AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ

ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಹಣ ಸಂದಾಯಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಜಮೆಯಾಗಿದೆ.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ
ಅನ್ನಭಾಗ್ಯ
ರಾಮ್​, ಮೈಸೂರು
| Edited By: |

Updated on:Jul 11, 2023 | 10:46 AM

Share

ಮೈಸೂರು: ಕಾಂಗ್ರೆಸ್​ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆ(Anna Bhagya scheme)ಯಡಿ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಆದರೆ, ಅಷ್ಟೊಂದು ಅಕ್ಕಿ ಪೂರೈಕೆಯಾಗದ ಹಿನ್ನಲೆ 5 ಕೆ.ಜಿ ಅಕ್ಕಿಯನ್ನ ನೀಡಿ, ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನಿರ್ಧರಿಸಿತ್ತು. ಅದರಂತೆ ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಸಂದಾಯವಾಗಿದೆ.

ನಿನ್ನೆ ಹೊನ್ನಮ್ಮ ಅವರ ಬ್ಯಾಂಕ್ ಖಾತೆಗೆ ಜಮಾವಣೆಯಾದ ಹಣ

ಇನ್ನು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಡೀ ಕುಟುಂಬ ಧನ್ಯವಾದ ತಿಳಿಸಿದೆ. ಒಂದು ಕಡೆ ಅಕ್ಕಿ ಸೇರಿ 20 ಕೆಜಿ ಧಾನ್ಯ ನೀಡಿದ್ದಾರೆ. ಮತ್ತೊಂದು ಕಡೆ ಹಣ ಸಹ ಬ್ಯಾಂಕ್ ಖಾತೆಗೆ ಬಂದಿದೆ. ಹಣ ನೀಡಿರುವುದರಿಂದ ಇತರ ವಸ್ತುಗಳ ಖರೀದಿಗೆ ಅನುಕೂಲವಾಗಲಿದೆ. ಮುಂದೆಯೂ ಇದೇ ರೀತಿ ಧಾನ್ಯದ ಜೊತೆ ಹಣ ನೀಡಿದರೆ ಅನುಕೂಲವಾಗಲಿದೆ ಎಂದು ಫಲಾನುಭವಿ ಯೋಗೇಶ್ವರ ಹೇಳಿದರು.

ಇದನ್ನೂ ಓದಿ:ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದರು. ಇದೇ ವೇಳೆ ಯೋಜನೆಯ ಲೋಗೋವನ್ನು ಬಿಡುಗಡೆ ಮಾಡಿದ್ದರು. ನಂತರ ರಾಜ್ಯದ ಎಲ್ಲಾ ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮೆಯಾಗಲಿದೆ. ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:46 am, Tue, 11 July 23

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ