Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಜನರಿಂದ ಸಿಕ್ತು ಧರ್ಮದೇಟು

ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಸಾರ್ವಜನಿಕರು ಅಧಿಕಾರಿಗೆ ಥಳಿಸಿರುವ ಘಟನೆ ಜಿಲ್ಲೆಯ ಶಹಾಪುರ ಟೋಲ್​ಗೇಟ್ ಬಳಿ ನಡೆದಿದೆ. ಸಹಾಯಕ ಇಂಜಿನಿಯರ್ ಚಿದಾನಂದ್​ ಎಂಬುವವರನ್ನು ಜನರು ಥಳಿಸಿದ್ದಾರೆ.

ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಜನರಿಂದ ಸಿಕ್ತು ಧರ್ಮದೇಟು
ಜನರಿಂದ ಅಧಿಕಾರಿ ಮೇಲೆ ಹಲ್ಲೆ
Follow us
KUSHAL V
|

Updated on: Mar 25, 2021 | 11:56 PM

ಕೊಪ್ಪಳ: ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಸಾರ್ವಜನಿಕರು ಅಧಿಕಾರಿಗೆ ಥಳಿಸಿರುವ ಘಟನೆ ಜಿಲ್ಲೆಯ ಶಹಾಪುರ ಟೋಲ್​ಗೇಟ್ ಬಳಿ ನಡೆದಿದೆ. ಸಹಾಯಕ ಇಂಜಿನಿಯರ್ ಚಿದಾನಂದ್​ ಎಂಬುವವರನ್ನು ಜನರು ಥಳಿಸಿದ್ದಾರೆ. ಚಿದಾನಂದ್ ಜಿಲ್ಲೆಯ ಗಂಗಾವತಿ ವಿಭಾಗದ​ ಗ್ರಾಮೀಣಾಭಿವೃದ್ಧಿ ಕುಡಿವ ನೀರು ಸರಬರಾಜು ಇಲಾಖೆಯಲ್ಲಿ AE ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟೋಲ್​ ಕಟ್ಟಲ್ಲ ಎಂದಿದ್ದಕ್ಕೆ ಮಾತಿಗೆ ಮಾತು ಬೆಳೆದು ನೆರೆದಿದ್ದ ಜನರು ಅಧಿಕಾರಿಯನ್ನು ಥಳಿಸಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

KPL TOLL ASSAULT 1

ಅಧಿಕಾರಿ ಜೊತೆ ಜನರ ವಾಗ್ವಾದ

KPL TOLL ASSAULT 2

ಅಧಿಕಾರಿಗೆ ಸ್ಥಳೀಯರಿಂದ ಥಳಿತ

KPL TOLL ASSAULT 3

ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಜನರು

ಭದ್ರಾ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಭದ್ರಾ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಟೋಪೆನಹಳ್ಳಿಯಲ್ಲಿ ನಡೆದಿದೆ. ಟೋಪೆನಹಳ್ಳಿ ಬಳಿ 16 ವರ್ಷದ ವಿದ್ಯಾರ್ಥಿ ದೀಪು ನೀರುಪಾಲಾಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಂದ ಹಾಗೆ, ಮೃತ ಬಾಲಕ ದೀಪು ಜಿಲ್ಲೆಯ ಹುಚ್ಚವನಳ್ಳಿಯ ನಿವಾಸಿ.

ದೇವರ ಕಾರ್ಯಕ್ಕಾಗಿ ಕುಟುಂಬಸ್ಥರ ಜೊತೆ ತೆರಳಿದ್ದ ದೀಪು ಸ್ನೇಹಿತನ ಒಟ್ಟಿಗೆ ಈಜಲು ತೆರಳಿದ್ದ ವೇಳೆ ನೀರುಪಾಲಾಗಿದ್ದಾನೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

HVR SWIMMING POOL 2

ಈಜುಕೊಳದಲ್ಲಿ ಮುಳುಗಿ ಬಾಲಕ ಸಾವು

ಈಜು ಬಾರದೇ ಈಜುಕೊಳದಲ್ಲಿ ಮುಳುಗಿ ಬಾಲಕ ಸಾವು ಈಜು ಬಾರದೇ ಈಜುಕೊಳದಲ್ಲಿ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ್ದಾನೆ. ಹಾವೇರಿಯ ಜಿ.ಹೆಚ್‌.ಕಾಲೇಜಿನ ಗುರುಕೃಪಾ ಈಜುಕೊಳದಲ್ಲಿ ಘಟನೆ ನಡೆದಿದೆ. ಈಜುಕೊಳದಲ್ಲಿ ಮುಳುಗಿ ಮಯೂರ್​ ಶೆಟ್ಟಿ(17) ಅಸುನೀಗಿದ್ದಾನೆ.

ಸ್ನೇಹಿತರ ಜೊತೆ ಈಜಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈಜುಕೊಳದಲ್ಲಿ ಯಾವುದೇ ಮುಂಜಾಗ್ರತಾ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದೆ. ಹಾವೇರಿ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಎತ್ತಿನ ಬಂಡಿಗೆ ಬೈಕ್​ ಡಿಕ್ಕಿ: ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಸಾವು ಎತ್ತಿನ ಬಂಡಿಗೆ ಬೈಕ್​ ಡಿಕ್ಕಿಯಾಗಿ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ತಾಲೂಕಿನ ಅವರಾದ್ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಿತ್ತಾಪುರ ತಾಲೂಕಿನ ಸಾತನೂರು ನಿವಾಸಿ ಕನ್ಯಾಕುಮಾರಿ ಮಾಡಗಿ(27) ದುರ್ಮರಣ ಹೊಂದಿದ್ದಾರೆ.

KLB DOCTORS PROTEST 2

ಕನ್ಯಾಕುಮಾರಿ ಮಾಡಗಿ

ಕೆಲಸದ ಒತ್ತಡದಿಂದಲೇ ಕನ್ಯಾಕುಮಾರಿಗೆ ಅಪಘಾತವಾಗಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂದೆ ಶವವಿಟ್ಟು ಮೃತ ಮಹಿಳೆಯ ಕುಟುಂಬದವರು ಪ್ರತಿಭಟನೆ ನಡೆಸಿದರು. ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಧರಣಿ ನಡೆಸಿದರು. ಕನ್ಯಾಕುಮಾರಿ ಡೋಂಗರಗಾಂವ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಆಗಿ ಕೆಲಸ ಮಾಡುತ್ತಿದ್ದರು.

KLB DOCTORS PROTEST 3

ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಧರಣಿ

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ