AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಜನರಿಂದ ಸಿಕ್ತು ಧರ್ಮದೇಟು

ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಸಾರ್ವಜನಿಕರು ಅಧಿಕಾರಿಗೆ ಥಳಿಸಿರುವ ಘಟನೆ ಜಿಲ್ಲೆಯ ಶಹಾಪುರ ಟೋಲ್​ಗೇಟ್ ಬಳಿ ನಡೆದಿದೆ. ಸಹಾಯಕ ಇಂಜಿನಿಯರ್ ಚಿದಾನಂದ್​ ಎಂಬುವವರನ್ನು ಜನರು ಥಳಿಸಿದ್ದಾರೆ.

ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಜನರಿಂದ ಸಿಕ್ತು ಧರ್ಮದೇಟು
ಜನರಿಂದ ಅಧಿಕಾರಿ ಮೇಲೆ ಹಲ್ಲೆ
KUSHAL V
|

Updated on: Mar 25, 2021 | 11:56 PM

Share

ಕೊಪ್ಪಳ: ನಾನು ಸರ್ಕಾರಿ ಅಧಿಕಾರಿ.. ಟೋಲ್ ಕಟ್ಟಲ್ಲ ಎಂದಿದ್ದಕ್ಕೆ ಸಾರ್ವಜನಿಕರು ಅಧಿಕಾರಿಗೆ ಥಳಿಸಿರುವ ಘಟನೆ ಜಿಲ್ಲೆಯ ಶಹಾಪುರ ಟೋಲ್​ಗೇಟ್ ಬಳಿ ನಡೆದಿದೆ. ಸಹಾಯಕ ಇಂಜಿನಿಯರ್ ಚಿದಾನಂದ್​ ಎಂಬುವವರನ್ನು ಜನರು ಥಳಿಸಿದ್ದಾರೆ. ಚಿದಾನಂದ್ ಜಿಲ್ಲೆಯ ಗಂಗಾವತಿ ವಿಭಾಗದ​ ಗ್ರಾಮೀಣಾಭಿವೃದ್ಧಿ ಕುಡಿವ ನೀರು ಸರಬರಾಜು ಇಲಾಖೆಯಲ್ಲಿ AE ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟೋಲ್​ ಕಟ್ಟಲ್ಲ ಎಂದಿದ್ದಕ್ಕೆ ಮಾತಿಗೆ ಮಾತು ಬೆಳೆದು ನೆರೆದಿದ್ದ ಜನರು ಅಧಿಕಾರಿಯನ್ನು ಥಳಿಸಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

KPL TOLL ASSAULT 1

ಅಧಿಕಾರಿ ಜೊತೆ ಜನರ ವಾಗ್ವಾದ

KPL TOLL ASSAULT 2

ಅಧಿಕಾರಿಗೆ ಸ್ಥಳೀಯರಿಂದ ಥಳಿತ

KPL TOLL ASSAULT 3

ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಜನರು

ಭದ್ರಾ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಭದ್ರಾ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಟೋಪೆನಹಳ್ಳಿಯಲ್ಲಿ ನಡೆದಿದೆ. ಟೋಪೆನಹಳ್ಳಿ ಬಳಿ 16 ವರ್ಷದ ವಿದ್ಯಾರ್ಥಿ ದೀಪು ನೀರುಪಾಲಾಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಂದ ಹಾಗೆ, ಮೃತ ಬಾಲಕ ದೀಪು ಜಿಲ್ಲೆಯ ಹುಚ್ಚವನಳ್ಳಿಯ ನಿವಾಸಿ.

ದೇವರ ಕಾರ್ಯಕ್ಕಾಗಿ ಕುಟುಂಬಸ್ಥರ ಜೊತೆ ತೆರಳಿದ್ದ ದೀಪು ಸ್ನೇಹಿತನ ಒಟ್ಟಿಗೆ ಈಜಲು ತೆರಳಿದ್ದ ವೇಳೆ ನೀರುಪಾಲಾಗಿದ್ದಾನೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

HVR SWIMMING POOL 2

ಈಜುಕೊಳದಲ್ಲಿ ಮುಳುಗಿ ಬಾಲಕ ಸಾವು

ಈಜು ಬಾರದೇ ಈಜುಕೊಳದಲ್ಲಿ ಮುಳುಗಿ ಬಾಲಕ ಸಾವು ಈಜು ಬಾರದೇ ಈಜುಕೊಳದಲ್ಲಿ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ್ದಾನೆ. ಹಾವೇರಿಯ ಜಿ.ಹೆಚ್‌.ಕಾಲೇಜಿನ ಗುರುಕೃಪಾ ಈಜುಕೊಳದಲ್ಲಿ ಘಟನೆ ನಡೆದಿದೆ. ಈಜುಕೊಳದಲ್ಲಿ ಮುಳುಗಿ ಮಯೂರ್​ ಶೆಟ್ಟಿ(17) ಅಸುನೀಗಿದ್ದಾನೆ.

ಸ್ನೇಹಿತರ ಜೊತೆ ಈಜಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈಜುಕೊಳದಲ್ಲಿ ಯಾವುದೇ ಮುಂಜಾಗ್ರತಾ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದೆ. ಹಾವೇರಿ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಎತ್ತಿನ ಬಂಡಿಗೆ ಬೈಕ್​ ಡಿಕ್ಕಿ: ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಸಾವು ಎತ್ತಿನ ಬಂಡಿಗೆ ಬೈಕ್​ ಡಿಕ್ಕಿಯಾಗಿ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ತಾಲೂಕಿನ ಅವರಾದ್ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಿತ್ತಾಪುರ ತಾಲೂಕಿನ ಸಾತನೂರು ನಿವಾಸಿ ಕನ್ಯಾಕುಮಾರಿ ಮಾಡಗಿ(27) ದುರ್ಮರಣ ಹೊಂದಿದ್ದಾರೆ.

KLB DOCTORS PROTEST 2

ಕನ್ಯಾಕುಮಾರಿ ಮಾಡಗಿ

ಕೆಲಸದ ಒತ್ತಡದಿಂದಲೇ ಕನ್ಯಾಕುಮಾರಿಗೆ ಅಪಘಾತವಾಗಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂದೆ ಶವವಿಟ್ಟು ಮೃತ ಮಹಿಳೆಯ ಕುಟುಂಬದವರು ಪ್ರತಿಭಟನೆ ನಡೆಸಿದರು. ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಧರಣಿ ನಡೆಸಿದರು. ಕನ್ಯಾಕುಮಾರಿ ಡೋಂಗರಗಾಂವ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಆಗಿ ಕೆಲಸ ಮಾಡುತ್ತಿದ್ದರು.

KLB DOCTORS PROTEST 3

ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಧರಣಿ

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ