AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ವಿಮೆ

ಕೊವಿಡ್ ಕರ್ತವ್ಯದಲ್ಲಿದ್ದ ಅವಧಿಯಲ್ಲಿ ಮೃತಪಟ್ಟ ಸರ್ಕಾರಿ ನೌಕರರ‌ ಕುಟುಂಬಕ್ಕೆ ಮೂವತ್ತು ಲಕ್ಷ ರೂಪಾಯಿ ವಿಮಾ ಮೊತ್ತ ಪರಿಹಾರ ನೀಡಲಾಗುತ್ತದೆ.

ಕೊವಿಡ್​ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ವಿಮೆ
ಕೊವಿಡ್ ವಾರಿಯರ್ಸ್​
shruti hegde
| Edited By: |

Updated on: Apr 30, 2021 | 6:41 PM

Share

ಬೆಂಗಳೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿನ ತೀವ್ರತೆ ಹೆಚ್ಚಾಗಿ ಅದೆಷ್ಟೋ ಜನ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಗಲು ಇರುಳು ಎನ್ನದೇ ದಿನವಿಡೀ ಕೆಲಸ ಮಾಡಿ ಕೊವಿಡ್ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಕೊವಿಡ್ ಕರ್ತವ್ಯದಲ್ಲಿದ್ದ ಅವಧಿಯಲ್ಲಿ ಮೃತಪಟ್ಟ ಸರ್ಕಾರಿ ನೌಕರರ‌ ಕುಟುಂಬಕ್ಕೆ ಮೂವತ್ತು ಲಕ್ಷ ರೂಪಾಯಿ ವಿಮಾ ಮೊತ್ತ ಪರಿಹಾರ ನೀಡಲಾಗುತ್ತದೆ. ಈ ಕುರಿತಂತೆ ಕೊವಿಡ್ ಕರ್ತವ್ಯ ನಿರತ ಅನುದಾನಿತ ಶಾಲಾ ಶಿಕ್ಷಕರು ಕೂಡಾ ವಿಮಾ ವ್ಯಾಪ್ತಿಗೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 3 ಡ್ರೋಣ್​ಗಳ ಮೂಲಕ ಸ್ಯಾನಿಟೈಸೇಶನ್

ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಳೆಯಿಂದ 10 ದಿನಗಳ ಕಾಲ 3 ಡ್ರೋಣ್​ಗಳ ಮೂಲಕ ಸ್ಯಾನಿಟೈಸೇಶನ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಂಸದ ಪಿ.ಸಿ. ಮೋಹನ್ ಸ್ವಂತ ವೆಚ್ಚದಲ್ಲಿ ಚೆನ್ನೈಯಿಂದ ಡ್ರೋಣ್​ಗಳನ್ನು ತರಿಸಿದ್ದು, ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ.

ಇಡೀ ದೇಶ ಕೊವಿಡ್ ಎದುರಿಸುತ್ತಿರುವ ಸಮಯದಲ್ಲಿ ರಾಜ್ಯದಲ್ಲಿ ಡ್ರೋಣ್ ಮೂಲಕ ಸ್ಯಾನಿಟೈಸೇಶನ್ ಮಾಡಲಾಗುತ್ತಿದೆ. ಗರುಡಾ ಏರೋಸ್ಪೇಸ್ ಸಂಸ್ಥೆ ಉಚಿತವಾಗಿ ಡ್ರೋಣ್ ಮೂಲಕ ಸ್ಯಾನಿಟೈಸ್ ಮಾಡುವ ಕಾರ್ಯಕ್ಕೆ ಇಳಿದಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ. ಲಸಿಕೆ ಪೂರೈಕೆ ಆಗದ ಕಾರಣ ನಾಳೆಯಿಂದ ಲಸಿಕೆ ನೀಡಲ್ಲ. ನಾಳೆಯಿಂದ ಕೊರೊನಾ ವ್ಯಾಕ್ಸಿನ್ ನೀಡಿಕೆ ಆರಂಭ ಆಗುತ್ತಿಲ್ಲ. ಲಸಿಕೆ ಸಿಗದ ಕಾರಣ ವಿಳಂಬ ಆಗ್ತಿದೆ, ಇದು ವೈಫಲ್ಯ ಅಲ್ಲ. ಲಸಿಕೆ ಸಿಕ್ಕಿದ ಕೂಡಲೇ ಲಸಿಕೆ ನೀಡಿಕೆ ಆರಂಭ ಆಗುತ್ತದೆ. ಇದರಲ್ಲಿ ಅನಗತ್ಯವಾಗಿ ಪ್ರಧಾನಿ ಹೆಸರು ತರೋದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೆಂಟ್ರಲ್​ನಲ್ಲಿ ನಾಳೆಯಿಂದ ಡ್ರೋಣ್ ಮೂಲಕ ಸ್ಯಾನಿಟೈಸೇಶನ್; ಸಂಸದ ಪಿ ಸಿ ಮೋಹನ್ ಸ್ವಂತ ವೆಚ್ಚದಲ್ಲಿ ಡ್ರೋಣ್ ಖರೀದಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?