AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಡುತ್ತಿಲ್ಲ; ಆರೋಗ್ಯ ಸಚಿವ ಡಾ.ಸುಧಾಕರ್

ಇದರಲ್ಲೂ ಅನಗತ್ಯವಾಗಿ ರಾಜಕಾರಣ ಮಾಡಬೇಡಿ. ವಿಪಕ್ಷ ನಾಯಕರು ಕೇವಲ ಮಾತಿನಲ್ಲಿ ಮಾತ್ರ ಸಹಕರಿಸದೇ, ಕೃತಿಯಲ್ಲೂ ನಮ್ಮ ಜತೆ ಸಹಕಾರ ನೀಡಲಿ. ಇದರಲ್ಲಿ ಆಡಳಿತ ಪಕ್ಷ, ವಿಪಕ್ಷ ಅನ್ನೋದು ಇರಬಾರದು. ಒಬ್ಬ ವ್ಯಕ್ತಿ, ಒಂದು ಸರ್ಕಾರ ಹೊಡೆದೋಡಿಸಲು ಸಾಧ್ಯವಿಲ್ಲ; ಸಚಿವ ಡಾ.ಸುಧಾಕರ್

ಸರ್ಕಾರ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಡುತ್ತಿಲ್ಲ; ಆರೋಗ್ಯ ಸಚಿವ ಡಾ.ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
guruganesh bhat
|

Updated on: Apr 27, 2021 | 10:49 PM

Share

ಬೆಂಗಳೂರು: ರಾಜ್ಯ ಸರ್ಕಾರ ಮೃತ ಸೋಂಕಿತರ ಸಂಖ್ಯೆಯನ್ನು ಮುಚ್ಚಿಡುತ್ತಿಲ್ಲ. ಮೃತರ ಸಂಖ್ಯೆಯನ್ನು ಮುಚ್ಚಿಡುವ ಅಗತ್ಯವೂ ಇಲ್ಲ. ಎಲ್ಲ ಸತ್ಯವಾದ ಅಂಕಿ ಸಂಖ್ಯೆಯನ್ನೇ ನಾವು ನೀಡುತ್ತಿದ್ದೇವೆ. ಯಾವುದನ್ನೂ ನಾವು ಮುಚ್ಚಿಡುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.

ಇದರಲ್ಲೂ ಅನಗತ್ಯವಾಗಿ ರಾಜಕಾರಣ ಮಾಡಬೇಡಿ. ವಿಪಕ್ಷ ನಾಯಕರು ಕೇವಲ ಮಾತಿನಲ್ಲಿ ಮಾತ್ರ ಸಹಕರಿಸದೇ, ಕೃತಿಯಲ್ಲೂ ನಮ್ಮ ಜತೆ ಸಹಕಾರ ನೀಡಲಿ. ಇದರಲ್ಲಿ ಆಡಳಿತ ಪಕ್ಷ, ವಿಪಕ್ಷ ಅನ್ನೋದು ಇರಬಾರದು. ಒಬ್ಬ ವ್ಯಕ್ತಿ, ಒಂದು ಸರ್ಕಾರ ಹೊಡೆದೋಡಿಸಲು ಸಾಧ್ಯವಿಲ್ಲ. ಎಲ್ಲರೂ ಲಕ್ಷ್ಮಣ ರೇಖೆ ಹಾಕಿಕೊಂಡು ದಾಟದಿದ್ದರೆ ಮಾತ್ರ. ಕೊರೊನಾ ಸೋಂಕು ಓಡಿಸಲು ಸಾಧ್ಯ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಇಂದಿನ ಕೊರೊನಾ ಲೆಕ್ಕಾಚಾರ ಹೀಗಿದೆ

ಕರ್ನಾಟಕದಲ್ಲಿ ಮಂಗಳವಾರ (ಏಪ್ರಿಲ್ 27) ಒಟ್ಟು 31,830 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 180 ಜನರು ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 17,550 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 31,830 ಜನರಿಗೆ ಕೊರೊನಾ ದೃಢಪಡುವುದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 14,00,775ಕ್ಕೆ (14 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 180 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 14,807ಕ್ಕೆ ಮುಟ್ಟಿದೆ. ಸೋಂಕಿತರ ಪೈಕಿ 10,84,050 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,01,899 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು 17,550 ಜನರಲ್ಲಿ ಸೋಂಕು ದೃಢಪಟ್ಟಿದ್ದು, 97 ಜನರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 6,002ಕ್ಕೆ ಮುಟ್ಟಿದೆ. ಸೋಂಕಿತರ ಒಟ್ಟು ಸಂಖ್ಯೆ 6,87,751 ಮುಟ್ಟಿದೆ. ಈ ಪೈಕಿ 4,75,525 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,06,223 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 180. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 97 ಜನರು ಸಾವನ್ನಪ್ಪಿದ್ದಾರೆ. ಬಳ್ಳಾರಿ 18, ಮೈಸೂರು 9, ಕಲಬುರಗಿ 7, ರಾಮನಗರ 6, ಹಾಸನ, ಧಾರವಾಡ, ಬೀದರ್​ ಜಿಲ್ಲೆಯಲ್ಲಿ ತಲಾ ಐವರು, ವಿಜಯಪುರ 4, ತುಮಕೂರು, ಹಾವೇರಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಮೂವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ, ರಾಯಚೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

AI ಆಧಾರಿತ ಆಲ್ಗರಿದಂ ಬಳಸಿ ಸಂಗಾತಿ ಆಯ್ಕೆ, ರಾಜಕೀಯ ನಾಯಕರಿಗೆ ವೋಟು; ಏನ್ ಸ್ವಾಮಿ ಇದೆಲ್ಲಾ?

(Government is not covering up the death toll from Corona says Health Minister Dr Sudhakar)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?