AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ

ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಹಣ ಸಂದಾಯಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಜಮೆಯಾಗಿದೆ.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ
ಅನ್ನಭಾಗ್ಯ
ರಾಮ್​, ಮೈಸೂರು
| Edited By: |

Updated on:Jul 11, 2023 | 10:46 AM

Share

ಮೈಸೂರು: ಕಾಂಗ್ರೆಸ್​ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆ(Anna Bhagya scheme)ಯಡಿ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಆದರೆ, ಅಷ್ಟೊಂದು ಅಕ್ಕಿ ಪೂರೈಕೆಯಾಗದ ಹಿನ್ನಲೆ 5 ಕೆ.ಜಿ ಅಕ್ಕಿಯನ್ನ ನೀಡಿ, ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನಿರ್ಧರಿಸಿತ್ತು. ಅದರಂತೆ ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಸಂದಾಯವಾಗಿದೆ.

ನಿನ್ನೆ ಹೊನ್ನಮ್ಮ ಅವರ ಬ್ಯಾಂಕ್ ಖಾತೆಗೆ ಜಮಾವಣೆಯಾದ ಹಣ

ಇನ್ನು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಡೀ ಕುಟುಂಬ ಧನ್ಯವಾದ ತಿಳಿಸಿದೆ. ಒಂದು ಕಡೆ ಅಕ್ಕಿ ಸೇರಿ 20 ಕೆಜಿ ಧಾನ್ಯ ನೀಡಿದ್ದಾರೆ. ಮತ್ತೊಂದು ಕಡೆ ಹಣ ಸಹ ಬ್ಯಾಂಕ್ ಖಾತೆಗೆ ಬಂದಿದೆ. ಹಣ ನೀಡಿರುವುದರಿಂದ ಇತರ ವಸ್ತುಗಳ ಖರೀದಿಗೆ ಅನುಕೂಲವಾಗಲಿದೆ. ಮುಂದೆಯೂ ಇದೇ ರೀತಿ ಧಾನ್ಯದ ಜೊತೆ ಹಣ ನೀಡಿದರೆ ಅನುಕೂಲವಾಗಲಿದೆ ಎಂದು ಫಲಾನುಭವಿ ಯೋಗೇಶ್ವರ ಹೇಳಿದರು.

ಇದನ್ನೂ ಓದಿ:ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದರು. ಇದೇ ವೇಳೆ ಯೋಜನೆಯ ಲೋಗೋವನ್ನು ಬಿಡುಗಡೆ ಮಾಡಿದ್ದರು. ನಂತರ ರಾಜ್ಯದ ಎಲ್ಲಾ ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮೆಯಾಗಲಿದೆ. ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:46 am, Tue, 11 July 23

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ