AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಮಾರ್ಚ್​ ಒಳಗಾಗಿ ಸರ್ಕಾರ ಪ್ರಕಟಿಸಬೇಕು: ಜಯಮೃತ್ಯುಂಜಯ ಸ್ವಾಮೀಜಿ

ಕೋವಿಡ್​ ಪಿಡುಗಿನ ಹಿನ್ನೆಲೆಯಲ್ಲಿ ಸಮುದಾಯದ ಜನ ಮೌನವಾಗಿದ್ದರು ಆದರೆ, ನಮ್ಮ ಮೌನವನ್ನು ಸರ್ಕಾರ ಅಪಾರ್ಥ ಮಾಡಿಕೊಂಡಿರುವಂತಿದೆ ಎಂದು ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರಿಗೆ ಹೇಳಿದ ಜಯಮೃತ್ಯುಂಜಯ ಸ್ವಾಮೀಜಿ ಅವರು ನಾಳೆ (ಬುಧವಾರ) ನಗರದಲ್ಲಿ ಒಂದು ಕಾರ್ಯಕಾರಿಣಿ ಸಭೆಯನ್ನು ನಗರದಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಮಾರ್ಚ್​ ಒಳಗಾಗಿ ಸರ್ಕಾರ ಪ್ರಕಟಿಸಬೇಕು: ಜಯಮೃತ್ಯುಂಜಯ ಸ್ವಾಮೀಜಿ
ಜಯ ಮೃತ್ಯುಂಜಯ ಸ್ವಾಮೀಜಿ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 01, 2022 | 9:11 PM

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ (2A Reservation) ನೀಡಬೇಕೆಂದು ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ (Jaya Mruthiyunjaya Swamiji) ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ಕನ್ನಡಿಗರಿಗೆ ಚೆನ್ನಾಗಿ ನೆನಪಿದೆ. ಕೋವಿಡ್​ (Covid) ಪಿಡುಗಿನ ಹಿನ್ನೆಲೆಯಲ್ಲಿ ಸಮುದಾಯದ ಜನ ಮೌನವಾಗಿದ್ದರು ಆದರೆ, ನಮ್ಮ ಮೌನವನ್ನು ಸರ್ಕಾರ ಅಪಾರ್ಥ ಮಾಡಿಕೊಂಡಿರುವಂತಿದೆ ಎಂದು ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರಿಗೆ ಹೇಳಿದ ಜಯಮೃತ್ಯುಂಜಯ ಸ್ವಾಮೀಜಿ ಅವರು ನಾಳೆ (ಬುಧವಾರ) ನಗರದಲ್ಲಿ ಒಂದು ಕಾರ್ಯಕಾರಿಣಿ ಸಭೆಯನ್ನು ನಗರದಲ್ಲಿ ನಡೆಸಲಾಗುವುದು ಎಂದು ಹೇಳಿದರು.

‘ಒಂದು ವರ್ಷದಿಂದ 2ಎ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದು ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಪಂಚಮಸಾಲಿ ಸಮುದಾಯಕ್ಕೆ ಚೆನ್ನಾಗಿ ಗೊತ್ತಿದೆ. ನಾವು ಪ್ರತಿಬಾರಿ ಸಂಪರ್ಕಿಸಿದಾಗಲೂ ಸರ್ಕಾರ ಸಮಯ ಕೇಳುತ್ತದೆ. ಸರ್ಕಾರಕ್ಕೆ ಅನೇಕ ಸಲ ನಾವು ಗಡುವು ನೀಡಿದ್ದೇವೆ. ಅದರೆ ನಮ್ಮ ಬೇಡಿಕೆ ಕಾರ್ಯರೂಪಕ್ಕೆ ಮಾತ್ರ ಬರುತ್ತಿಲ್ಲ. ನಾವು ನೀಡಿದ ಪ್ರತಿ ಗಡುವಿನ ಉಲ್ಲಂಘನೆಯಾಗುತ್ತಿದೆ. ಮಾರ್ಚ್​ ಒಳಗಾಗಿ ನಾವು ಕೋರಿರುವ ಮೀಸಲಾತಿ ಪ್ರಕಟಿಸಬೇಕು ಅಂತ ಸರ್ಕಾರಕ್ಕೆ ಹೇಳಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಮೀಸಲಾತಿ ಘೋಷಿಸುತ್ತಾರೆ ಎಂಬ ಭರವಸೆ ನಮಗೆ ಇದೆ,’ ಎಂದು ಜಯಮೃತ್ಯುಂಜಯ ಸ್ವಾಮೀಜಿ ಬೆಳಗಾವಿಯಲ್ಲಿ ಹೇಳಿದರು.

‘ಕೊವಿಡ್​ ಹಿನ್ನೆಲೆಯಲ್ಲಿ ನಮ್ಮ ಹೋರಾಟಕ್ಕೆ ತಡೆಯೊಡ್ಡಿದ್ದು ನಿಜ, ಆದರೆ ಅದನ್ನು ಸರ್ಕಾರ ನಾವು ಸುಮ್ಮನಾಗಿದ್ದೇವೆ ಎಂದು ಭಾವಿಸಬಾರದು. ನಮ್ಮ ಮುಂದಿನ ಕಾರ್ಯ ಯೋಜನೆಯನ್ನು ನಾಳಿನ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸುತ್ತೇವೆ,’ ಎಂದು ಸ್ವಾಮೀಜಿ ಹೇಳಿದರು.

ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್, ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಸ್ವಾಮೀಜಿ ಅವರು ಸಾಮಾಜಿಕ ನ್ಯಾಯ ದೃಷ್ಟಿಯಿಂದ ಪಂಚಮಸಾಲಿ ಸಮುದಾಯಕ್ಕೂ ಒಂದು ಸ್ಥಾನ ಮೀಸಲಿಡಬೇಕೆಂದು ಹೇಳಿದರು. ಬೆಳಗಾವಿ ಪಾಲಿಕೆಯ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿ ಕಲ್ಪಿಸಲಾಗಿದೆ. ನಮ್ಮ ಸಮುದಾಯಕ್ಕೂ ಅವಕಾಶ ನೀಡಬೇಕೆಂದು ಬಿ ಜೆ ಪಿ ಯ ವರಿಷ್ಠರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ:  Belagavi: ರಾಜಕೀಯವಾಗಿ ಸೂಕ್ಷ್ಮವಾಗಿರುವ ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಕಮಲ ಶಾಸಕರ ಕರಾಮತ್ತು?

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್