AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ

ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಹಣ ಸಂದಾಯಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಜಮೆಯಾಗಿದೆ.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ
ಅನ್ನಭಾಗ್ಯ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 11, 2023 | 10:46 AM

Share

ಮೈಸೂರು: ಕಾಂಗ್ರೆಸ್​ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆ(Anna Bhagya scheme)ಯಡಿ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಆದರೆ, ಅಷ್ಟೊಂದು ಅಕ್ಕಿ ಪೂರೈಕೆಯಾಗದ ಹಿನ್ನಲೆ 5 ಕೆ.ಜಿ ಅಕ್ಕಿಯನ್ನ ನೀಡಿ, ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನಿರ್ಧರಿಸಿತ್ತು. ಅದರಂತೆ ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಸಂದಾಯವಾಗಿದೆ.

ನಿನ್ನೆ ಹೊನ್ನಮ್ಮ ಅವರ ಬ್ಯಾಂಕ್ ಖಾತೆಗೆ ಜಮಾವಣೆಯಾದ ಹಣ

ಇನ್ನು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಡೀ ಕುಟುಂಬ ಧನ್ಯವಾದ ತಿಳಿಸಿದೆ. ಒಂದು ಕಡೆ ಅಕ್ಕಿ ಸೇರಿ 20 ಕೆಜಿ ಧಾನ್ಯ ನೀಡಿದ್ದಾರೆ. ಮತ್ತೊಂದು ಕಡೆ ಹಣ ಸಹ ಬ್ಯಾಂಕ್ ಖಾತೆಗೆ ಬಂದಿದೆ. ಹಣ ನೀಡಿರುವುದರಿಂದ ಇತರ ವಸ್ತುಗಳ ಖರೀದಿಗೆ ಅನುಕೂಲವಾಗಲಿದೆ. ಮುಂದೆಯೂ ಇದೇ ರೀತಿ ಧಾನ್ಯದ ಜೊತೆ ಹಣ ನೀಡಿದರೆ ಅನುಕೂಲವಾಗಲಿದೆ ಎಂದು ಫಲಾನುಭವಿ ಯೋಗೇಶ್ವರ ಹೇಳಿದರು.

ಇದನ್ನೂ ಓದಿ:ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದರು. ಇದೇ ವೇಳೆ ಯೋಜನೆಯ ಲೋಗೋವನ್ನು ಬಿಡುಗಡೆ ಮಾಡಿದ್ದರು. ನಂತರ ರಾಜ್ಯದ ಎಲ್ಲಾ ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮೆಯಾಗಲಿದೆ. ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:46 am, Tue, 11 July 23

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು