತ್ತಿಲ್ಲ. ಹೀಗಾಗಿ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Government Employees Strike: ಪಟ್ಟು ಬಿಡದ ಸರ್ಕಾರಿ ನೌಕರರು; ಸಂಧಾನ ಮಾತುಕತೆ ವಿಫಲ, ಮುಷ್ಕರ ಅಚಲ

ರಾಜ್ಯಾದ್ಯಂತ ಸುಮಾರು 10 ಲಕ್ಷ ಸರ್ಕಾರಿ ನೌಕರರು ಮಾರ್ಚ್​ 1ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಬಿಬಿಎಂಪಿ, ಬಿಡಿಎ ಸೇರಿದಂತೆ ಅನೇಕ ಇಲಾಖೆಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್