AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ

ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಹಣ ಸಂದಾಯಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಜಮೆಯಾಗಿದೆ.

ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ
ಅನ್ನಭಾಗ್ಯ
ರಾಮ್​, ಮೈಸೂರು
| Edited By: |

Updated on:Jul 11, 2023 | 10:46 AM

Share

ಮೈಸೂರು: ಕಾಂಗ್ರೆಸ್​ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆ(Anna Bhagya scheme)ಯಡಿ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಆದರೆ, ಅಷ್ಟೊಂದು ಅಕ್ಕಿ ಪೂರೈಕೆಯಾಗದ ಹಿನ್ನಲೆ 5 ಕೆ.ಜಿ ಅಕ್ಕಿಯನ್ನ ನೀಡಿ, ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನಿರ್ಧರಿಸಿತ್ತು. ಅದರಂತೆ ನಿನ್ನೆ(ಜು.10) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದಕ್ಕೆ ಚಾಲನೆ ನೀಡಿದ್ದರು. ಅದರಂತೆ ಚಾಲನೆ ನೀಡಿದ ದಿನವೇ ಮೈಸೂರು ಜಿಲ್ಲೆಯ ಕನಕಗಿರಿಯ ನಾಲ್ವರು ಸದಸ್ಯರಿರುವ ಹೊನ್ನಮ್ಮ ಅವರ ಕುಟುಂಬಕ್ಕೆ ಅನ್ನಭಾಗ್ಯದ ಹಣ680 ರೂಪಾಯಿ ಸಂದಾಯವಾಗಿದೆ.

ನಿನ್ನೆ ಹೊನ್ನಮ್ಮ ಅವರ ಬ್ಯಾಂಕ್ ಖಾತೆಗೆ ಜಮಾವಣೆಯಾದ ಹಣ

ಇನ್ನು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಡೀ ಕುಟುಂಬ ಧನ್ಯವಾದ ತಿಳಿಸಿದೆ. ಒಂದು ಕಡೆ ಅಕ್ಕಿ ಸೇರಿ 20 ಕೆಜಿ ಧಾನ್ಯ ನೀಡಿದ್ದಾರೆ. ಮತ್ತೊಂದು ಕಡೆ ಹಣ ಸಹ ಬ್ಯಾಂಕ್ ಖಾತೆಗೆ ಬಂದಿದೆ. ಹಣ ನೀಡಿರುವುದರಿಂದ ಇತರ ವಸ್ತುಗಳ ಖರೀದಿಗೆ ಅನುಕೂಲವಾಗಲಿದೆ. ಮುಂದೆಯೂ ಇದೇ ರೀತಿ ಧಾನ್ಯದ ಜೊತೆ ಹಣ ನೀಡಿದರೆ ಅನುಕೂಲವಾಗಲಿದೆ ಎಂದು ಫಲಾನುಭವಿ ಯೋಗೇಶ್ವರ ಹೇಳಿದರು.

ಇದನ್ನೂ ಓದಿ:ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಹಣ ಹಾಕುವ ಮೂಲಕ ಚಾಲನೆ ನೀಡಿದ್ದರು. ಇದೇ ವೇಳೆ ಯೋಜನೆಯ ಲೋಗೋವನ್ನು ಬಿಡುಗಡೆ ಮಾಡಿದ್ದರು. ನಂತರ ರಾಜ್ಯದ ಎಲ್ಲಾ ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮೆಯಾಗಲಿದೆ. ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:46 am, Tue, 11 July 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ