AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣ್ಯರಿಂದ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆಗಿಲ್ಲವಂತೆ! ಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲೇನಿದೆ?

ಬೆಂಗಳೂರು:ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರದಿಂದ ಹೇರಲಾಗಿದ್ದ ಮಾರ್ಗಸೂಚಿ ನಿಯಮಗಳು ಸಮಾಜದ ಗಣ್ಯರಿಂದ ಉಲ್ಲಂಘನೆ ಆಗಿದೆ ಎಂಬುದರ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದ್ದ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಇಂದು ವಿವರಣೆ ನೀಡಿದೆ. ಮೊದಲನೆಯದಾಗಿ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸೇರಿ ಹಲವಾರು ರಾಜಕಾರಣಿಗಳ ಭೇಟಿಗೆ ಅವಕಾಶ ನೀಡಿದ ತಾರತಮ್ಯದ ಬಗ್ಗೆ ಹೈಕೋರ್ಟಿಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರ, ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಭೇಟಿಗೆ ನಿಷೇಧವಿರಲಿಲ್ಲ. ಬದಲಿಗೆ ದೇವಸ್ಥಾನದಲ್ಲಿ ಜನದಟ್ಟಣೆ ಉಂಟಾಗಬಾರದೆಂದು ನಿರ್ಬಂಧ […]

ಗಣ್ಯರಿಂದ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆಗಿಲ್ಲವಂತೆ! ಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲೇನಿದೆ?
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​
|

Updated on: Aug 11, 2020 | 6:09 PM

Share

ಬೆಂಗಳೂರು:ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರದಿಂದ ಹೇರಲಾಗಿದ್ದ ಮಾರ್ಗಸೂಚಿ ನಿಯಮಗಳು ಸಮಾಜದ ಗಣ್ಯರಿಂದ ಉಲ್ಲಂಘನೆ ಆಗಿದೆ ಎಂಬುದರ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದ್ದ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಇಂದು ವಿವರಣೆ ನೀಡಿದೆ.

ಮೊದಲನೆಯದಾಗಿ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸೇರಿ ಹಲವಾರು ರಾಜಕಾರಣಿಗಳ ಭೇಟಿಗೆ ಅವಕಾಶ ನೀಡಿದ ತಾರತಮ್ಯದ ಬಗ್ಗೆ ಹೈಕೋರ್ಟಿಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರ, ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಭೇಟಿಗೆ ನಿಷೇಧವಿರಲಿಲ್ಲ. ಬದಲಿಗೆ ದೇವಸ್ಥಾನದಲ್ಲಿ ಜನದಟ್ಟಣೆ ಉಂಟಾಗಬಾರದೆಂದು ನಿರ್ಬಂಧ ವಿಧಿಸಲಾಗಿತ್ತು ಎಂದು ಹೇಳಿದೆ. ಜೊತೆಗೆ ಶಿಷ್ಟಾಚಾರದಂತೆ ಗ್ರಾಮಸ್ಥರು ಹಾಗೂ ಗಣ್ಯರಿಗೂ ಸಹ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

ಎರಡನೆಯದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಗಳ ನಿಶ್ಚಿತಾರ್ಥದ ವೇಳೆ ಅಧಿಕ ಜನ ಸೇರಿದ್ದರು ಎಂಬುದರ ಬಗ್ಗೆ ಮಾಹಿತಿ ನೀಡಿರುವ ಸರಕಾರ, ನಿಶ್ಚಿತಾರ್ಥದಲ್ಲಿ ಕೇವಲ 20ರಿಂದ 25 ಜನ ಮಾತ್ರ ಭಾಗಿಯಾಗಿದ್ದರು. ಹಾಗಾಗಿ ಮಾರ್ಗಸೂಚಿ ಉಲ್ಲಂಘನೆ ಆಗಿಲ್ಲವೆಂದು ವಿವರಣೆ ನೀಡಿದೆ.

ಇನ್ನು ಸಚಿವ ಡಾ. ಕೆ. ಸುಧಾಕರ್ ಈಜುಕೊಳದಲ್ಲಿ ಇದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿ, ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ವಿಚಾರವಾಗಿ ವಿವರಣೆ ನೀಡಿರುವ ರಾಜ್ಯ ಸರ್ಕಾರ, ಸಚಿವ ಸುಧಾಕರ್ ಅವರ ಮನೆಯಲ್ಲಿದ್ದ ಖಾಸಗಿ ಈಜುಕೊಳವನ್ನು ಬಳಸಿದ್ದಾರೆ. ಹೀಗಾಗಿ ಮನೆಯ ಈಜುಕೊಳ ಬಳಸಲು ಮಾರ್ಗಸೂಚಿಯಲ್ಲಿ ನಿರ್ಬಂಧ ಇಲ್ಲ ಎಂದು ಸರ್ಕಾರ ತಿಳಿಸಿದೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ